Homeಫ್ಯಾಕ್ಟ್‌ಚೆಕ್ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ - ಲಸಿಕೆ...

ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ – ಲಸಿಕೆ ಹಾಕಿಸಿಕೊಳ್ಳಿ

- Advertisement -
- Advertisement -

ಯಾವುದೇ ಕೋವಿಡ್ ಲಸಿಕೆಗಳನ್ನು ಪಡೆದ ಜನರಿಗೆ ಬದುಕುಳಿಯುವ ಅವಕಾಶವಿಲ್ಲ ಎಂದು ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್ ಹೇಳಿದ್ದಾರೆ ಎಂಬ ವಾಟ್ಸಾಪ್ ಸಂದೇಶವೊದು ವೈರಲ್ ಆಗಿದೆ. ಆ ಸಂದೇಶದಲ್ಲಿ ಅವರು ಹೀಗೆ ಹೇಳಿದ್ದಾರೆ, ಹಾಗೆ ಹೇಳಿದ್ದಾರೆ ಎಂದು ವಿವಿಧ ಉಲ್ಲೇಖಗಳನ್ನು ಪ್ರಸ್ತಾಪಿಸಿದೆ. ಈ ಸುಳ್ಳು ಸಮರ್ಥನೆಯನ್ನು ಬೆಂಬಲಿಸಲು ಅವರ ಲೇಖನಕ್ಕೆ ಲೈಫ್‌ಸೈಟ್‌ನ್ಯೂಸ್‌.ಕಾಂ ಎಂಬ ಲಿಂಕ್ ಅನ್ನು ಹಂಚಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಮೊಂಟಾಗ್ನಿಯರ್ ಅವರ ವಿಕಿಪೀಡಿಯಾ ಪುಟಕ್ಕೆ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ.

ಬಹುದೊಡ್ಡ ಸುಳ್ಳು

ನೊಬೆಲ್ ಪ್ರಶಸ್ತಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, 2008 ರಲ್ಲಿ ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ (ಎಚ್‌ಐವಿ) ಆವಿಷ್ಕಾರಕ್ಕೆ ನೀಡಿದ ಕೊಡುಗೆಗಾಗಿ ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ ಅವರಿಗೆ ಪ್ರಶಸ್ತಿ ನೀಡಲಾಯಿತು. ಅಂದಿನಿಂದ ಅವರು ಹುಸಿ ವೈಜ್ಞಾನಿಕ ಭಾವನೆಗಳನ್ನು ವ್ಯಕ್ತಪಡಿಸುವುದಕ್ಕಾಗಿ ಸುದ್ದಿಯಲ್ಲಿದ್ದಾರೆ. ಕೊರೋನಾ ವೈರಸ್ ಮಾನವ ನಿರ್ಮಿತವಾಗಿದೆ ಮತ್ತು ಎಚ್‌ಐವಿಯಿಂದ ಆನುವಂಶಿಕ ವಸ್ತುಗಳನ್ನು ಒಳಗೊಂಡಿದೆ ಎಂದು ಮೊಂಟಾಗ್ನಿಯರ್ ತಪ್ಪಾಗಿ ಹೇಳಿಕೊಂಡಿದ್ದಾರೆ ಎಂದು ಫ್ರೆಂಚ್ ಮ್ಯಾಗಝೀನ್ ‘ಸೈನ್ಸ್ ಫೀಡ್‌ಬ್ಯಾಕ್’ ಕಳೆದ ವರ್ಷ ವರದಿ ಮಾಡಿದೆ.

ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್, ಸಾಮೂಹಿಕ ಕೋವಿಡ್ ಲಸಿಕಾ ಕಾರ್ಯಕ್ರಮ ‘ಸ್ವೀಕಾರಾರ್ಹವಲ್ಲ, ಅದು ತಪ್ಪು’ ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸುವ ‘ಲೈಫ್ ಸೈಟ್ ನ್ಯೂಸ್’ ಲೇಖನವನ್ನು ಅಲ್ಟ್ ನ್ಯೂಸ್ ಗಮನಿಸಿದೆ ಮತ್ತು ಅದರಲ್ಲಿ ಅಂತಹ ವಿವರಣೆ ಇಲ್ಲವೇ ಇಲ್ಲ ಎಂಬುದನ್ನು ಕಂಡುಕೊಂಡಿದೆ. ಲೈಫ್ ಸೈಟ್ ನ್ಯೂಸ್ ಲೇಖನವು ಯುಎಸ್ ಮೂಲದ ಎನ್‌ಜಿಒ ರೇರ್ ಫೌಂಡೇಶನ್ ಮೇ 18 ರಂದು ಪ್ರಕಟಿಸಿದ ಲೇಖನವನ್ನು ಆಧರಿಸಿದೆ. ಈ ಲೇಖನವು ಮೊಂಟಾಗ್ನಿಯರ್ ಅವರ ಸಂದರ್ಶನದ ಎರಡು ನಿಮಿಷಗಳ ಕ್ಲಿಪ್ ಅನ್ನು ಒಳಗೊಂಡಿದೆ. ಈ ಸಂದರ್ಶನದ ಸಂಪೂರ್ಣ 11 ನಿಮಿಷಗಳ ಆವೃತ್ತಿಯನ್ನು ಫ್ರೆಂಚ್ ವೆಬ್‌ಸೈಟ್ ಪ್ಲಾನೆಟ್ 360 ಗೆ ಅಪ್‌ಲೋಡ್ ಮಾಡಲಾಗಿದೆ. ಲಸಿಕೆಗಳ ಕಾರಣದಿಂದಾಗಿ ಹೊಸ ಕೋವಿಡ್ ರೂಪಾಂತರಗಳನ್ನು ರಚಿಸಲಾಗಿದೆ ಎಂದು ಮೊಂಟಾಗ್ನಿಯರ್ ನಂಬಿದ್ದಾರೆ. ಎರಡು ನಿಮಿಷಗಳ ಕ್ಲಿಪ್‌ನಲ್ಲಿ, “ಸಾಮೂಹಿಕ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನೀವು ಹೇಗೆ ನೋಡುತ್ತೀರಿ?” ಎಂಬ ಪ್ರಶ್ನೆಗೆ ಉತ್ತರಿಸುತ್ತ ಮಾಂಟಾಗ್ನಿಯರ್ “ಇದು ಅಪಾರ ತಪ್ಪು, ಅಲ್ಲವೇ? ವೈಜ್ಞಾನಿಕ ದೋಷ ಮತ್ತು ವೈದ್ಯಕೀಯ ದೋಷ. ಇದು ಸ್ವೀಕಾರಾರ್ಹವಲ್ಲದ ತಪ್ಪು. ವ್ಯಾಕ್ಸಿನೇಷನ್‌ನಿಂದಾಗಿ ಇದು ರೂಪಾಂತರಗಳನ್ನು ರಚಿಸುತ್ತಿದೆ ಎಂದು ಇತಿಹಾಸ ಪುಸ್ತಕಗಳು ತೋರಿಸುತ್ತವೆ” ಎನ್ನುತ್ತಾರೆ. (ಬೋಲ್ಡ್ ಆಗಿರುವ ವಿಭಾಗವನ್ನು ವಾಟ್ಸಾಪ್ ಸಂದೇಶದಲ್ಲಿ ಸೇರಿಸಲಾಗಿದೆ.)

ಮಾಂಟಾಗ್ನಿಯರ್ ಲಸಿಕೆ ವಿರೋಧಿ ನಿಲುವಿಗೆ ಹೆಸರುವಾಸಿಯಾಗಿದ್ದಾರೆ ಎಂಬುದನ್ನು ಓದುಗರು ಗಮನಿಸಬೇಕು. ಆಲ್ಟ್ ನ್ಯೂಸ್ ಸೈನ್ಸ್‌ನ ಸಂಸ್ಥಾಪಕ ಸಂಪಾದಕರಾದ ಡಾ. ಸುಮಯ್ಯ ಶೇಖ್ ಅವರು, “ಇದು ಮೊಂಟಾಗ್ನಿಯರ್ ಹೇಳಿದ್ದಕ್ಕೆ ವಿರುದ್ಧವಾಗಿದೆ. ಲಸಿಕೆಗಳೊಂದಿಗೆ ವೈರಸ್ ಹರಡುವಿಕೆಯು ಕಡಿಮೆಯಾಗುತ್ತದೆ. ಹೀಗಾಗಿ, ಲಸಿಕೆ ಹಾಕುವ ಮೂಲಕ ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವ ಮೂಲಕ, ವೈರಸ್ ಹರಡುವುದನ್ನು ನಿಲ್ಲಿಸಲಾಗುತ್ತದೆ ಮತ್ತು ಆ ಮೂಲಕ, ಹೊಸ ರೂಪಾಂತರಗಳು ಸಮುದಾಯದಲ್ಲಿ ಹರಡಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತವೆ. ಲಸಿಕೆಗಳು ದೊಡ್ಡ ಜನಸಂಖ್ಯೆಯಲ್ಲಿ ವ್ಯಾಪಕವಾದ ಪುನರಾವರ್ತನೆಯನ್ನು ತಡೆಯುತ್ತವೆ, ಇದು ಅಂತಿಮವಾಗಿ ಹೊಸ ರೂಪಾಂತರಗಳ ರಚನೆಯನ್ನು ಕಡಿಮೆ ಮಾಡುತ್ತದೆ” ಎಂದಿದ್ದಾರೆ.

ತಪ್ಪುದಾರಿಗೆಳೆಯುವ ವಾಟ್ಸಾಪ್ ಸಂದೇಶದ ಬಗ್ಗೆ ಅಸ್ಸಾಂ ಪೊಲೀಸರು ಫೇಸ್‌ಬುಕ್‌ನಲ್ಲಿ ಎಚ್ಚರಿಕೆಯನ್ನು ಪೋಸ್ಟ್ ಮಾಡಿದ್ದಾರೆ.

ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ “ಈಗಾಗಲೇ ಲಸಿಕೆ ಹಾಕಿದವರಿಗೆ ಯಾವುದೇ ಭರವಸೆ ಇಲ್ಲ ಮತ್ತು ಸಂಭವನೀಯ ಚಿಕಿತ್ಸೆ ಇಲ್ಲ. ದೇಹಗಳನ್ನು ಸುಡಲು ನಾವು ಸಿದ್ಧರಾಗಿರಬೇಕು. ಲಸಿಕೆ ಹಾಕಿದ ಜನರು ಎರಡು ವರ್ಷಗಳಲ್ಲಿ ಸಾಯುತ್ತಾರೆ” ಎಂದು ಅವರು ಹೇಳಿಕೊಂಡಿಲ್ಲ. ಆದಾಗ್ಯೂ, ಅವರು ಈ ಹಿಂದೆ ಲಸಿಕೆ ವಿರೋಧಿ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

2010 ರಲ್ಲಿ, ಜರ್ಮನಿಯಲ್ಲಿ ನಡೆದ ಲಿಂಡೌ ನೊಬೆಲ್ ಪ್ರಶಸ್ತಿ ವಿಜೇತ ಸಭೆಯಲ್ಲಿ ಮೊಂಟಾಗ್ನಿಯರ್ ಆಘಾತಕಾರಿ ಭಾಷಣ ಮಾಡಿದರು. ವೈರಸ್ ಸೋಂಕುಗಳನ್ನು ಪತ್ತೆಹಚ್ಚಲು ಅವರು ಹೊಸ ವಿಧಾನವನ್ನು ಪ್ರಸ್ತುತಪಡಿಸಿದರು, ಅದು ಹೋಮಿಯೋಪತಿಯ ಮೂಲ ಸಿದ್ಧಾಂತಗಳಿಗೆ ಹೋಲುತ್ತದೆ. ಇದನ್ನು ದಿ ಆಸ್ಟ್ರೇಲಿಯಾ ನ್ಯೂಸ್ ವರದಿ ಮಾಡಿದೆ.
ಆಲ್ಟ್ ನ್ಯೂಸ್ ಸೈನ್ಸ್ 2018 ರಲ್ಲಿ ‘ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿ ರೂಪವೇ?’ ಎಂಬ ಲೇಖನವನ್ನು ಪ್ರಕಟಿಸಿತ್ತು, ಇದು ಆಧುನಿಕ ವೈಜ್ಞಾನಿಕ ವಿವರಣೆಯ ಪ್ರಕಾರ ಹೋಮಿಯೋಪತಿ ಔಷಧಿಗಳನ್ನು ಅವುಗಳ ಪ್ಲಾಸಿಬೊ ಪರಿಣಾಮಕ್ಕೆ ಮಾತ್ರ ಸಿಮೀತ ಎಂದು ತೀರ್ಮಾನಿಸಿದೆ.

ಒಟ್ಟಿನಲ್ಲಿ, ಲಸಿಕೆ ಕುರಿತು ಭಯ ಬೀಳಿಸುವ ವ್ಯಾಟ್ಸಾಪ್ ಸಂದೇಶ ನಂಬಬೇಡಿ, ಲಸಿಕೆ ಹಾಕಿಸಿಕೊಳ್ಳಿ, ಪ್ರತಿರೋಧಕ ಶಕ್ತಿ ಪಡೆದುಕೊಳ್ಳಿ…. ವ್ಯಾಕ್ಸಿನ್ ಕುರಿತಾದ ನಿಮ್ಮ ಪ್ರಶ್ನೆಗಳಿಗೆ ಬೆಂಗಳೂರಿನ ಬಿಎಂಸಿ 92 ಸಾಲಿನ ವೈದ್ಯರು ಉತ್ತರಿಸಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ.


ಇದನ್ನೂ ಓದಿ; 2021 ರ ಅಂತ್ಯಕ್ಕೆ ಸಂಪೂರ್ಣ ಭಾರತಕ್ಕೆ ವ್ಯಾಕ್ಸಿನ್‌: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...