Homeಮುಖಪುಟ"ಕಾಶ್ಮೀರದಲ್ಲಿ ಎಲ್ಲವೂ ಚೆನ್ನಾಗಿದೆ, ಸಹಜ ಸ್ಥಿತಿಯತ್ತ ಮರಳಿದೆ": ಗೃಹ ಸಚಿವ ಅಮಿತ್‌ ಶಾ

“ಕಾಶ್ಮೀರದಲ್ಲಿ ಎಲ್ಲವೂ ಚೆನ್ನಾಗಿದೆ, ಸಹಜ ಸ್ಥಿತಿಯತ್ತ ಮರಳಿದೆ”: ಗೃಹ ಸಚಿವ ಅಮಿತ್‌ ಶಾ

- Advertisement -
- Advertisement -

ಕಾಶ್ಮೀರದಲ್ಲಿ ಈಗ ಎಲ್ಲವೂ ಸರಿ ಹೋಗಿದೆ. ಅಲ್ಲಿನ ವಾತಾವರಣ, ಸ್ಥಿತಿ ಸಹಜಸ್ಥಿತಿಗೆ ಮರಳಿದೆ. ಶೀಘ್ರದಲ್ಲೇ ಇಂಟರ್ನೆಟ್‌ ಸೇವೆ ಮೇಲಿರುವ ನಿರ್ಬಂಧವನ್ನು ತೆಗೆದು ಹಾಕಿ, ಸೇವೆ ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಸತ್ತಿನಲ್ಲಿ ತಿಳಿಸಿದರು.

ಆಗಸ್ಟ್‌ 5ರ ನಂತರ ಪೊಲೀಸ್‌ ಫೈರಿಂಗ್‌ನಲ್ಲಿ ಒಬ್ಬೇ ಒಬ್ಬ ವ್ಯಕ್ತಿಯೂ ಕೂಡ ಮೃತಪಟ್ಟಿಲ್ಲ. ಆರ್ಟಿಕಲ್‌ 370 ರದ್ದಾದ ಬಳಿಕ ಎಲ್ಲವೂ ಸಹಜ ಸ್ಥಿತಿಗೆ ತಲುಪಿದೆ. ಪೊಲೀಸ್‌ ಫೈರಿಂಗ್‌ನಲ್ಲಿ ಒಬ್ಬೇ ಒಬ್ಬ ವ್ಯಕ್ತಿಯೂ ಸಾವನ್ನಪ್ಪಿಲ್ಲ. ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸಿ, ಸೈನಿಕರ ಮೇಲೆ ಹಲ್ಲೆ ನಡೆಸುತ್ತಿದ್ದ, ಕಲ್ಲು ತೂರಾಟಗಾರರ ಸದ್ದಡಗಿದೆ. ಈಗ ಅಲ್ಲಿ ಒಂದೇ ಕಲ್ಲು ತೂರಾಟದಂಥ ಘಟನೆ ನಡೆದಿಲ್ಲ.

ಕಳೆದ ವರ್ಷ 802ಕ್ಕೂ ಹೆಚ್ಚು ಕಲ್ಲು ತೂರಾಟ ಘಟನೆಗಳು ದಾಖಲಾಗಿದ್ದವು. ಈ ವರ್ಷದಲ್ಲಿ 544 ಘಟನೆಗಳು ನಡೆದಿರುವುದು ದಾಖಲಾಗಿದೆ ಎಂದು ಅಮಿತ್‌ ಶಾ ತಿಳಿಸಿದರು.

ಇದನ್ನೂ ಓದಿ: ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಇನ್ನು 765 ಮಂದಿ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸಲು ಮತ್ತು ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಗೃಹ ಸಚಿವಾಲಯ ವರದಿ ನೀಡಿದೆ ಎಂದು ಹೇಳಿದರು.

ಕಾಂಗ್ರೆಸ್‌ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಇಂಟರ್ನೆಟ್‌ ಸೇವೆಯನ್ನು ಯಾವಾಗ ಮರು ಸ್ಥಾಪಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾ, ಸ್ಥಳೀಯ ಆಡಳಿತ ಅದನ್ನು ನಿರ್ಧರಿಸುತ್ತೆ ಎಂದರು. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ನಿಂತಿಲ್ಲ. ಕಾಶ್ಮೀರವನ್ನು ತಮ್ಮದಾಗಿಸಿಕೊಳ್ಳಲು ಅಲ್ಲಿಯವರು ಕಾಯುತ್ತಿದ್ದಾರೆ. ಹೀಗಾಗಿ ಸ್ಥಳೀಯ ಸ್ಥಿತಿಗತಿಯನ್ನು ಆಧರಿಸಿ, ಕಾಶ್ಮೀರ ಆಡಳಿತ ಪ್ರಾಧಿಕಾರವು ಇಂಟರ್ನೆಟ್‌ ಸೇವೆ ಮರುಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಕಾಶ್ಮೀರದಲ್ಲಿ ಪೆಟ್ರೋಲ್, ಡೀಸೆಲ್, ಕೆರೋಸೇನ್, ಎಲ್‌ಪಿಜಿ, ಅಕ್ಕಿ ಸೇರಿದಂತೆ ಎಲ್ಲವೂ ಸಿಗುತ್ತಿದೆ. 22 ಲಕ್ಷ ಮೆಟ್ರಿಕ್‌ ಟನ್‌ನಷ್ಟು ಸೇಬು ಉತ್ಪಾದನೆಯಾಗುತ್ತಿದೆ. ಎಲ್ಲಾ ಲ್ಯಾಂಡ್‌ಲೈನ್‌ ಸೇವೆ ಆರಂಭವಾಗಿದೆ ಎಂದು ತಿಳಿಸಿದರು.

ಅಲ್ಲದೇ ಸ್ಥಳೀಯ ಮಟ್ಟದ ಪತ್ರಿಕೆಗಳು, ಟಿವಿ ಚಾನೆಲ್‌ಗಳು ಕೆಲಸ ನಿರ್ವಹಿಸುತ್ತಿವೆ. ಅವುಗಳ ಮೇಲೆ ನಿರ್ಬಂಧ ಹೇರಿದ್ದನ್ನು ವಾಪಸ್‌ ಪಡೆಯಲಾಗಿದೆ. ಈಗ ಯಾವುದೇ ನಿರ್ಬಂಧವಿಲ್ಲ. ಎಲ್ಲವೂ ಚೆನ್ನಾಗಿದ್ದು, ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ. ಈ ಹಿಂದೆ ಕೆಲ ಗಂಟೆಗಳವರೆಗೆ ಮಾತ್ರ ಅಂಗಡಿ ತೆರೆಯುತ್ತಿದ್ದವರು, ಈಗ ಬೆಳಗ್ಗೆಯಿಂದ ಸಾಯಂಕಾಲದವರೆಗೂ ವ್ಯಾಪಾರ ನಡೆಸುತ್ತಿದ್ದಾರೆ. ಶ್ರೀನಗರದಲ್ಲಿ ಮುಕ್ತವಾಗಿ ವ್ಯಾಪಾರ ಚಟುವಟಿಕೆಗಳು ನಡೆದಿವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...