Homeಮುಖಪುಟ"ಕಾಶ್ಮೀರದಲ್ಲಿ ಎಲ್ಲವೂ ಚೆನ್ನಾಗಿದೆ, ಸಹಜ ಸ್ಥಿತಿಯತ್ತ ಮರಳಿದೆ": ಗೃಹ ಸಚಿವ ಅಮಿತ್‌ ಶಾ

“ಕಾಶ್ಮೀರದಲ್ಲಿ ಎಲ್ಲವೂ ಚೆನ್ನಾಗಿದೆ, ಸಹಜ ಸ್ಥಿತಿಯತ್ತ ಮರಳಿದೆ”: ಗೃಹ ಸಚಿವ ಅಮಿತ್‌ ಶಾ

- Advertisement -
- Advertisement -

ಕಾಶ್ಮೀರದಲ್ಲಿ ಈಗ ಎಲ್ಲವೂ ಸರಿ ಹೋಗಿದೆ. ಅಲ್ಲಿನ ವಾತಾವರಣ, ಸ್ಥಿತಿ ಸಹಜಸ್ಥಿತಿಗೆ ಮರಳಿದೆ. ಶೀಘ್ರದಲ್ಲೇ ಇಂಟರ್ನೆಟ್‌ ಸೇವೆ ಮೇಲಿರುವ ನಿರ್ಬಂಧವನ್ನು ತೆಗೆದು ಹಾಕಿ, ಸೇವೆ ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಸತ್ತಿನಲ್ಲಿ ತಿಳಿಸಿದರು.

ಆಗಸ್ಟ್‌ 5ರ ನಂತರ ಪೊಲೀಸ್‌ ಫೈರಿಂಗ್‌ನಲ್ಲಿ ಒಬ್ಬೇ ಒಬ್ಬ ವ್ಯಕ್ತಿಯೂ ಕೂಡ ಮೃತಪಟ್ಟಿಲ್ಲ. ಆರ್ಟಿಕಲ್‌ 370 ರದ್ದಾದ ಬಳಿಕ ಎಲ್ಲವೂ ಸಹಜ ಸ್ಥಿತಿಗೆ ತಲುಪಿದೆ. ಪೊಲೀಸ್‌ ಫೈರಿಂಗ್‌ನಲ್ಲಿ ಒಬ್ಬೇ ಒಬ್ಬ ವ್ಯಕ್ತಿಯೂ ಸಾವನ್ನಪ್ಪಿಲ್ಲ. ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸಿ, ಸೈನಿಕರ ಮೇಲೆ ಹಲ್ಲೆ ನಡೆಸುತ್ತಿದ್ದ, ಕಲ್ಲು ತೂರಾಟಗಾರರ ಸದ್ದಡಗಿದೆ. ಈಗ ಅಲ್ಲಿ ಒಂದೇ ಕಲ್ಲು ತೂರಾಟದಂಥ ಘಟನೆ ನಡೆದಿಲ್ಲ.

ಕಳೆದ ವರ್ಷ 802ಕ್ಕೂ ಹೆಚ್ಚು ಕಲ್ಲು ತೂರಾಟ ಘಟನೆಗಳು ದಾಖಲಾಗಿದ್ದವು. ಈ ವರ್ಷದಲ್ಲಿ 544 ಘಟನೆಗಳು ನಡೆದಿರುವುದು ದಾಖಲಾಗಿದೆ ಎಂದು ಅಮಿತ್‌ ಶಾ ತಿಳಿಸಿದರು.

ಇದನ್ನೂ ಓದಿ: ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಇನ್ನು 765 ಮಂದಿ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸಲು ಮತ್ತು ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಗೃಹ ಸಚಿವಾಲಯ ವರದಿ ನೀಡಿದೆ ಎಂದು ಹೇಳಿದರು.

ಕಾಂಗ್ರೆಸ್‌ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಇಂಟರ್ನೆಟ್‌ ಸೇವೆಯನ್ನು ಯಾವಾಗ ಮರು ಸ್ಥಾಪಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾ, ಸ್ಥಳೀಯ ಆಡಳಿತ ಅದನ್ನು ನಿರ್ಧರಿಸುತ್ತೆ ಎಂದರು. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ನಿಂತಿಲ್ಲ. ಕಾಶ್ಮೀರವನ್ನು ತಮ್ಮದಾಗಿಸಿಕೊಳ್ಳಲು ಅಲ್ಲಿಯವರು ಕಾಯುತ್ತಿದ್ದಾರೆ. ಹೀಗಾಗಿ ಸ್ಥಳೀಯ ಸ್ಥಿತಿಗತಿಯನ್ನು ಆಧರಿಸಿ, ಕಾಶ್ಮೀರ ಆಡಳಿತ ಪ್ರಾಧಿಕಾರವು ಇಂಟರ್ನೆಟ್‌ ಸೇವೆ ಮರುಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಕಾಶ್ಮೀರದಲ್ಲಿ ಪೆಟ್ರೋಲ್, ಡೀಸೆಲ್, ಕೆರೋಸೇನ್, ಎಲ್‌ಪಿಜಿ, ಅಕ್ಕಿ ಸೇರಿದಂತೆ ಎಲ್ಲವೂ ಸಿಗುತ್ತಿದೆ. 22 ಲಕ್ಷ ಮೆಟ್ರಿಕ್‌ ಟನ್‌ನಷ್ಟು ಸೇಬು ಉತ್ಪಾದನೆಯಾಗುತ್ತಿದೆ. ಎಲ್ಲಾ ಲ್ಯಾಂಡ್‌ಲೈನ್‌ ಸೇವೆ ಆರಂಭವಾಗಿದೆ ಎಂದು ತಿಳಿಸಿದರು.

ಅಲ್ಲದೇ ಸ್ಥಳೀಯ ಮಟ್ಟದ ಪತ್ರಿಕೆಗಳು, ಟಿವಿ ಚಾನೆಲ್‌ಗಳು ಕೆಲಸ ನಿರ್ವಹಿಸುತ್ತಿವೆ. ಅವುಗಳ ಮೇಲೆ ನಿರ್ಬಂಧ ಹೇರಿದ್ದನ್ನು ವಾಪಸ್‌ ಪಡೆಯಲಾಗಿದೆ. ಈಗ ಯಾವುದೇ ನಿರ್ಬಂಧವಿಲ್ಲ. ಎಲ್ಲವೂ ಚೆನ್ನಾಗಿದ್ದು, ಕಾಶ್ಮೀರ ಸಹಜ ಸ್ಥಿತಿಗೆ ಮರಳಿದೆ. ಈ ಹಿಂದೆ ಕೆಲ ಗಂಟೆಗಳವರೆಗೆ ಮಾತ್ರ ಅಂಗಡಿ ತೆರೆಯುತ್ತಿದ್ದವರು, ಈಗ ಬೆಳಗ್ಗೆಯಿಂದ ಸಾಯಂಕಾಲದವರೆಗೂ ವ್ಯಾಪಾರ ನಡೆಸುತ್ತಿದ್ದಾರೆ. ಶ್ರೀನಗರದಲ್ಲಿ ಮುಕ್ತವಾಗಿ ವ್ಯಾಪಾರ ಚಟುವಟಿಕೆಗಳು ನಡೆದಿವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...