Homeಕರ್ನಾಟಕಮುರುಘಾ ಶರಣರ ವಿರುದ್ಧದ ಸಾಕ್ಷಿ ನಾಶವಾಗಿದೆ: ವಿಶ್ವನಾಥ್‌ ಆರೋಪ

ಮುರುಘಾ ಶರಣರ ವಿರುದ್ಧದ ಸಾಕ್ಷಿ ನಾಶವಾಗಿದೆ: ವಿಶ್ವನಾಥ್‌ ಆರೋಪ

“ಜಗದ್ಗುರುಗಳು ಈಗ ಜಾತಿ ಗುರುಗಳಾಗಿದ್ದಾರೆ. ಸಂಸಾರಿಗಳನ್ನೇ ಪೀಠಾಧಿಪತಿಗಳನ್ನಾಗಿ ನೇಮಿಸಿ ಹೊಸ ರೂಪ ಕೊಡಬೇಕಾಗಿದೆ.”

- Advertisement -
- Advertisement -

“ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಸಾಕ್ಷಿಗಳನ್ನು ನಾಶ ಮಾಡಲಾಗಿದೆ” ಎಂದು ಬಿಜೆಪಿ ನಾಯಕ, ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು, “ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ದಾಖಲಾದ ತಕ್ಷಣ ತನಿಖೆ ನಡೆಸಲಿಲ್ಲ. ವಿಳಂಬ ಧೋರಣೆ ಅನುಸರಿಸಿದ್ದರಿಂದ ಸಾಕ್ಷ್ಯಗಳು ನಾಶವಾಗಿವೆ. ಗೃಹ ಇಲಾಖೆಯೇ ಇದಕ್ಕೆ ನೇರ ಹೊಣೆಯಾಗಿದೆ” ಎಂದು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿ ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸ್ ಇಲಾಖೆ ಎಚ್ಚೆತ್ತು ತಕ್ಷಣವೇ ಸ್ವಾಮೀಜಿಯನ್ನು ಬಂಧಿಸಬೇಕಾಗಿತ್ತು ಎಂದು ಆವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗದ್ಗುರುಗಳು ಈಗ ಜಾತಿ ಗುರುಗಳಾಗಿದ್ದಾರೆ. ದಲಿತ, ಹಿಂದುಳಿದ ವರ್ಗಕ್ಕೆ ಸೇರಿದ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿರುವಾಗ ಅಹಿಂದ ನಾಯಕರು, ಸ್ವಾಮೀಜಿಗಳು ಏನು ಮಾಡುತ್ತಿದ್ದಾರೆ? ಎಂದು ಅವರು ಕಟುವಾಗಿ ಪ್ರಶ್ನಿಸಿದ್ದಾರೆ.

ಆರೋಪ ಹೊತ್ತಿರುವ ಮುರುಘಾ ಶರಣರ ಪರವಾಗಿ ಕೆಲವು ಸಚಿವರು, ಮಾಜಿ ಸಚಿವರು ಮಾತನಾಡುತ್ತಿರುವುದನ್ನು ನೋಡಿದರೆ ಅವರು ಪೋಕ್ಸೋ ಕಾನೂನುನನ್ನು ಅರ್ಥ ಮಾಡಿಕೊಂಡಿಲ್ಲ ಅನ್ನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಧೀಶರು ಈ ಪ್ರಕರಣದಲ್ಲಿ ನ್ಯಾಯ ಎತ್ತಿಹಿಡಿದಿದ್ದಾರೆ. ಯಾರಿಗಾದರೂ ಒಂದು ಲಕ್ಷ ರೂ. ಕೊಟ್ಟರೆ ಲೆಕ್ಕ ಕೇಳುವ ಸರ್ಕಾರ ಮಠಕ್ಕೆ ಹತ್ತಾರು ಕೋಟಿ ರೂ. ಅನುದಾನ ನೀಡಿದೆ. ಇದರ ಲೆಕ್ಕ ಕೇಳುವವರು ಯಾರು ಇಲ್ಲ” ಎಂದು ಕಿಡಿಕಾರಿದ್ದಾರೆ.

ಸಂಸಾರಿಗಳನ್ನೇ ಪೀಠಾಧಿಪತಿಗಳನ್ನಾಗಿ ನೇಮಿಸಿ ಹೊಸ ರೂಪ ಕೊಡಬೇಕಾಗಿದೆ. ಚೆನ್ನೈನ ಒಡೆಯರ್ ಸಂತತಿಯಲ್ಲಿರುವ ಪೀಠಾಧಿಪತಿಗಳು ಸಂಸಾರಿಕರಾಗಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಂಸಾರಿಯಾಗಿದ್ದಾರೆ. ಇಂತಹ ಉದಾಹರಣೆಗಳು ಇರುವಾಗ ಸಂಸಾರಿಗಳನ್ನೇ ನೇಮಿಸಿದರೂ ತಪ್ಪಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಶರಣ ಪರಂಪರೆಯಲ್ಲಿ ಕೌಂಟುಬಿಕ ಜೀವನ ಹಾಗೂ ಕಾಮದ ದೃಷ್ಟಿಕೋನವೇನು?

ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರ ವಹಿಸಿದ ಒಡನಾಡಿ ಸಂಸ್ಥೆಯ ಪರಶು ಹಾಗೂ ಸ್ಟ್ಯಾನ್ಲಿಯವರಿಗೆ ಜೀವ ಬೆದರಿಕೆಗಳು ಬಂದಿರುವ ಕುರಿತು ಮಾತನಾಡಿದ ಅವರು, “ಒಡನಾಡಿಯ ಸ್ಟ್ಯಾನ್ಲಿ, ಪರಶುರಾಮ್ ಜೀವಕ್ಕೆ ಏನಾದರೂ ಅಪಾಯವಾದಲ್ಲಿ ಸರ್ಕಾರವೇ ಕಾರಣ” ಎಂದು ಎಚ್ಚರಿಸಿದ್ದಾರೆ.

ಹೆಸರಾಂತ ಪೀಠ, ಸ್ವಾಮೀಜಿ ವಿರುದ್ಧ ನಿಲ್ಲುವುದು ಅಷ್ಟು ಸುಲಭವಲ್ಲ. ಯಾವುದೇ ಬೆದರಿಕೆಗೆ ಹೆದರದೆ ಹೆಣ್ಣು ಮಕ್ಕಳ ಪರವಾಗಿ ಒಡನಾಡಿ ಸಂಸ್ಥೆ ನಿಂತಿದೆ. ಸರ್ಕಾರ ಕೂಡಲೇ ಸಂಸ್ಥೆಗೆ ಭದ್ರತೆ ಒದಗಿಸಬೇಕು. ಮಕ್ಕಳಿಗೆ ರಕ್ಷಣೆ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...