Homeಕರ್ನಾಟಕಮುರುಘಾ ಶರಣರ ವಿರುದ್ಧದ ಸಾಕ್ಷಿ ನಾಶವಾಗಿದೆ: ವಿಶ್ವನಾಥ್‌ ಆರೋಪ

ಮುರುಘಾ ಶರಣರ ವಿರುದ್ಧದ ಸಾಕ್ಷಿ ನಾಶವಾಗಿದೆ: ವಿಶ್ವನಾಥ್‌ ಆರೋಪ

“ಜಗದ್ಗುರುಗಳು ಈಗ ಜಾತಿ ಗುರುಗಳಾಗಿದ್ದಾರೆ. ಸಂಸಾರಿಗಳನ್ನೇ ಪೀಠಾಧಿಪತಿಗಳನ್ನಾಗಿ ನೇಮಿಸಿ ಹೊಸ ರೂಪ ಕೊಡಬೇಕಾಗಿದೆ.”

- Advertisement -
- Advertisement -

“ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಸಾಕ್ಷಿಗಳನ್ನು ನಾಶ ಮಾಡಲಾಗಿದೆ” ಎಂದು ಬಿಜೆಪಿ ನಾಯಕ, ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು, “ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ದಾಖಲಾದ ತಕ್ಷಣ ತನಿಖೆ ನಡೆಸಲಿಲ್ಲ. ವಿಳಂಬ ಧೋರಣೆ ಅನುಸರಿಸಿದ್ದರಿಂದ ಸಾಕ್ಷ್ಯಗಳು ನಾಶವಾಗಿವೆ. ಗೃಹ ಇಲಾಖೆಯೇ ಇದಕ್ಕೆ ನೇರ ಹೊಣೆಯಾಗಿದೆ” ಎಂದು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿ ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸ್ ಇಲಾಖೆ ಎಚ್ಚೆತ್ತು ತಕ್ಷಣವೇ ಸ್ವಾಮೀಜಿಯನ್ನು ಬಂಧಿಸಬೇಕಾಗಿತ್ತು ಎಂದು ಆವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗದ್ಗುರುಗಳು ಈಗ ಜಾತಿ ಗುರುಗಳಾಗಿದ್ದಾರೆ. ದಲಿತ, ಹಿಂದುಳಿದ ವರ್ಗಕ್ಕೆ ಸೇರಿದ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿರುವಾಗ ಅಹಿಂದ ನಾಯಕರು, ಸ್ವಾಮೀಜಿಗಳು ಏನು ಮಾಡುತ್ತಿದ್ದಾರೆ? ಎಂದು ಅವರು ಕಟುವಾಗಿ ಪ್ರಶ್ನಿಸಿದ್ದಾರೆ.

ಆರೋಪ ಹೊತ್ತಿರುವ ಮುರುಘಾ ಶರಣರ ಪರವಾಗಿ ಕೆಲವು ಸಚಿವರು, ಮಾಜಿ ಸಚಿವರು ಮಾತನಾಡುತ್ತಿರುವುದನ್ನು ನೋಡಿದರೆ ಅವರು ಪೋಕ್ಸೋ ಕಾನೂನುನನ್ನು ಅರ್ಥ ಮಾಡಿಕೊಂಡಿಲ್ಲ ಅನ್ನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಧೀಶರು ಈ ಪ್ರಕರಣದಲ್ಲಿ ನ್ಯಾಯ ಎತ್ತಿಹಿಡಿದಿದ್ದಾರೆ. ಯಾರಿಗಾದರೂ ಒಂದು ಲಕ್ಷ ರೂ. ಕೊಟ್ಟರೆ ಲೆಕ್ಕ ಕೇಳುವ ಸರ್ಕಾರ ಮಠಕ್ಕೆ ಹತ್ತಾರು ಕೋಟಿ ರೂ. ಅನುದಾನ ನೀಡಿದೆ. ಇದರ ಲೆಕ್ಕ ಕೇಳುವವರು ಯಾರು ಇಲ್ಲ” ಎಂದು ಕಿಡಿಕಾರಿದ್ದಾರೆ.

ಸಂಸಾರಿಗಳನ್ನೇ ಪೀಠಾಧಿಪತಿಗಳನ್ನಾಗಿ ನೇಮಿಸಿ ಹೊಸ ರೂಪ ಕೊಡಬೇಕಾಗಿದೆ. ಚೆನ್ನೈನ ಒಡೆಯರ್ ಸಂತತಿಯಲ್ಲಿರುವ ಪೀಠಾಧಿಪತಿಗಳು ಸಂಸಾರಿಕರಾಗಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಂಸಾರಿಯಾಗಿದ್ದಾರೆ. ಇಂತಹ ಉದಾಹರಣೆಗಳು ಇರುವಾಗ ಸಂಸಾರಿಗಳನ್ನೇ ನೇಮಿಸಿದರೂ ತಪ್ಪಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಶರಣ ಪರಂಪರೆಯಲ್ಲಿ ಕೌಂಟುಬಿಕ ಜೀವನ ಹಾಗೂ ಕಾಮದ ದೃಷ್ಟಿಕೋನವೇನು?

ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರ ವಹಿಸಿದ ಒಡನಾಡಿ ಸಂಸ್ಥೆಯ ಪರಶು ಹಾಗೂ ಸ್ಟ್ಯಾನ್ಲಿಯವರಿಗೆ ಜೀವ ಬೆದರಿಕೆಗಳು ಬಂದಿರುವ ಕುರಿತು ಮಾತನಾಡಿದ ಅವರು, “ಒಡನಾಡಿಯ ಸ್ಟ್ಯಾನ್ಲಿ, ಪರಶುರಾಮ್ ಜೀವಕ್ಕೆ ಏನಾದರೂ ಅಪಾಯವಾದಲ್ಲಿ ಸರ್ಕಾರವೇ ಕಾರಣ” ಎಂದು ಎಚ್ಚರಿಸಿದ್ದಾರೆ.

ಹೆಸರಾಂತ ಪೀಠ, ಸ್ವಾಮೀಜಿ ವಿರುದ್ಧ ನಿಲ್ಲುವುದು ಅಷ್ಟು ಸುಲಭವಲ್ಲ. ಯಾವುದೇ ಬೆದರಿಕೆಗೆ ಹೆದರದೆ ಹೆಣ್ಣು ಮಕ್ಕಳ ಪರವಾಗಿ ಒಡನಾಡಿ ಸಂಸ್ಥೆ ನಿಂತಿದೆ. ಸರ್ಕಾರ ಕೂಡಲೇ ಸಂಸ್ಥೆಗೆ ಭದ್ರತೆ ಒದಗಿಸಬೇಕು. ಮಕ್ಕಳಿಗೆ ರಕ್ಷಣೆ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...