Homeಕರ್ನಾಟಕಮುರುಘಾ ಶರಣರ ವಿರುದ್ಧದ ಸಾಕ್ಷಿ ನಾಶವಾಗಿದೆ: ವಿಶ್ವನಾಥ್‌ ಆರೋಪ

ಮುರುಘಾ ಶರಣರ ವಿರುದ್ಧದ ಸಾಕ್ಷಿ ನಾಶವಾಗಿದೆ: ವಿಶ್ವನಾಥ್‌ ಆರೋಪ

“ಜಗದ್ಗುರುಗಳು ಈಗ ಜಾತಿ ಗುರುಗಳಾಗಿದ್ದಾರೆ. ಸಂಸಾರಿಗಳನ್ನೇ ಪೀಠಾಧಿಪತಿಗಳನ್ನಾಗಿ ನೇಮಿಸಿ ಹೊಸ ರೂಪ ಕೊಡಬೇಕಾಗಿದೆ.”

- Advertisement -
- Advertisement -

“ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಸಾಕ್ಷಿಗಳನ್ನು ನಾಶ ಮಾಡಲಾಗಿದೆ” ಎಂದು ಬಿಜೆಪಿ ನಾಯಕ, ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು, “ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ದಾಖಲಾದ ತಕ್ಷಣ ತನಿಖೆ ನಡೆಸಲಿಲ್ಲ. ವಿಳಂಬ ಧೋರಣೆ ಅನುಸರಿಸಿದ್ದರಿಂದ ಸಾಕ್ಷ್ಯಗಳು ನಾಶವಾಗಿವೆ. ಗೃಹ ಇಲಾಖೆಯೇ ಇದಕ್ಕೆ ನೇರ ಹೊಣೆಯಾಗಿದೆ” ಎಂದು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿ ನಾಲ್ಕು ಪ್ರಕರಣಗಳನ್ನು ದಾಖಲಿಸಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸ್ ಇಲಾಖೆ ಎಚ್ಚೆತ್ತು ತಕ್ಷಣವೇ ಸ್ವಾಮೀಜಿಯನ್ನು ಬಂಧಿಸಬೇಕಾಗಿತ್ತು ಎಂದು ಆವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗದ್ಗುರುಗಳು ಈಗ ಜಾತಿ ಗುರುಗಳಾಗಿದ್ದಾರೆ. ದಲಿತ, ಹಿಂದುಳಿದ ವರ್ಗಕ್ಕೆ ಸೇರಿದ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿರುವಾಗ ಅಹಿಂದ ನಾಯಕರು, ಸ್ವಾಮೀಜಿಗಳು ಏನು ಮಾಡುತ್ತಿದ್ದಾರೆ? ಎಂದು ಅವರು ಕಟುವಾಗಿ ಪ್ರಶ್ನಿಸಿದ್ದಾರೆ.

ಆರೋಪ ಹೊತ್ತಿರುವ ಮುರುಘಾ ಶರಣರ ಪರವಾಗಿ ಕೆಲವು ಸಚಿವರು, ಮಾಜಿ ಸಚಿವರು ಮಾತನಾಡುತ್ತಿರುವುದನ್ನು ನೋಡಿದರೆ ಅವರು ಪೋಕ್ಸೋ ಕಾನೂನುನನ್ನು ಅರ್ಥ ಮಾಡಿಕೊಂಡಿಲ್ಲ ಅನ್ನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಧೀಶರು ಈ ಪ್ರಕರಣದಲ್ಲಿ ನ್ಯಾಯ ಎತ್ತಿಹಿಡಿದಿದ್ದಾರೆ. ಯಾರಿಗಾದರೂ ಒಂದು ಲಕ್ಷ ರೂ. ಕೊಟ್ಟರೆ ಲೆಕ್ಕ ಕೇಳುವ ಸರ್ಕಾರ ಮಠಕ್ಕೆ ಹತ್ತಾರು ಕೋಟಿ ರೂ. ಅನುದಾನ ನೀಡಿದೆ. ಇದರ ಲೆಕ್ಕ ಕೇಳುವವರು ಯಾರು ಇಲ್ಲ” ಎಂದು ಕಿಡಿಕಾರಿದ್ದಾರೆ.

ಸಂಸಾರಿಗಳನ್ನೇ ಪೀಠಾಧಿಪತಿಗಳನ್ನಾಗಿ ನೇಮಿಸಿ ಹೊಸ ರೂಪ ಕೊಡಬೇಕಾಗಿದೆ. ಚೆನ್ನೈನ ಒಡೆಯರ್ ಸಂತತಿಯಲ್ಲಿರುವ ಪೀಠಾಧಿಪತಿಗಳು ಸಂಸಾರಿಕರಾಗಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಂಸಾರಿಯಾಗಿದ್ದಾರೆ. ಇಂತಹ ಉದಾಹರಣೆಗಳು ಇರುವಾಗ ಸಂಸಾರಿಗಳನ್ನೇ ನೇಮಿಸಿದರೂ ತಪ್ಪಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಶರಣ ಪರಂಪರೆಯಲ್ಲಿ ಕೌಂಟುಬಿಕ ಜೀವನ ಹಾಗೂ ಕಾಮದ ದೃಷ್ಟಿಕೋನವೇನು?

ಪೋಕ್ಸೋ ಪ್ರಕರಣ ದಾಖಲಾಗಲು ಪ್ರಮುಖ ಪಾತ್ರ ವಹಿಸಿದ ಒಡನಾಡಿ ಸಂಸ್ಥೆಯ ಪರಶು ಹಾಗೂ ಸ್ಟ್ಯಾನ್ಲಿಯವರಿಗೆ ಜೀವ ಬೆದರಿಕೆಗಳು ಬಂದಿರುವ ಕುರಿತು ಮಾತನಾಡಿದ ಅವರು, “ಒಡನಾಡಿಯ ಸ್ಟ್ಯಾನ್ಲಿ, ಪರಶುರಾಮ್ ಜೀವಕ್ಕೆ ಏನಾದರೂ ಅಪಾಯವಾದಲ್ಲಿ ಸರ್ಕಾರವೇ ಕಾರಣ” ಎಂದು ಎಚ್ಚರಿಸಿದ್ದಾರೆ.

ಹೆಸರಾಂತ ಪೀಠ, ಸ್ವಾಮೀಜಿ ವಿರುದ್ಧ ನಿಲ್ಲುವುದು ಅಷ್ಟು ಸುಲಭವಲ್ಲ. ಯಾವುದೇ ಬೆದರಿಕೆಗೆ ಹೆದರದೆ ಹೆಣ್ಣು ಮಕ್ಕಳ ಪರವಾಗಿ ಒಡನಾಡಿ ಸಂಸ್ಥೆ ನಿಂತಿದೆ. ಸರ್ಕಾರ ಕೂಡಲೇ ಸಂಸ್ಥೆಗೆ ಭದ್ರತೆ ಒದಗಿಸಬೇಕು. ಮಕ್ಕಳಿಗೆ ರಕ್ಷಣೆ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....