Homeಕರ್ನಾಟಕಇದ್ರೀಶ್‌ ಕೊಲೆ ಗೂಂಡಾ ಸಂಸ್ಕೃತಿಗೆ ಸಾಕ್ಷಿ; ಸಿದ್ದರಾಮಯ್ಯ, ಕಾಂಗ್ರೆಸ್‌ ಪ್ರತಿಕ್ರಿಯೆ

ಇದ್ರೀಶ್‌ ಕೊಲೆ ಗೂಂಡಾ ಸಂಸ್ಕೃತಿಗೆ ಸಾಕ್ಷಿ; ಸಿದ್ದರಾಮಯ್ಯ, ಕಾಂಗ್ರೆಸ್‌ ಪ್ರತಿಕ್ರಿಯೆ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿಯ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಇದ್ರೀಶ್‌ ಪಾಷ ಎನ್ನುವ 39 ವರ್ಷದ ಅಮಾಯಕ ಮುಸ್ಲಿಂ ವ್ಯಕ್ತಿಯ ಕೊಲೆಗೆ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ಕಾಂಗ್ರೆಸ್‌ ಈ ಕುರಿತು ಟ್ವೀಟ್ ಮಾಡಿದ್ದು, “ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ” ಎಂದು ಟೀಕಿಸಿದೆ.

“40% ಕಮಿಷನ್ ಪಡೆದು ಆರಾಮಾಗಿರುವ ಆರಗ ಜ್ಞಾನೇಂದ್ರ ಅವರೇ, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ನಿಮ್ಮ ವಿಫಲ ಸರ್ಕಾರ ಹೊಣೆಯಲ್ಲವೇ? ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ” ಎಂದಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಧರ್ಮ ರಕ್ಷಣೆಯ ಹೆಸರಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು” ಎಂದಿದ್ದಾರೆ.

“ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ” ಎಂದು ಆಗ್ರಹಿಸಿದ್ದಾರೆ.

“ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕಷ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

“ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...