Homeಕರ್ನಾಟಕಇದ್ರೀಶ್‌ ಕೊಲೆ ಗೂಂಡಾ ಸಂಸ್ಕೃತಿಗೆ ಸಾಕ್ಷಿ; ಸಿದ್ದರಾಮಯ್ಯ, ಕಾಂಗ್ರೆಸ್‌ ಪ್ರತಿಕ್ರಿಯೆ

ಇದ್ರೀಶ್‌ ಕೊಲೆ ಗೂಂಡಾ ಸಂಸ್ಕೃತಿಗೆ ಸಾಕ್ಷಿ; ಸಿದ್ದರಾಮಯ್ಯ, ಕಾಂಗ್ರೆಸ್‌ ಪ್ರತಿಕ್ರಿಯೆ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿಯ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಇದ್ರೀಶ್‌ ಪಾಷ ಎನ್ನುವ 39 ವರ್ಷದ ಅಮಾಯಕ ಮುಸ್ಲಿಂ ವ್ಯಕ್ತಿಯ ಕೊಲೆಗೆ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ಕಾಂಗ್ರೆಸ್‌ ಈ ಕುರಿತು ಟ್ವೀಟ್ ಮಾಡಿದ್ದು, “ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ” ಎಂದು ಟೀಕಿಸಿದೆ.

“40% ಕಮಿಷನ್ ಪಡೆದು ಆರಾಮಾಗಿರುವ ಆರಗ ಜ್ಞಾನೇಂದ್ರ ಅವರೇ, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ನಿಮ್ಮ ವಿಫಲ ಸರ್ಕಾರ ಹೊಣೆಯಲ್ಲವೇ? ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ” ಎಂದಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಧರ್ಮ ರಕ್ಷಣೆಯ ಹೆಸರಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು” ಎಂದಿದ್ದಾರೆ.

“ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ” ಎಂದು ಆಗ್ರಹಿಸಿದ್ದಾರೆ.

“ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕಷ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

“ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...