Homeಕರ್ನಾಟಕಮಹಿಳೆಗೆ ಪಾದರಸ 'ಇಂಜೆಕ್ಟ್‌' ಮಾಡಿ ಕೊಂದ ದುರುಳ ಪತಿ; ಸಾವಿಗೂ ಮುನ್ನ, ಪತಿಯ ದುಷ್ಕೃತ್ಯ ಬಿಚ್ಚಿಟ್ಟಿದ್ದ...

ಮಹಿಳೆಗೆ ಪಾದರಸ ‘ಇಂಜೆಕ್ಟ್‌’ ಮಾಡಿ ಕೊಂದ ದುರುಳ ಪತಿ; ಸಾವಿಗೂ ಮುನ್ನ, ಪತಿಯ ದುಷ್ಕೃತ್ಯ ಬಿಚ್ಚಿಟ್ಟಿದ್ದ ಮಹಿಳೆ

- Advertisement -
- Advertisement -

ದುರುಳ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಪಾದರಸ ಚುಚ್ಚುಮದ್ದು ನೀಡಿ, ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವಿಗೂ ಮುನ್ನ ಪೊಲೀಸರಿಗೆ ಮಾಹಿತಿ ನೀಡಿರುವ ಮಹಿಳೆ, ‘ತನ್ನ ಪತಿ ಮತ್ತು ಮಾವ ನನ್ನನ್ನು ಕೊಲ್ಲಲು ಸಂಚುಹೂಡಿ, ವೈದ್ಯಕೀಯ ದಂಪತಿಯ ನೆರವು ಪಡೆದಿದ್ದಾರೆ’ ಎಂದು ಆರೋಪಿಸಿದ್ದಾರೆ.

ಮೃತ ಮಹಿಳೆಯನ್ನು ವಿದ್ಯಾ ಎಂದು ಗುರುತಿಸಾಗಿದೆ. ಅವರು ಕಳೆದ ವಾರ ಮೃತಪಟ್ಟಿದ್ದಾರೆ. ಅವರು ತಮ್ಮ ಮೇಲಾದ ದೌರ್ಜ್ಯದ ಕುರಿತು ಪೊಲೀಸರಿಗೆ ವಿವರಿಸಿರುವಂತೆ, ಅವರಿಗೆ ಫೆಬ್ರವರಿ 26ರಂದು ಆಕೆಯ ಪತಿ ಪಾದರವನ್ನು ಇಂಜೆಕ್ಟ್‌ ಮಾಡಿದ್ದಾರೆ.

“SLN ಡಯಾಗ್ನೋಸ್ಟಿಕ್ ಸೆಂಟರ್ ಎಂಬಲ್ಲಿ ಕೆಲಸ ಮಾಡುತ್ತಿದ್ದ ಶ್ವೇತಾ ಮತ್ತು ಆಕೆಯ ಪತಿ ನನ್ನ ಗಂಡನಿಗೆ ಕ್ಲೋರೋಪಾರ್ಫ್‌, ಸಿರಿಂಜ್ ಹಾಗೂ ಮರ್ಕ್ಯುರಿಯನ್ನು ನೀಡಿದ್ದರು. ಅವುಗಳನ್ನು ಬಳಸಿಕೊಂಡ ನನ್ನ ಪತಿ, ನಾನು ಫೆಬ್ರವರಿ 26ರ ರಾತ್ರಿ ಮಲಗಿದ್ದಾಗ, ಕ್ಲೋರೋಫಾರ್ಮ್‌ ಮೂಲಕ ನನ್ನ ಪ್ರಜ್ಞೆ ತಪ್ಪಿಸಿ, ಪಾದರಸವನ್ನು ಇಂಜೆಕ್ಟ್‌ ಮಾಡಿದ್ದಾರೆ” ಎಂದು ವಿವರಿಸಿರುವುದಾಗಿ ವರದಿಯಾಗಿದೆ. 

“ಮರುದಿನ ಸಂಜೆ ವೇಳೆಗೆ ನನಗೆ ಪ್ರಜ್ಞೆ ಬಂದಿತು. ಆಗ, ನನ್ನ ಕಾಲು ಊದಿಕೊಂಡಿತ್ತು. ನನ್ನ ಬಲ ತೊಡೆಯಲ್ಲಿ ತೀವ್ರ ನೋವಾಗುತ್ತಿತ್ತು. ಕೆಲ ದಿನಗಳಲ್ಲಿಯೇ ನನ್ನ ಆರೋಗ್ಯ ಸ್ಥಿತಿ ಹದಗೆಟ್ಟು, ಮಾರ್ಚ್‌ 7ರಂದು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದೆ. ಅಲ್ಲಿಂದ, ಆಕ್ಸ್‌ಫರ್ಡ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ, ವೈದ್ಯರು ಪರೀಕ್ಷಿಸಿದಾಗ, ನನ್ನ ದೇಹದಲ್ಲಿ ಪಾದರಸ ಇರುವುದು ಪತ್ತೆಯಾಯಿತು” ಎಂದು ಸಾವಿನ ಅಂಚಿನಲ್ಲಿದ್ದ ಮಹಿಳೆ ಪೊಲೀಸರಿಗೆ ವಿವರಿಸಿದ್ದರೆಂದು ತಿಳಿದುಬಂದಿದೆ.

“ನನ್ನ ಪತಿ ಬಸವರಾಜ್ ಮತ್ತು ಅವನ ತಂದೆ ಮರಿಶ್ವಾಮಾಚಾರಿ ನನ್ನನ್ನು ಕೊಲ್ಲುವ ಉದ್ದೇಶದಿಂದ ನನ್ನ ದೇಹಕ್ಕೆ ಪಾದರಸವನ್ನು ಚುಚ್ಚಿದ್ದಾರೆ. ಅವರಿಬ್ಬರು ನನಗೆ ನಿರಂತರ ಕಿರುಕುಳ ನೀಡಿ, ಅವಮಾನಿಸುತ್ತಿದ್ದರು. ಮನೆಯೊಳಗೆ ಕೂಡಿಹಾಕುತ್ತಿದ್ದರು” ಎಂದು ವಿದ್ಯಾ ಆರೋಪಿಸಿದ್ದರು.

ದೇಹದಲ್ಲಿ ಪಾದರಸ ಇದ್ದಿದ್ದರಿಂದ ಆಕೆಯ ಮೂತ್ರಪಿಂಡಗಳು ಸೇರಿದಂತೆ ಬಹು ಅಂಗಗಳು ಹಾನಿಯಾಗಿದ್ದವು. ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಅಲ್ಲಿ ನಿಯಮಿತವಾಗಿ ಡಯಾಲಿಸಿಸ್‌ ಮಾಡಲಾಗುತ್ತಿತ್ತು. ಆದಾಗ್ಯೂ, ಆಕೆ 9 ತಿಂಗಳ ಜೀವನ್ಮರಣ ಹೋರಾಟದ ಬಳಿಕ ಇತ್ತೀಚೆಗೆ ಮೃತಪಟ್ಟಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...