Homeಮುಖಪುಟಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಸ್ವಾತಂತ್ರ್ಯ ಪೂರ್ವದಲ್ಲಿಯೇ ಅನಿಷ್ಟ ಪದ್ದತಿಯೆಂಬ ಕಾರಣಕ್ಕೆ ನಿಷೇಧಕ್ಕೊಳಗಾಗಿದ್ದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ಬೆಳಕಿಗೆ ಬಂದಿದೆ. ಅತ್ತೆಯಂದಿರು ಸತಿಯಾಗಲು ಒತ್ತಡ ಹೇರಿದ್ದರಿಂದ ನೊಂದ 28 ವರ್ಷ ವಯಸ್ಸಿನ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಮಹಿಳೆಯೊಬ್ಬರು ಸಬರಮತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ.

ಈ ಘಟನೆಯಿಂದಾಗಿ ಗಂಡ ಮೃತಪಟ್ಟಾಗ ಆ ಶವದ ಚಿತೆಗೆ ಆತನ ಪತ್ನಿಯೂ ಹಾರಿ ಜೀವ ತೆರಬೇಕಾದ ಪುರಾತನ, ಕಾನೂನುಬಾಹಿರ ಕ್ರಿಯೆಯಾದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ನಮ್ಮ ದೇಶದ ದೊಡ್ಡ ದುರಂತವಾಗಿದೆ.

ಘಟನೆಯ ವಿವರ

ರಾಜಸ್ಥಾನದ ಭಿಲ್ವಾಡ ಮೂಲದ ಸಂಗೀತಾ ಲಖ್ರಾ ಅವರು ಕಳೆದ ವರ್ಷ ಫೆಬ್ರವರಿ 10 ರಂದು ತನ್ನ ಪತಿಯ ಸಾವಿನ ನಂತರ ತನ್ನ ಅತ್ತೆಯಂದಿರು ಸತಿಯಾಗುವಂತೆ ತನಗೆ ನೀಡಿದ ಕಿರುಕುಳದ ವಿವರಗಳೊಂದಿಗೆ ಡೆತ್ ನೋಟ್ ಬರೆದಿದ್ದಾರೆ. ಅದರ ಆಧಾರದ ಮೇಲೆ ಆಕೆಯ ತಂದೆ ಸೂರತ್‌ನಲ್ಲಿ ದಿನಸಿ ವ್ಯಾಪಾರಿಯಾಗಿರುವ ರಮೇಶ್ ಲಖ್ರಾರವರು ಸಬರಮತಿ ರಿವರ್‌ಫ್ರಂಟ್ (ಪಶ್ಚಿಮ) ಪೊಲೀಸರಿಗೆ ಆಕೆಯ ಅತ್ತೆ ಮತ್ತು ಇತರ ನಾಲ್ವರ ವಿರುದ್ಧ ಕೌಟುಂಬಿಕ ಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ದೂರಿನ ಪ್ರಕಾರ ತನ್ನ ಮಗಳು ಒಂದು ವರ್ಷದಿಂದ ಖಿನ್ನತೆಯಿಂದ ಬಳಲುತ್ತಿದ್ದಳು. ಮೇ 10 ರಂದು ಸಂಗೀತಾ ನಾಪತ್ತೆಯಾಗಿದ್ದು, ಮೇ 11 ರ ಬೆಳಿಗ್ಗೆ ಆಕೆಯ ದೇಹವನ್ನು ಸಬರಮತಿಯಿಂದ ಹೊರತೆಗೆಯಲಾಯಿತು. ಆಕೆ ತನ್ನ ಸಹೋದರ ನಿಮೇಶ್‌ಗೆ ವಾಟ್ಸಾಪ್‌ನಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮಿಸಿ ಎಂಬ ಪಠ್ಯ ಮತ್ತು ಆಡಿಯೊ ಸಂದೇಶಗಳನ್ನು ಸಹ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದ ಸಂಗೀತಾ, ಪತಿಯ ಮರಣದ ನಂತರ ಸೂರತ್‌ನಲ್ಲಿರುವ ತನ್ನ ತಾಯಿಯ ಮನೆಗೆ ತೆರಳಿದ್ದರು. ಒಂದು ತಿಂಗಳಿನಿಂದ ಮಾಲ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದರು ಎನ್ನಲಾಗಿದೆ.

“ಸಂಗೀತಾ ಬರೆದ ಆತ್ಮಹತ್ಯೆ ಪತ್ರದಲ್ಲಿ ತನ್ನ ಅತ್ತೆ ಕೈಲಾಶ್ ದೇವಿ ಲಖರಾ ಮತ್ತು ಇತರ ನಾಲ್ವರು ಅತ್ತೆಯ ಕುಟುಂಬದ ಸದಸ್ಯರು ಸತಿಯಾಗುವಂತೆ ಕೇಳಿಕೊಂಡು ಕಿರುಕುಳ ನೀಡಿದ್ದಾರೆ. ಯಾರಾದರೂ ಒಳ್ಳೆಯ ಸ್ವಭಾವದ ಮಹಿಳೆಯಾಗಿದ್ದರೆ ಅವಳು ಸತಿಯಾಗಬೇಕು ಎಂದು ಕುಟುಂಬ ಸದಸ್ಯರು ಒತ್ತಡ ಹೇರಿದ್ದರು ಎಂದು ಎಫ್‌ಐಆರ್ ನಲ್ಲಿ ಬರೆಯಲಾಗಿದೆ.

ರಾಜಸ್ಥಾನದ ರಾಜಸಮಂದ್‌ನ ಡೆವಲಪರ್ ಆಗಿದ್ದ ಸಂಗೀತಾ ಅವರ ಪತಿ ವಿಷ್ಣು ಕುಮಾರ್ ಅವರು ಮೇ 10, 2022 ರಂದು ಅಪಘಾತದಲ್ಲಿ ನಿಧನರಾದರು. ದುರಂತದ ನಂತರ ಸಂಗೀತಾ ತನ್ನ ಅತ್ತೆಯೊಂದಿಗೆ ವಾಸಿಸುತ್ತಿದ್ದರು. ಆದರೆ ತನ್ನ ಗಂಡನ ಸಾವಿಗೆ ಅಪಹಾಸ್ಯ ಮಾಡಿದ್ದರಿಂದ ಬೇಸತ್ತು ಸೂರತ್‌ನಲ್ಲಿರುವ ತನ್ನ ಹೆತ್ತವರ ಮನೆಗೆ ತೆರಳಿದ್ದರು. ಅತ್ತೆಯ ನಿರಂತರ ಕಿರುಕುಳದಿಂದಾಗಿ ಆಕೆ ಸುಮಾರು ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

1987ರ ಸತಿ ಪದ್ಧತಿ ಆಯೋಗದ (ತಡೆಗಟ್ಟುವಿಕೆ) ಕಾಯಿದೆಯೊಂದಿಗೆ 1988 ರಲ್ಲಿ ದೀರ್ಘಕಾಲದಿಂದ ರದ್ದುಗೊಂಡ ಸತಿ ಪದ್ಧತಿಯ ವಿರುದ್ಧದ ಕಾನೂನನ್ನು ಕಠಿಣಗೊಳಿಸಲಾಗಿದೆ. ಆದರೆ ಉತ್ತರ ಭಾರತದಲ್ಲಿ ಈ ಅನಿಷ್ಠ ಪದ್ದತಿ ಆಚರಣೆಯಲ್ಲಿ ಸ್ವಾತಂತ್ರ್ಯ ನಂತರವೂ 40 ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...