Homeಮುಖಪುಟಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಸ್ವಾತಂತ್ರ್ಯ ಪೂರ್ವದಲ್ಲಿಯೇ ಅನಿಷ್ಟ ಪದ್ದತಿಯೆಂಬ ಕಾರಣಕ್ಕೆ ನಿಷೇಧಕ್ಕೊಳಗಾಗಿದ್ದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ಬೆಳಕಿಗೆ ಬಂದಿದೆ. ಅತ್ತೆಯಂದಿರು ಸತಿಯಾಗಲು ಒತ್ತಡ ಹೇರಿದ್ದರಿಂದ ನೊಂದ 28 ವರ್ಷ ವಯಸ್ಸಿನ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಮಹಿಳೆಯೊಬ್ಬರು ಸಬರಮತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ.

ಈ ಘಟನೆಯಿಂದಾಗಿ ಗಂಡ ಮೃತಪಟ್ಟಾಗ ಆ ಶವದ ಚಿತೆಗೆ ಆತನ ಪತ್ನಿಯೂ ಹಾರಿ ಜೀವ ತೆರಬೇಕಾದ ಪುರಾತನ, ಕಾನೂನುಬಾಹಿರ ಕ್ರಿಯೆಯಾದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ನಮ್ಮ ದೇಶದ ದೊಡ್ಡ ದುರಂತವಾಗಿದೆ.

ಘಟನೆಯ ವಿವರ

ರಾಜಸ್ಥಾನದ ಭಿಲ್ವಾಡ ಮೂಲದ ಸಂಗೀತಾ ಲಖ್ರಾ ಅವರು ಕಳೆದ ವರ್ಷ ಫೆಬ್ರವರಿ 10 ರಂದು ತನ್ನ ಪತಿಯ ಸಾವಿನ ನಂತರ ತನ್ನ ಅತ್ತೆಯಂದಿರು ಸತಿಯಾಗುವಂತೆ ತನಗೆ ನೀಡಿದ ಕಿರುಕುಳದ ವಿವರಗಳೊಂದಿಗೆ ಡೆತ್ ನೋಟ್ ಬರೆದಿದ್ದಾರೆ. ಅದರ ಆಧಾರದ ಮೇಲೆ ಆಕೆಯ ತಂದೆ ಸೂರತ್‌ನಲ್ಲಿ ದಿನಸಿ ವ್ಯಾಪಾರಿಯಾಗಿರುವ ರಮೇಶ್ ಲಖ್ರಾರವರು ಸಬರಮತಿ ರಿವರ್‌ಫ್ರಂಟ್ (ಪಶ್ಚಿಮ) ಪೊಲೀಸರಿಗೆ ಆಕೆಯ ಅತ್ತೆ ಮತ್ತು ಇತರ ನಾಲ್ವರ ವಿರುದ್ಧ ಕೌಟುಂಬಿಕ ಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ದೂರಿನ ಪ್ರಕಾರ ತನ್ನ ಮಗಳು ಒಂದು ವರ್ಷದಿಂದ ಖಿನ್ನತೆಯಿಂದ ಬಳಲುತ್ತಿದ್ದಳು. ಮೇ 10 ರಂದು ಸಂಗೀತಾ ನಾಪತ್ತೆಯಾಗಿದ್ದು, ಮೇ 11 ರ ಬೆಳಿಗ್ಗೆ ಆಕೆಯ ದೇಹವನ್ನು ಸಬರಮತಿಯಿಂದ ಹೊರತೆಗೆಯಲಾಯಿತು. ಆಕೆ ತನ್ನ ಸಹೋದರ ನಿಮೇಶ್‌ಗೆ ವಾಟ್ಸಾಪ್‌ನಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮಿಸಿ ಎಂಬ ಪಠ್ಯ ಮತ್ತು ಆಡಿಯೊ ಸಂದೇಶಗಳನ್ನು ಸಹ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದ ಸಂಗೀತಾ, ಪತಿಯ ಮರಣದ ನಂತರ ಸೂರತ್‌ನಲ್ಲಿರುವ ತನ್ನ ತಾಯಿಯ ಮನೆಗೆ ತೆರಳಿದ್ದರು. ಒಂದು ತಿಂಗಳಿನಿಂದ ಮಾಲ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದರು ಎನ್ನಲಾಗಿದೆ.

“ಸಂಗೀತಾ ಬರೆದ ಆತ್ಮಹತ್ಯೆ ಪತ್ರದಲ್ಲಿ ತನ್ನ ಅತ್ತೆ ಕೈಲಾಶ್ ದೇವಿ ಲಖರಾ ಮತ್ತು ಇತರ ನಾಲ್ವರು ಅತ್ತೆಯ ಕುಟುಂಬದ ಸದಸ್ಯರು ಸತಿಯಾಗುವಂತೆ ಕೇಳಿಕೊಂಡು ಕಿರುಕುಳ ನೀಡಿದ್ದಾರೆ. ಯಾರಾದರೂ ಒಳ್ಳೆಯ ಸ್ವಭಾವದ ಮಹಿಳೆಯಾಗಿದ್ದರೆ ಅವಳು ಸತಿಯಾಗಬೇಕು ಎಂದು ಕುಟುಂಬ ಸದಸ್ಯರು ಒತ್ತಡ ಹೇರಿದ್ದರು ಎಂದು ಎಫ್‌ಐಆರ್ ನಲ್ಲಿ ಬರೆಯಲಾಗಿದೆ.

ರಾಜಸ್ಥಾನದ ರಾಜಸಮಂದ್‌ನ ಡೆವಲಪರ್ ಆಗಿದ್ದ ಸಂಗೀತಾ ಅವರ ಪತಿ ವಿಷ್ಣು ಕುಮಾರ್ ಅವರು ಮೇ 10, 2022 ರಂದು ಅಪಘಾತದಲ್ಲಿ ನಿಧನರಾದರು. ದುರಂತದ ನಂತರ ಸಂಗೀತಾ ತನ್ನ ಅತ್ತೆಯೊಂದಿಗೆ ವಾಸಿಸುತ್ತಿದ್ದರು. ಆದರೆ ತನ್ನ ಗಂಡನ ಸಾವಿಗೆ ಅಪಹಾಸ್ಯ ಮಾಡಿದ್ದರಿಂದ ಬೇಸತ್ತು ಸೂರತ್‌ನಲ್ಲಿರುವ ತನ್ನ ಹೆತ್ತವರ ಮನೆಗೆ ತೆರಳಿದ್ದರು. ಅತ್ತೆಯ ನಿರಂತರ ಕಿರುಕುಳದಿಂದಾಗಿ ಆಕೆ ಸುಮಾರು ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

1987ರ ಸತಿ ಪದ್ಧತಿ ಆಯೋಗದ (ತಡೆಗಟ್ಟುವಿಕೆ) ಕಾಯಿದೆಯೊಂದಿಗೆ 1988 ರಲ್ಲಿ ದೀರ್ಘಕಾಲದಿಂದ ರದ್ದುಗೊಂಡ ಸತಿ ಪದ್ಧತಿಯ ವಿರುದ್ಧದ ಕಾನೂನನ್ನು ಕಠಿಣಗೊಳಿಸಲಾಗಿದೆ. ಆದರೆ ಉತ್ತರ ಭಾರತದಲ್ಲಿ ಈ ಅನಿಷ್ಠ ಪದ್ದತಿ ಆಚರಣೆಯಲ್ಲಿ ಸ್ವಾತಂತ್ರ್ಯ ನಂತರವೂ 40 ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...