Homeಮುಖಪುಟಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಸ್ವಾತಂತ್ರ್ಯ ಪೂರ್ವದಲ್ಲಿಯೇ ಅನಿಷ್ಟ ಪದ್ದತಿಯೆಂಬ ಕಾರಣಕ್ಕೆ ನಿಷೇಧಕ್ಕೊಳಗಾಗಿದ್ದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ಬೆಳಕಿಗೆ ಬಂದಿದೆ. ಅತ್ತೆಯಂದಿರು ಸತಿಯಾಗಲು ಒತ್ತಡ ಹೇರಿದ್ದರಿಂದ ನೊಂದ 28 ವರ್ಷ ವಯಸ್ಸಿನ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಮಹಿಳೆಯೊಬ್ಬರು ಸಬರಮತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ.

ಈ ಘಟನೆಯಿಂದಾಗಿ ಗಂಡ ಮೃತಪಟ್ಟಾಗ ಆ ಶವದ ಚಿತೆಗೆ ಆತನ ಪತ್ನಿಯೂ ಹಾರಿ ಜೀವ ತೆರಬೇಕಾದ ಪುರಾತನ, ಕಾನೂನುಬಾಹಿರ ಕ್ರಿಯೆಯಾದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ನಮ್ಮ ದೇಶದ ದೊಡ್ಡ ದುರಂತವಾಗಿದೆ.

ಘಟನೆಯ ವಿವರ

ರಾಜಸ್ಥಾನದ ಭಿಲ್ವಾಡ ಮೂಲದ ಸಂಗೀತಾ ಲಖ್ರಾ ಅವರು ಕಳೆದ ವರ್ಷ ಫೆಬ್ರವರಿ 10 ರಂದು ತನ್ನ ಪತಿಯ ಸಾವಿನ ನಂತರ ತನ್ನ ಅತ್ತೆಯಂದಿರು ಸತಿಯಾಗುವಂತೆ ತನಗೆ ನೀಡಿದ ಕಿರುಕುಳದ ವಿವರಗಳೊಂದಿಗೆ ಡೆತ್ ನೋಟ್ ಬರೆದಿದ್ದಾರೆ. ಅದರ ಆಧಾರದ ಮೇಲೆ ಆಕೆಯ ತಂದೆ ಸೂರತ್‌ನಲ್ಲಿ ದಿನಸಿ ವ್ಯಾಪಾರಿಯಾಗಿರುವ ರಮೇಶ್ ಲಖ್ರಾರವರು ಸಬರಮತಿ ರಿವರ್‌ಫ್ರಂಟ್ (ಪಶ್ಚಿಮ) ಪೊಲೀಸರಿಗೆ ಆಕೆಯ ಅತ್ತೆ ಮತ್ತು ಇತರ ನಾಲ್ವರ ವಿರುದ್ಧ ಕೌಟುಂಬಿಕ ಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ದೂರಿನ ಪ್ರಕಾರ ತನ್ನ ಮಗಳು ಒಂದು ವರ್ಷದಿಂದ ಖಿನ್ನತೆಯಿಂದ ಬಳಲುತ್ತಿದ್ದಳು. ಮೇ 10 ರಂದು ಸಂಗೀತಾ ನಾಪತ್ತೆಯಾಗಿದ್ದು, ಮೇ 11 ರ ಬೆಳಿಗ್ಗೆ ಆಕೆಯ ದೇಹವನ್ನು ಸಬರಮತಿಯಿಂದ ಹೊರತೆಗೆಯಲಾಯಿತು. ಆಕೆ ತನ್ನ ಸಹೋದರ ನಿಮೇಶ್‌ಗೆ ವಾಟ್ಸಾಪ್‌ನಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮಿಸಿ ಎಂಬ ಪಠ್ಯ ಮತ್ತು ಆಡಿಯೊ ಸಂದೇಶಗಳನ್ನು ಸಹ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದ ಸಂಗೀತಾ, ಪತಿಯ ಮರಣದ ನಂತರ ಸೂರತ್‌ನಲ್ಲಿರುವ ತನ್ನ ತಾಯಿಯ ಮನೆಗೆ ತೆರಳಿದ್ದರು. ಒಂದು ತಿಂಗಳಿನಿಂದ ಮಾಲ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದರು ಎನ್ನಲಾಗಿದೆ.

“ಸಂಗೀತಾ ಬರೆದ ಆತ್ಮಹತ್ಯೆ ಪತ್ರದಲ್ಲಿ ತನ್ನ ಅತ್ತೆ ಕೈಲಾಶ್ ದೇವಿ ಲಖರಾ ಮತ್ತು ಇತರ ನಾಲ್ವರು ಅತ್ತೆಯ ಕುಟುಂಬದ ಸದಸ್ಯರು ಸತಿಯಾಗುವಂತೆ ಕೇಳಿಕೊಂಡು ಕಿರುಕುಳ ನೀಡಿದ್ದಾರೆ. ಯಾರಾದರೂ ಒಳ್ಳೆಯ ಸ್ವಭಾವದ ಮಹಿಳೆಯಾಗಿದ್ದರೆ ಅವಳು ಸತಿಯಾಗಬೇಕು ಎಂದು ಕುಟುಂಬ ಸದಸ್ಯರು ಒತ್ತಡ ಹೇರಿದ್ದರು ಎಂದು ಎಫ್‌ಐಆರ್ ನಲ್ಲಿ ಬರೆಯಲಾಗಿದೆ.

ರಾಜಸ್ಥಾನದ ರಾಜಸಮಂದ್‌ನ ಡೆವಲಪರ್ ಆಗಿದ್ದ ಸಂಗೀತಾ ಅವರ ಪತಿ ವಿಷ್ಣು ಕುಮಾರ್ ಅವರು ಮೇ 10, 2022 ರಂದು ಅಪಘಾತದಲ್ಲಿ ನಿಧನರಾದರು. ದುರಂತದ ನಂತರ ಸಂಗೀತಾ ತನ್ನ ಅತ್ತೆಯೊಂದಿಗೆ ವಾಸಿಸುತ್ತಿದ್ದರು. ಆದರೆ ತನ್ನ ಗಂಡನ ಸಾವಿಗೆ ಅಪಹಾಸ್ಯ ಮಾಡಿದ್ದರಿಂದ ಬೇಸತ್ತು ಸೂರತ್‌ನಲ್ಲಿರುವ ತನ್ನ ಹೆತ್ತವರ ಮನೆಗೆ ತೆರಳಿದ್ದರು. ಅತ್ತೆಯ ನಿರಂತರ ಕಿರುಕುಳದಿಂದಾಗಿ ಆಕೆ ಸುಮಾರು ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

1987ರ ಸತಿ ಪದ್ಧತಿ ಆಯೋಗದ (ತಡೆಗಟ್ಟುವಿಕೆ) ಕಾಯಿದೆಯೊಂದಿಗೆ 1988 ರಲ್ಲಿ ದೀರ್ಘಕಾಲದಿಂದ ರದ್ದುಗೊಂಡ ಸತಿ ಪದ್ಧತಿಯ ವಿರುದ್ಧದ ಕಾನೂನನ್ನು ಕಠಿಣಗೊಳಿಸಲಾಗಿದೆ. ಆದರೆ ಉತ್ತರ ಭಾರತದಲ್ಲಿ ಈ ಅನಿಷ್ಠ ಪದ್ದತಿ ಆಚರಣೆಯಲ್ಲಿ ಸ್ವಾತಂತ್ರ್ಯ ನಂತರವೂ 40 ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...