Homeಮುಖಪುಟಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಸ್ವಾತಂತ್ರ್ಯ ಪೂರ್ವದಲ್ಲಿಯೇ ಅನಿಷ್ಟ ಪದ್ದತಿಯೆಂಬ ಕಾರಣಕ್ಕೆ ನಿಷೇಧಕ್ಕೊಳಗಾಗಿದ್ದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ಬೆಳಕಿಗೆ ಬಂದಿದೆ. ಅತ್ತೆಯಂದಿರು ಸತಿಯಾಗಲು ಒತ್ತಡ ಹೇರಿದ್ದರಿಂದ ನೊಂದ 28 ವರ್ಷ ವಯಸ್ಸಿನ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಮಹಿಳೆಯೊಬ್ಬರು ಸಬರಮತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ.

ಈ ಘಟನೆಯಿಂದಾಗಿ ಗಂಡ ಮೃತಪಟ್ಟಾಗ ಆ ಶವದ ಚಿತೆಗೆ ಆತನ ಪತ್ನಿಯೂ ಹಾರಿ ಜೀವ ತೆರಬೇಕಾದ ಪುರಾತನ, ಕಾನೂನುಬಾಹಿರ ಕ್ರಿಯೆಯಾದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ನಮ್ಮ ದೇಶದ ದೊಡ್ಡ ದುರಂತವಾಗಿದೆ.

ಘಟನೆಯ ವಿವರ

ರಾಜಸ್ಥಾನದ ಭಿಲ್ವಾಡ ಮೂಲದ ಸಂಗೀತಾ ಲಖ್ರಾ ಅವರು ಕಳೆದ ವರ್ಷ ಫೆಬ್ರವರಿ 10 ರಂದು ತನ್ನ ಪತಿಯ ಸಾವಿನ ನಂತರ ತನ್ನ ಅತ್ತೆಯಂದಿರು ಸತಿಯಾಗುವಂತೆ ತನಗೆ ನೀಡಿದ ಕಿರುಕುಳದ ವಿವರಗಳೊಂದಿಗೆ ಡೆತ್ ನೋಟ್ ಬರೆದಿದ್ದಾರೆ. ಅದರ ಆಧಾರದ ಮೇಲೆ ಆಕೆಯ ತಂದೆ ಸೂರತ್‌ನಲ್ಲಿ ದಿನಸಿ ವ್ಯಾಪಾರಿಯಾಗಿರುವ ರಮೇಶ್ ಲಖ್ರಾರವರು ಸಬರಮತಿ ರಿವರ್‌ಫ್ರಂಟ್ (ಪಶ್ಚಿಮ) ಪೊಲೀಸರಿಗೆ ಆಕೆಯ ಅತ್ತೆ ಮತ್ತು ಇತರ ನಾಲ್ವರ ವಿರುದ್ಧ ಕೌಟುಂಬಿಕ ಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ದೂರಿನ ಪ್ರಕಾರ ತನ್ನ ಮಗಳು ಒಂದು ವರ್ಷದಿಂದ ಖಿನ್ನತೆಯಿಂದ ಬಳಲುತ್ತಿದ್ದಳು. ಮೇ 10 ರಂದು ಸಂಗೀತಾ ನಾಪತ್ತೆಯಾಗಿದ್ದು, ಮೇ 11 ರ ಬೆಳಿಗ್ಗೆ ಆಕೆಯ ದೇಹವನ್ನು ಸಬರಮತಿಯಿಂದ ಹೊರತೆಗೆಯಲಾಯಿತು. ಆಕೆ ತನ್ನ ಸಹೋದರ ನಿಮೇಶ್‌ಗೆ ವಾಟ್ಸಾಪ್‌ನಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮಿಸಿ ಎಂಬ ಪಠ್ಯ ಮತ್ತು ಆಡಿಯೊ ಸಂದೇಶಗಳನ್ನು ಸಹ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದ ಸಂಗೀತಾ, ಪತಿಯ ಮರಣದ ನಂತರ ಸೂರತ್‌ನಲ್ಲಿರುವ ತನ್ನ ತಾಯಿಯ ಮನೆಗೆ ತೆರಳಿದ್ದರು. ಒಂದು ತಿಂಗಳಿನಿಂದ ಮಾಲ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದರು ಎನ್ನಲಾಗಿದೆ.

“ಸಂಗೀತಾ ಬರೆದ ಆತ್ಮಹತ್ಯೆ ಪತ್ರದಲ್ಲಿ ತನ್ನ ಅತ್ತೆ ಕೈಲಾಶ್ ದೇವಿ ಲಖರಾ ಮತ್ತು ಇತರ ನಾಲ್ವರು ಅತ್ತೆಯ ಕುಟುಂಬದ ಸದಸ್ಯರು ಸತಿಯಾಗುವಂತೆ ಕೇಳಿಕೊಂಡು ಕಿರುಕುಳ ನೀಡಿದ್ದಾರೆ. ಯಾರಾದರೂ ಒಳ್ಳೆಯ ಸ್ವಭಾವದ ಮಹಿಳೆಯಾಗಿದ್ದರೆ ಅವಳು ಸತಿಯಾಗಬೇಕು ಎಂದು ಕುಟುಂಬ ಸದಸ್ಯರು ಒತ್ತಡ ಹೇರಿದ್ದರು ಎಂದು ಎಫ್‌ಐಆರ್ ನಲ್ಲಿ ಬರೆಯಲಾಗಿದೆ.

ರಾಜಸ್ಥಾನದ ರಾಜಸಮಂದ್‌ನ ಡೆವಲಪರ್ ಆಗಿದ್ದ ಸಂಗೀತಾ ಅವರ ಪತಿ ವಿಷ್ಣು ಕುಮಾರ್ ಅವರು ಮೇ 10, 2022 ರಂದು ಅಪಘಾತದಲ್ಲಿ ನಿಧನರಾದರು. ದುರಂತದ ನಂತರ ಸಂಗೀತಾ ತನ್ನ ಅತ್ತೆಯೊಂದಿಗೆ ವಾಸಿಸುತ್ತಿದ್ದರು. ಆದರೆ ತನ್ನ ಗಂಡನ ಸಾವಿಗೆ ಅಪಹಾಸ್ಯ ಮಾಡಿದ್ದರಿಂದ ಬೇಸತ್ತು ಸೂರತ್‌ನಲ್ಲಿರುವ ತನ್ನ ಹೆತ್ತವರ ಮನೆಗೆ ತೆರಳಿದ್ದರು. ಅತ್ತೆಯ ನಿರಂತರ ಕಿರುಕುಳದಿಂದಾಗಿ ಆಕೆ ಸುಮಾರು ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

1987ರ ಸತಿ ಪದ್ಧತಿ ಆಯೋಗದ (ತಡೆಗಟ್ಟುವಿಕೆ) ಕಾಯಿದೆಯೊಂದಿಗೆ 1988 ರಲ್ಲಿ ದೀರ್ಘಕಾಲದಿಂದ ರದ್ದುಗೊಂಡ ಸತಿ ಪದ್ಧತಿಯ ವಿರುದ್ಧದ ಕಾನೂನನ್ನು ಕಠಿಣಗೊಳಿಸಲಾಗಿದೆ. ಆದರೆ ಉತ್ತರ ಭಾರತದಲ್ಲಿ ಈ ಅನಿಷ್ಠ ಪದ್ದತಿ ಆಚರಣೆಯಲ್ಲಿ ಸ್ವಾತಂತ್ರ್ಯ ನಂತರವೂ 40 ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...