Homeಮುಖಪುಟಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

- Advertisement -
- Advertisement -

ಸ್ವಾತಂತ್ರ್ಯ ಪೂರ್ವದಲ್ಲಿಯೇ ಅನಿಷ್ಟ ಪದ್ದತಿಯೆಂಬ ಕಾರಣಕ್ಕೆ ನಿಷೇಧಕ್ಕೊಳಗಾಗಿದ್ದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ಬೆಳಕಿಗೆ ಬಂದಿದೆ. ಅತ್ತೆಯಂದಿರು ಸತಿಯಾಗಲು ಒತ್ತಡ ಹೇರಿದ್ದರಿಂದ ನೊಂದ 28 ವರ್ಷ ವಯಸ್ಸಿನ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಮಹಿಳೆಯೊಬ್ಬರು ಸಬರಮತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ವರದಿಯಾಗಿದೆ.

ಈ ಘಟನೆಯಿಂದಾಗಿ ಗಂಡ ಮೃತಪಟ್ಟಾಗ ಆ ಶವದ ಚಿತೆಗೆ ಆತನ ಪತ್ನಿಯೂ ಹಾರಿ ಜೀವ ತೆರಬೇಕಾದ ಪುರಾತನ, ಕಾನೂನುಬಾಹಿರ ಕ್ರಿಯೆಯಾದ ಸತಿ ಸಹಗಮನ ಪದ್ದತಿ ಇನ್ನೂ ಜೀವಂತವಿರುವುದು ನಮ್ಮ ದೇಶದ ದೊಡ್ಡ ದುರಂತವಾಗಿದೆ.

ಘಟನೆಯ ವಿವರ

ರಾಜಸ್ಥಾನದ ಭಿಲ್ವಾಡ ಮೂಲದ ಸಂಗೀತಾ ಲಖ್ರಾ ಅವರು ಕಳೆದ ವರ್ಷ ಫೆಬ್ರವರಿ 10 ರಂದು ತನ್ನ ಪತಿಯ ಸಾವಿನ ನಂತರ ತನ್ನ ಅತ್ತೆಯಂದಿರು ಸತಿಯಾಗುವಂತೆ ತನಗೆ ನೀಡಿದ ಕಿರುಕುಳದ ವಿವರಗಳೊಂದಿಗೆ ಡೆತ್ ನೋಟ್ ಬರೆದಿದ್ದಾರೆ. ಅದರ ಆಧಾರದ ಮೇಲೆ ಆಕೆಯ ತಂದೆ ಸೂರತ್‌ನಲ್ಲಿ ದಿನಸಿ ವ್ಯಾಪಾರಿಯಾಗಿರುವ ರಮೇಶ್ ಲಖ್ರಾರವರು ಸಬರಮತಿ ರಿವರ್‌ಫ್ರಂಟ್ (ಪಶ್ಚಿಮ) ಪೊಲೀಸರಿಗೆ ಆಕೆಯ ಅತ್ತೆ ಮತ್ತು ಇತರ ನಾಲ್ವರ ವಿರುದ್ಧ ಕೌಟುಂಬಿಕ ಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ದೂರಿನ ಪ್ರಕಾರ ತನ್ನ ಮಗಳು ಒಂದು ವರ್ಷದಿಂದ ಖಿನ್ನತೆಯಿಂದ ಬಳಲುತ್ತಿದ್ದಳು. ಮೇ 10 ರಂದು ಸಂಗೀತಾ ನಾಪತ್ತೆಯಾಗಿದ್ದು, ಮೇ 11 ರ ಬೆಳಿಗ್ಗೆ ಆಕೆಯ ದೇಹವನ್ನು ಸಬರಮತಿಯಿಂದ ಹೊರತೆಗೆಯಲಾಯಿತು. ಆಕೆ ತನ್ನ ಸಹೋದರ ನಿಮೇಶ್‌ಗೆ ವಾಟ್ಸಾಪ್‌ನಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮಿಸಿ ಎಂಬ ಪಠ್ಯ ಮತ್ತು ಆಡಿಯೊ ಸಂದೇಶಗಳನ್ನು ಸಹ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದ ಸಂಗೀತಾ, ಪತಿಯ ಮರಣದ ನಂತರ ಸೂರತ್‌ನಲ್ಲಿರುವ ತನ್ನ ತಾಯಿಯ ಮನೆಗೆ ತೆರಳಿದ್ದರು. ಒಂದು ತಿಂಗಳಿನಿಂದ ಮಾಲ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದರು ಎನ್ನಲಾಗಿದೆ.

“ಸಂಗೀತಾ ಬರೆದ ಆತ್ಮಹತ್ಯೆ ಪತ್ರದಲ್ಲಿ ತನ್ನ ಅತ್ತೆ ಕೈಲಾಶ್ ದೇವಿ ಲಖರಾ ಮತ್ತು ಇತರ ನಾಲ್ವರು ಅತ್ತೆಯ ಕುಟುಂಬದ ಸದಸ್ಯರು ಸತಿಯಾಗುವಂತೆ ಕೇಳಿಕೊಂಡು ಕಿರುಕುಳ ನೀಡಿದ್ದಾರೆ. ಯಾರಾದರೂ ಒಳ್ಳೆಯ ಸ್ವಭಾವದ ಮಹಿಳೆಯಾಗಿದ್ದರೆ ಅವಳು ಸತಿಯಾಗಬೇಕು ಎಂದು ಕುಟುಂಬ ಸದಸ್ಯರು ಒತ್ತಡ ಹೇರಿದ್ದರು ಎಂದು ಎಫ್‌ಐಆರ್ ನಲ್ಲಿ ಬರೆಯಲಾಗಿದೆ.

ರಾಜಸ್ಥಾನದ ರಾಜಸಮಂದ್‌ನ ಡೆವಲಪರ್ ಆಗಿದ್ದ ಸಂಗೀತಾ ಅವರ ಪತಿ ವಿಷ್ಣು ಕುಮಾರ್ ಅವರು ಮೇ 10, 2022 ರಂದು ಅಪಘಾತದಲ್ಲಿ ನಿಧನರಾದರು. ದುರಂತದ ನಂತರ ಸಂಗೀತಾ ತನ್ನ ಅತ್ತೆಯೊಂದಿಗೆ ವಾಸಿಸುತ್ತಿದ್ದರು. ಆದರೆ ತನ್ನ ಗಂಡನ ಸಾವಿಗೆ ಅಪಹಾಸ್ಯ ಮಾಡಿದ್ದರಿಂದ ಬೇಸತ್ತು ಸೂರತ್‌ನಲ್ಲಿರುವ ತನ್ನ ಹೆತ್ತವರ ಮನೆಗೆ ತೆರಳಿದ್ದರು. ಅತ್ತೆಯ ನಿರಂತರ ಕಿರುಕುಳದಿಂದಾಗಿ ಆಕೆ ಸುಮಾರು ಒಂದು ವರ್ಷದಿಂದ ಖಿನ್ನತೆಗೆ ಒಳಗಾಗಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

1987ರ ಸತಿ ಪದ್ಧತಿ ಆಯೋಗದ (ತಡೆಗಟ್ಟುವಿಕೆ) ಕಾಯಿದೆಯೊಂದಿಗೆ 1988 ರಲ್ಲಿ ದೀರ್ಘಕಾಲದಿಂದ ರದ್ದುಗೊಂಡ ಸತಿ ಪದ್ಧತಿಯ ವಿರುದ್ಧದ ಕಾನೂನನ್ನು ಕಠಿಣಗೊಳಿಸಲಾಗಿದೆ. ಆದರೆ ಉತ್ತರ ಭಾರತದಲ್ಲಿ ಈ ಅನಿಷ್ಠ ಪದ್ದತಿ ಆಚರಣೆಯಲ್ಲಿ ಸ್ವಾತಂತ್ರ್ಯ ನಂತರವೂ 40 ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...