Homeನಿಜವೋ ಸುಳ್ಳೋವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

- Advertisement -
- Advertisement -

ದಿ ಕ್ವಿಂಟ್ ಪೋರ್ಟಲ್‍ನವರು ಮೊದಲ ನಾಲ್ಕು ಹಂತಗಳಲ್ಲಿ ನಡೆದ ಮತದಾನ ಪ್ರಮಾಣ ಮತ್ತು ಏಣಿಕೆಯಾದ ಮತಗಳ ಸಂಖ್ಯೆಯನ್ನು ಕೂಲಂಕುಶವಾಗಿ ಪರಿಗಣಿಸಿದಾಗ ದಿಗ್ಭ್ರಮೆಗೊಳಿಸುವ ವಿಚಾರ ಹೊರಬಂದಿದೆ. 373 ಕ್ಷೇತ್ರಗಳಲ್ಲಿ ವೋಟ್ ಆದ ಮತಗಳಿಗೂ, ಎಣಿಕೆ ಆದ ಮತಗಳಿಗೂ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಆದರೆ ಇಲ್ಲಿವರೆಗೆ ಈ ಕುರಿತು ಸ್ಪಷ್ಟನೆ ನೀಡದ ಚುನಾವಣಾ ಆಯೋಗ, ತನ್ನ ವೆಬ್‍ಸೈಟಿನಿಂದ ಮಾಹಿತಿ-ಅಂಕಿಅಂಶಗಳನ್ನೇ ತೆಗೆದು ಹಾಕುವ ದುಸ್ಸಾಹಸ ಮಾಡುವ ಮೂಲಕ ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ…..

ಚುನಾವಣಾ ಅಯೋಗವೇ ಅಧಿಕೃತವಾಗಿ ಸಾರ್ವಜನಿಕರಿಗೆಂದೇ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಎರಡು ಸೆಟ್ ಅಂಕಿ-ಸಂಖ್ಯೆಗಳನ್ನು ತೆಗೆದುಕೊಂಡು ಈ ವ್ಯತ್ಯಾಸಗಳನ್ನು ಪತ್ತೆ ಮಾಡಲಾಗಿದೆ. ಮೊದಲ ನಾಲ್ಕು ಹಂತಗಳಲ್ಲಿ ನಡೆದ 373 ಕ್ಷೇತ್ರಗಳಲ್ಲಿ ಜನರು ವೋಟ್ ಮಾಡಿದ್ದ ಮತಗಳು ಮತ್ತು ಮೇ 23ರಂದು ಕೌಂಟ್ ಆದ ಮತಗಳಲ್ಲಿ ಸಾಕಷ್ಟು ವ್ಯತ್ಯಾಸ ಕಣ್ಣಿಗೆ ಹೊಡೆಯುವಂತೆ ಕಾಣುತ್ತಿದೆ.

ತಮಿಳುನಾಡಿನ ಕಂಚೀಪುರಂ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 12,14,036 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,32,417 ಮತಗಳು! ಈ ಹೆಚ್ಚುವರಿ 18,331 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಧರ್ಮಪುರಿ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 11,94, 440 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,12,311 ಮತಗಳು! ಈ ಹೆಚ್ಚುವರಿ 17,871 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಪೆರಂಬದೂರು ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 13,88,666 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 14,03,178 ಮತಗಳು! ಈ ಹೆಚ್ಚುವರಿ 14,512 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಇವು ಮೊದಲ ಹಂತದಲ್ಲಿ ನಡೆದ 373 ಕೇತ್ರಗಳಲ್ಲಿ ಅತಿ ಹೆಚ್ಚು ಪ್ರಮಾಣದ ವ್ಯತ್ಯಾಸ ತೋರಿಸಿದ 4 ಕ್ಷೇತ್ರಗಳು. ಹೀಗೇ ಇನ್ನು 220 ಕ್ಷೇತ್ರಗಳಲ್ಲಿ ಹೆಚ್ಚುವರಿ ಮತಗಳು ‘ಉದ್ಭವಿಸಿದರೆ’, ಉಳಿದ ಕ್ಷೇತ್ರಗಳಲ್ಲಿ ಅವು ವೋಟ್ ಆಗಿದ್ದಕ್ಕಿಂತ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿವೆ!

ಆಯೋಗದ ವೆಬ್‍ಸೈಟಿನಿಂದ ‘ಡೇಟಾ’ ಮಾಯ!

ಚುನಾವಣಾ ಆಯೋಗವು ಮೊದಲ ನಾಲ್ಕು ಹಂತಗಳ ಡೇಟಾವನ್ನು ಪ್ರಕಟಿಸಿ, ಇವು ಪರಿಪೂರ್ಣ ಅಂಕಿಅಂಶಗಳು ಎಂದು ಸಾರಿತ್ತು. ಹಾಗಾಗಿ ಕ್ವಿಂಟ್ ಪೋರ್ಟಲ್ ಈ ಡೇಟಾದ ಆಧಾರದಲ್ಲೇ ಪರೀಕ್ಷೆ ನಡೆಸಿತು. ಯಾವಾಗ ದೊಡ್ಡ ವ್ಯತ್ಯಾಸಗಳು ಕಂಡವೋ, ಕ್ವಿಂಟ್ ಈ ಕುರಿತಾಗಿ ಆಯೋಗವನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸದ ಆಯೋಗವು, ತನ್ನ ವೆಬ್‍ಸೈಟಿನಿಂದ ಈ ಎಲ್ಲ ಅಂಕಿಅಂಶಗಳನ್ನು ತೆಗೆದು ಹಾಕುವ ಮೂಲಕ ಜನರ ಸಂಶಯವನ್ನು ಇನ್ನಷ್ಟು ಹೆಚ್ಚಿಸಿದೆ.

ಕ್ವಿಂಟ್ ತಾನು ಆಯೋಗದ ವೆಬ್‍ಸೈಟಿನಿಂದ ಡೌನ್‍ಲೋಡ್ ಮಾಡಿದ ಅಂಕಿಅಂಶಗಳು ಮತ್ತು ಪತ್ತೆ ಮಾಡಿದ ವ್ಯತ್ಯಾಸಗಳ ಕಾಪಿಗಳನ್ನು ಮೇಲ್ ಮೂಲಕ ಇನ್ನೊಮ್ಮೆ ಆಯೋಗಕ್ಕೆ ಕಳಿಸಿತು. ಈವರೆಗೂ ಆಯೋಗದಿಂದ ಉತ್ತರವೇ ಇಲ್ಲ!

ಮೇ 23ರ ಚುನಾವಣೆ ಮುಗಿದು 6-7 ದಿನಗಳಾದರೂ (ಮೇ 27ರಂದು) ಉಳಿದೆಲ್ಲ ಕ್ಷೇತ್ರಗಳ ವೋಟ್ ಆದ ಡೇಟಾವನ್ನು ಕಂಪೈಲ್ ಮಾಡಲಾಗಿಲ್ಲ ಎಂಬ ಸಬೂಬನ್ನೂ ಆಯೋಗ ನೀಡಿದೆ. ಯಾಕೆ ಸಂಪೂರ್ಣ ಮತ ಎಣಿಕೆ ಮುಗಿದ ಏಳು ದಿನವಾದರೂ ಡೇಟಾವನ್ನು ಕಂಪೈಲ್ ಮಾಡಲಿಲ್ಲ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ.

ಈ ಕುರಿತಂತೆ ಕ್ವಿಂಟ್ ಜೊತೆ ಮಾತಾಡಿರುವ ಮಾಜಿ ಚುನಾವಣಾ ಆಯುಕ್ತ ರಾವತ್ ಅವರು. ‘ಇದೊಂದು ಗಂಭೀರ ವಿಷಯ. ನಾನು ಆಯುಕ್ತನಾಗಿದ್ದಾಗ ಇಂಥದ್ದು ಎಂದೂ ಸಂಭವಿಸರಲೇ ಇಲ್ಲ. ಆಯೋಗ ಇದಕ್ಕೆ ಸ್ಪಷ್ಟನೆ ನೀಡಲೇಬೇಕು’ ಎಂದು ಒತ್ತಾಯಿಸಿದ್ದಾರೆ. ಇತರ ಮಾಜಿ ಆಯುಕ್ತರಾದ ಗೋಪಾಲಸ್ವಾಮಿ, ಖುರೇಶಿ ಮತ್ತು ಬ್ರಹ್ಮಾ ಅವರು ಕೂಡ ಆಯೋಗ ಇದಕ್ಕೆಲ್ಲ ಕೂಡಲೇ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಚಲಾವಣೆಯಾದ ಮತಗಳಿಗಿಂತ ಕೌಂಟ್ ಆದ ಮತಗಳೆ ಹೆಚ್ಚು 

ಇಲ್ಲಿ ಆಯೋಗ ಈ ನಾಲ್ಕು ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡುವ ಹೊಣೆ ಹೊರಬೇಕು:

ಮೊದಲ 4 ಹಂತದ ಮತದಾನದಲ್ಲಿ ಮತದಾನವಾದ ಅಂತಿಮ ಅಂಕಿಅಂಶಗಳು ಎಂದು ಆಯೋಗ ತನ್ನ ವೆಬ್‍ಸೈಟಿನಲ್ಲಿ ಅಪ್‍ಲೋಡ್ ಮಾಡಿದ್ದು ಏಕೆ?
ದಿಡೀರ್ ಎಂದು ಈ ಡೇಟಾವನ್ನು ವೆಬ್‍ಸೈಟಿನಿಂದ ತೆಗೆದದ್ದು ಏಕೆ?
ಈ ಗಂಭಿರ ವ್ಯತ್ಯಾಸಗಳ ಕುರಿತು ಆಯೋಗ ಏಕೆ ಉತ್ತರಿಸುತ್ತಿಲ್ಲ? ಅದಕ್ಕೆ ಇದರಲ್ಲಿ ಮುಚ್ಚಿಡುವಂತಾದ್ದು ಏನಾದರೂ ಇದೆಯೇ?
ಈ ದೊಡ್ಡ ವ್ಯತ್ಯಾಸಗಳು ಕಂಡುಬರಲು ಕಾರಣವೇನು? ಇವಿಎಂಗಳು ದೋಷಪೂರಿತವಾಗಿವೆಯೇ?

(ಆಧಾರ: ದಿ ಕ್ವಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....