Homeನಿಜವೋ ಸುಳ್ಳೋವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

- Advertisement -
- Advertisement -

ದಿ ಕ್ವಿಂಟ್ ಪೋರ್ಟಲ್‍ನವರು ಮೊದಲ ನಾಲ್ಕು ಹಂತಗಳಲ್ಲಿ ನಡೆದ ಮತದಾನ ಪ್ರಮಾಣ ಮತ್ತು ಏಣಿಕೆಯಾದ ಮತಗಳ ಸಂಖ್ಯೆಯನ್ನು ಕೂಲಂಕುಶವಾಗಿ ಪರಿಗಣಿಸಿದಾಗ ದಿಗ್ಭ್ರಮೆಗೊಳಿಸುವ ವಿಚಾರ ಹೊರಬಂದಿದೆ. 373 ಕ್ಷೇತ್ರಗಳಲ್ಲಿ ವೋಟ್ ಆದ ಮತಗಳಿಗೂ, ಎಣಿಕೆ ಆದ ಮತಗಳಿಗೂ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಆದರೆ ಇಲ್ಲಿವರೆಗೆ ಈ ಕುರಿತು ಸ್ಪಷ್ಟನೆ ನೀಡದ ಚುನಾವಣಾ ಆಯೋಗ, ತನ್ನ ವೆಬ್‍ಸೈಟಿನಿಂದ ಮಾಹಿತಿ-ಅಂಕಿಅಂಶಗಳನ್ನೇ ತೆಗೆದು ಹಾಕುವ ದುಸ್ಸಾಹಸ ಮಾಡುವ ಮೂಲಕ ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ…..

ಚುನಾವಣಾ ಅಯೋಗವೇ ಅಧಿಕೃತವಾಗಿ ಸಾರ್ವಜನಿಕರಿಗೆಂದೇ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಎರಡು ಸೆಟ್ ಅಂಕಿ-ಸಂಖ್ಯೆಗಳನ್ನು ತೆಗೆದುಕೊಂಡು ಈ ವ್ಯತ್ಯಾಸಗಳನ್ನು ಪತ್ತೆ ಮಾಡಲಾಗಿದೆ. ಮೊದಲ ನಾಲ್ಕು ಹಂತಗಳಲ್ಲಿ ನಡೆದ 373 ಕ್ಷೇತ್ರಗಳಲ್ಲಿ ಜನರು ವೋಟ್ ಮಾಡಿದ್ದ ಮತಗಳು ಮತ್ತು ಮೇ 23ರಂದು ಕೌಂಟ್ ಆದ ಮತಗಳಲ್ಲಿ ಸಾಕಷ್ಟು ವ್ಯತ್ಯಾಸ ಕಣ್ಣಿಗೆ ಹೊಡೆಯುವಂತೆ ಕಾಣುತ್ತಿದೆ.

ತಮಿಳುನಾಡಿನ ಕಂಚೀಪುರಂ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 12,14,036 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,32,417 ಮತಗಳು! ಈ ಹೆಚ್ಚುವರಿ 18,331 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಧರ್ಮಪುರಿ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 11,94, 440 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,12,311 ಮತಗಳು! ಈ ಹೆಚ್ಚುವರಿ 17,871 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಪೆರಂಬದೂರು ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 13,88,666 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 14,03,178 ಮತಗಳು! ಈ ಹೆಚ್ಚುವರಿ 14,512 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಇವು ಮೊದಲ ಹಂತದಲ್ಲಿ ನಡೆದ 373 ಕೇತ್ರಗಳಲ್ಲಿ ಅತಿ ಹೆಚ್ಚು ಪ್ರಮಾಣದ ವ್ಯತ್ಯಾಸ ತೋರಿಸಿದ 4 ಕ್ಷೇತ್ರಗಳು. ಹೀಗೇ ಇನ್ನು 220 ಕ್ಷೇತ್ರಗಳಲ್ಲಿ ಹೆಚ್ಚುವರಿ ಮತಗಳು ‘ಉದ್ಭವಿಸಿದರೆ’, ಉಳಿದ ಕ್ಷೇತ್ರಗಳಲ್ಲಿ ಅವು ವೋಟ್ ಆಗಿದ್ದಕ್ಕಿಂತ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿವೆ!

ಆಯೋಗದ ವೆಬ್‍ಸೈಟಿನಿಂದ ‘ಡೇಟಾ’ ಮಾಯ!

ಚುನಾವಣಾ ಆಯೋಗವು ಮೊದಲ ನಾಲ್ಕು ಹಂತಗಳ ಡೇಟಾವನ್ನು ಪ್ರಕಟಿಸಿ, ಇವು ಪರಿಪೂರ್ಣ ಅಂಕಿಅಂಶಗಳು ಎಂದು ಸಾರಿತ್ತು. ಹಾಗಾಗಿ ಕ್ವಿಂಟ್ ಪೋರ್ಟಲ್ ಈ ಡೇಟಾದ ಆಧಾರದಲ್ಲೇ ಪರೀಕ್ಷೆ ನಡೆಸಿತು. ಯಾವಾಗ ದೊಡ್ಡ ವ್ಯತ್ಯಾಸಗಳು ಕಂಡವೋ, ಕ್ವಿಂಟ್ ಈ ಕುರಿತಾಗಿ ಆಯೋಗವನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸದ ಆಯೋಗವು, ತನ್ನ ವೆಬ್‍ಸೈಟಿನಿಂದ ಈ ಎಲ್ಲ ಅಂಕಿಅಂಶಗಳನ್ನು ತೆಗೆದು ಹಾಕುವ ಮೂಲಕ ಜನರ ಸಂಶಯವನ್ನು ಇನ್ನಷ್ಟು ಹೆಚ್ಚಿಸಿದೆ.

ಕ್ವಿಂಟ್ ತಾನು ಆಯೋಗದ ವೆಬ್‍ಸೈಟಿನಿಂದ ಡೌನ್‍ಲೋಡ್ ಮಾಡಿದ ಅಂಕಿಅಂಶಗಳು ಮತ್ತು ಪತ್ತೆ ಮಾಡಿದ ವ್ಯತ್ಯಾಸಗಳ ಕಾಪಿಗಳನ್ನು ಮೇಲ್ ಮೂಲಕ ಇನ್ನೊಮ್ಮೆ ಆಯೋಗಕ್ಕೆ ಕಳಿಸಿತು. ಈವರೆಗೂ ಆಯೋಗದಿಂದ ಉತ್ತರವೇ ಇಲ್ಲ!

ಮೇ 23ರ ಚುನಾವಣೆ ಮುಗಿದು 6-7 ದಿನಗಳಾದರೂ (ಮೇ 27ರಂದು) ಉಳಿದೆಲ್ಲ ಕ್ಷೇತ್ರಗಳ ವೋಟ್ ಆದ ಡೇಟಾವನ್ನು ಕಂಪೈಲ್ ಮಾಡಲಾಗಿಲ್ಲ ಎಂಬ ಸಬೂಬನ್ನೂ ಆಯೋಗ ನೀಡಿದೆ. ಯಾಕೆ ಸಂಪೂರ್ಣ ಮತ ಎಣಿಕೆ ಮುಗಿದ ಏಳು ದಿನವಾದರೂ ಡೇಟಾವನ್ನು ಕಂಪೈಲ್ ಮಾಡಲಿಲ್ಲ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ.

ಈ ಕುರಿತಂತೆ ಕ್ವಿಂಟ್ ಜೊತೆ ಮಾತಾಡಿರುವ ಮಾಜಿ ಚುನಾವಣಾ ಆಯುಕ್ತ ರಾವತ್ ಅವರು. ‘ಇದೊಂದು ಗಂಭೀರ ವಿಷಯ. ನಾನು ಆಯುಕ್ತನಾಗಿದ್ದಾಗ ಇಂಥದ್ದು ಎಂದೂ ಸಂಭವಿಸರಲೇ ಇಲ್ಲ. ಆಯೋಗ ಇದಕ್ಕೆ ಸ್ಪಷ್ಟನೆ ನೀಡಲೇಬೇಕು’ ಎಂದು ಒತ್ತಾಯಿಸಿದ್ದಾರೆ. ಇತರ ಮಾಜಿ ಆಯುಕ್ತರಾದ ಗೋಪಾಲಸ್ವಾಮಿ, ಖುರೇಶಿ ಮತ್ತು ಬ್ರಹ್ಮಾ ಅವರು ಕೂಡ ಆಯೋಗ ಇದಕ್ಕೆಲ್ಲ ಕೂಡಲೇ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಚಲಾವಣೆಯಾದ ಮತಗಳಿಗಿಂತ ಕೌಂಟ್ ಆದ ಮತಗಳೆ ಹೆಚ್ಚು 

ಇಲ್ಲಿ ಆಯೋಗ ಈ ನಾಲ್ಕು ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡುವ ಹೊಣೆ ಹೊರಬೇಕು:

ಮೊದಲ 4 ಹಂತದ ಮತದಾನದಲ್ಲಿ ಮತದಾನವಾದ ಅಂತಿಮ ಅಂಕಿಅಂಶಗಳು ಎಂದು ಆಯೋಗ ತನ್ನ ವೆಬ್‍ಸೈಟಿನಲ್ಲಿ ಅಪ್‍ಲೋಡ್ ಮಾಡಿದ್ದು ಏಕೆ?
ದಿಡೀರ್ ಎಂದು ಈ ಡೇಟಾವನ್ನು ವೆಬ್‍ಸೈಟಿನಿಂದ ತೆಗೆದದ್ದು ಏಕೆ?
ಈ ಗಂಭಿರ ವ್ಯತ್ಯಾಸಗಳ ಕುರಿತು ಆಯೋಗ ಏಕೆ ಉತ್ತರಿಸುತ್ತಿಲ್ಲ? ಅದಕ್ಕೆ ಇದರಲ್ಲಿ ಮುಚ್ಚಿಡುವಂತಾದ್ದು ಏನಾದರೂ ಇದೆಯೇ?
ಈ ದೊಡ್ಡ ವ್ಯತ್ಯಾಸಗಳು ಕಂಡುಬರಲು ಕಾರಣವೇನು? ಇವಿಎಂಗಳು ದೋಷಪೂರಿತವಾಗಿವೆಯೇ?

(ಆಧಾರ: ದಿ ಕ್ವಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....