Homeನಿಜವೋ ಸುಳ್ಳೋವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

- Advertisement -
- Advertisement -

ದಿ ಕ್ವಿಂಟ್ ಪೋರ್ಟಲ್‍ನವರು ಮೊದಲ ನಾಲ್ಕು ಹಂತಗಳಲ್ಲಿ ನಡೆದ ಮತದಾನ ಪ್ರಮಾಣ ಮತ್ತು ಏಣಿಕೆಯಾದ ಮತಗಳ ಸಂಖ್ಯೆಯನ್ನು ಕೂಲಂಕುಶವಾಗಿ ಪರಿಗಣಿಸಿದಾಗ ದಿಗ್ಭ್ರಮೆಗೊಳಿಸುವ ವಿಚಾರ ಹೊರಬಂದಿದೆ. 373 ಕ್ಷೇತ್ರಗಳಲ್ಲಿ ವೋಟ್ ಆದ ಮತಗಳಿಗೂ, ಎಣಿಕೆ ಆದ ಮತಗಳಿಗೂ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಆದರೆ ಇಲ್ಲಿವರೆಗೆ ಈ ಕುರಿತು ಸ್ಪಷ್ಟನೆ ನೀಡದ ಚುನಾವಣಾ ಆಯೋಗ, ತನ್ನ ವೆಬ್‍ಸೈಟಿನಿಂದ ಮಾಹಿತಿ-ಅಂಕಿಅಂಶಗಳನ್ನೇ ತೆಗೆದು ಹಾಕುವ ದುಸ್ಸಾಹಸ ಮಾಡುವ ಮೂಲಕ ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ…..

ಚುನಾವಣಾ ಅಯೋಗವೇ ಅಧಿಕೃತವಾಗಿ ಸಾರ್ವಜನಿಕರಿಗೆಂದೇ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಎರಡು ಸೆಟ್ ಅಂಕಿ-ಸಂಖ್ಯೆಗಳನ್ನು ತೆಗೆದುಕೊಂಡು ಈ ವ್ಯತ್ಯಾಸಗಳನ್ನು ಪತ್ತೆ ಮಾಡಲಾಗಿದೆ. ಮೊದಲ ನಾಲ್ಕು ಹಂತಗಳಲ್ಲಿ ನಡೆದ 373 ಕ್ಷೇತ್ರಗಳಲ್ಲಿ ಜನರು ವೋಟ್ ಮಾಡಿದ್ದ ಮತಗಳು ಮತ್ತು ಮೇ 23ರಂದು ಕೌಂಟ್ ಆದ ಮತಗಳಲ್ಲಿ ಸಾಕಷ್ಟು ವ್ಯತ್ಯಾಸ ಕಣ್ಣಿಗೆ ಹೊಡೆಯುವಂತೆ ಕಾಣುತ್ತಿದೆ.

ತಮಿಳುನಾಡಿನ ಕಂಚೀಪುರಂ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 12,14,036 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,32,417 ಮತಗಳು! ಈ ಹೆಚ್ಚುವರಿ 18,331 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಧರ್ಮಪುರಿ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 11,94, 440 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,12,311 ಮತಗಳು! ಈ ಹೆಚ್ಚುವರಿ 17,871 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಪೆರಂಬದೂರು ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 13,88,666 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 14,03,178 ಮತಗಳು! ಈ ಹೆಚ್ಚುವರಿ 14,512 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಇವು ಮೊದಲ ಹಂತದಲ್ಲಿ ನಡೆದ 373 ಕೇತ್ರಗಳಲ್ಲಿ ಅತಿ ಹೆಚ್ಚು ಪ್ರಮಾಣದ ವ್ಯತ್ಯಾಸ ತೋರಿಸಿದ 4 ಕ್ಷೇತ್ರಗಳು. ಹೀಗೇ ಇನ್ನು 220 ಕ್ಷೇತ್ರಗಳಲ್ಲಿ ಹೆಚ್ಚುವರಿ ಮತಗಳು ‘ಉದ್ಭವಿಸಿದರೆ’, ಉಳಿದ ಕ್ಷೇತ್ರಗಳಲ್ಲಿ ಅವು ವೋಟ್ ಆಗಿದ್ದಕ್ಕಿಂತ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿವೆ!

ಆಯೋಗದ ವೆಬ್‍ಸೈಟಿನಿಂದ ‘ಡೇಟಾ’ ಮಾಯ!

ಚುನಾವಣಾ ಆಯೋಗವು ಮೊದಲ ನಾಲ್ಕು ಹಂತಗಳ ಡೇಟಾವನ್ನು ಪ್ರಕಟಿಸಿ, ಇವು ಪರಿಪೂರ್ಣ ಅಂಕಿಅಂಶಗಳು ಎಂದು ಸಾರಿತ್ತು. ಹಾಗಾಗಿ ಕ್ವಿಂಟ್ ಪೋರ್ಟಲ್ ಈ ಡೇಟಾದ ಆಧಾರದಲ್ಲೇ ಪರೀಕ್ಷೆ ನಡೆಸಿತು. ಯಾವಾಗ ದೊಡ್ಡ ವ್ಯತ್ಯಾಸಗಳು ಕಂಡವೋ, ಕ್ವಿಂಟ್ ಈ ಕುರಿತಾಗಿ ಆಯೋಗವನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸದ ಆಯೋಗವು, ತನ್ನ ವೆಬ್‍ಸೈಟಿನಿಂದ ಈ ಎಲ್ಲ ಅಂಕಿಅಂಶಗಳನ್ನು ತೆಗೆದು ಹಾಕುವ ಮೂಲಕ ಜನರ ಸಂಶಯವನ್ನು ಇನ್ನಷ್ಟು ಹೆಚ್ಚಿಸಿದೆ.

ಕ್ವಿಂಟ್ ತಾನು ಆಯೋಗದ ವೆಬ್‍ಸೈಟಿನಿಂದ ಡೌನ್‍ಲೋಡ್ ಮಾಡಿದ ಅಂಕಿಅಂಶಗಳು ಮತ್ತು ಪತ್ತೆ ಮಾಡಿದ ವ್ಯತ್ಯಾಸಗಳ ಕಾಪಿಗಳನ್ನು ಮೇಲ್ ಮೂಲಕ ಇನ್ನೊಮ್ಮೆ ಆಯೋಗಕ್ಕೆ ಕಳಿಸಿತು. ಈವರೆಗೂ ಆಯೋಗದಿಂದ ಉತ್ತರವೇ ಇಲ್ಲ!

ಮೇ 23ರ ಚುನಾವಣೆ ಮುಗಿದು 6-7 ದಿನಗಳಾದರೂ (ಮೇ 27ರಂದು) ಉಳಿದೆಲ್ಲ ಕ್ಷೇತ್ರಗಳ ವೋಟ್ ಆದ ಡೇಟಾವನ್ನು ಕಂಪೈಲ್ ಮಾಡಲಾಗಿಲ್ಲ ಎಂಬ ಸಬೂಬನ್ನೂ ಆಯೋಗ ನೀಡಿದೆ. ಯಾಕೆ ಸಂಪೂರ್ಣ ಮತ ಎಣಿಕೆ ಮುಗಿದ ಏಳು ದಿನವಾದರೂ ಡೇಟಾವನ್ನು ಕಂಪೈಲ್ ಮಾಡಲಿಲ್ಲ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ.

ಈ ಕುರಿತಂತೆ ಕ್ವಿಂಟ್ ಜೊತೆ ಮಾತಾಡಿರುವ ಮಾಜಿ ಚುನಾವಣಾ ಆಯುಕ್ತ ರಾವತ್ ಅವರು. ‘ಇದೊಂದು ಗಂಭೀರ ವಿಷಯ. ನಾನು ಆಯುಕ್ತನಾಗಿದ್ದಾಗ ಇಂಥದ್ದು ಎಂದೂ ಸಂಭವಿಸರಲೇ ಇಲ್ಲ. ಆಯೋಗ ಇದಕ್ಕೆ ಸ್ಪಷ್ಟನೆ ನೀಡಲೇಬೇಕು’ ಎಂದು ಒತ್ತಾಯಿಸಿದ್ದಾರೆ. ಇತರ ಮಾಜಿ ಆಯುಕ್ತರಾದ ಗೋಪಾಲಸ್ವಾಮಿ, ಖುರೇಶಿ ಮತ್ತು ಬ್ರಹ್ಮಾ ಅವರು ಕೂಡ ಆಯೋಗ ಇದಕ್ಕೆಲ್ಲ ಕೂಡಲೇ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಚಲಾವಣೆಯಾದ ಮತಗಳಿಗಿಂತ ಕೌಂಟ್ ಆದ ಮತಗಳೆ ಹೆಚ್ಚು 

ಇಲ್ಲಿ ಆಯೋಗ ಈ ನಾಲ್ಕು ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡುವ ಹೊಣೆ ಹೊರಬೇಕು:

ಮೊದಲ 4 ಹಂತದ ಮತದಾನದಲ್ಲಿ ಮತದಾನವಾದ ಅಂತಿಮ ಅಂಕಿಅಂಶಗಳು ಎಂದು ಆಯೋಗ ತನ್ನ ವೆಬ್‍ಸೈಟಿನಲ್ಲಿ ಅಪ್‍ಲೋಡ್ ಮಾಡಿದ್ದು ಏಕೆ?
ದಿಡೀರ್ ಎಂದು ಈ ಡೇಟಾವನ್ನು ವೆಬ್‍ಸೈಟಿನಿಂದ ತೆಗೆದದ್ದು ಏಕೆ?
ಈ ಗಂಭಿರ ವ್ಯತ್ಯಾಸಗಳ ಕುರಿತು ಆಯೋಗ ಏಕೆ ಉತ್ತರಿಸುತ್ತಿಲ್ಲ? ಅದಕ್ಕೆ ಇದರಲ್ಲಿ ಮುಚ್ಚಿಡುವಂತಾದ್ದು ಏನಾದರೂ ಇದೆಯೇ?
ಈ ದೊಡ್ಡ ವ್ಯತ್ಯಾಸಗಳು ಕಂಡುಬರಲು ಕಾರಣವೇನು? ಇವಿಎಂಗಳು ದೋಷಪೂರಿತವಾಗಿವೆಯೇ?

(ಆಧಾರ: ದಿ ಕ್ವಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...