Homeನಿಜವೋ ಸುಳ್ಳೋವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

- Advertisement -
- Advertisement -

ದಿ ಕ್ವಿಂಟ್ ಪೋರ್ಟಲ್‍ನವರು ಮೊದಲ ನಾಲ್ಕು ಹಂತಗಳಲ್ಲಿ ನಡೆದ ಮತದಾನ ಪ್ರಮಾಣ ಮತ್ತು ಏಣಿಕೆಯಾದ ಮತಗಳ ಸಂಖ್ಯೆಯನ್ನು ಕೂಲಂಕುಶವಾಗಿ ಪರಿಗಣಿಸಿದಾಗ ದಿಗ್ಭ್ರಮೆಗೊಳಿಸುವ ವಿಚಾರ ಹೊರಬಂದಿದೆ. 373 ಕ್ಷೇತ್ರಗಳಲ್ಲಿ ವೋಟ್ ಆದ ಮತಗಳಿಗೂ, ಎಣಿಕೆ ಆದ ಮತಗಳಿಗೂ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಆದರೆ ಇಲ್ಲಿವರೆಗೆ ಈ ಕುರಿತು ಸ್ಪಷ್ಟನೆ ನೀಡದ ಚುನಾವಣಾ ಆಯೋಗ, ತನ್ನ ವೆಬ್‍ಸೈಟಿನಿಂದ ಮಾಹಿತಿ-ಅಂಕಿಅಂಶಗಳನ್ನೇ ತೆಗೆದು ಹಾಕುವ ದುಸ್ಸಾಹಸ ಮಾಡುವ ಮೂಲಕ ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ…..

ಚುನಾವಣಾ ಅಯೋಗವೇ ಅಧಿಕೃತವಾಗಿ ಸಾರ್ವಜನಿಕರಿಗೆಂದೇ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಎರಡು ಸೆಟ್ ಅಂಕಿ-ಸಂಖ್ಯೆಗಳನ್ನು ತೆಗೆದುಕೊಂಡು ಈ ವ್ಯತ್ಯಾಸಗಳನ್ನು ಪತ್ತೆ ಮಾಡಲಾಗಿದೆ. ಮೊದಲ ನಾಲ್ಕು ಹಂತಗಳಲ್ಲಿ ನಡೆದ 373 ಕ್ಷೇತ್ರಗಳಲ್ಲಿ ಜನರು ವೋಟ್ ಮಾಡಿದ್ದ ಮತಗಳು ಮತ್ತು ಮೇ 23ರಂದು ಕೌಂಟ್ ಆದ ಮತಗಳಲ್ಲಿ ಸಾಕಷ್ಟು ವ್ಯತ್ಯಾಸ ಕಣ್ಣಿಗೆ ಹೊಡೆಯುವಂತೆ ಕಾಣುತ್ತಿದೆ.

ತಮಿಳುನಾಡಿನ ಕಂಚೀಪುರಂ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 12,14,036 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,32,417 ಮತಗಳು! ಈ ಹೆಚ್ಚುವರಿ 18,331 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಧರ್ಮಪುರಿ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 11,94, 440 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,12,311 ಮತಗಳು! ಈ ಹೆಚ್ಚುವರಿ 17,871 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಪೆರಂಬದೂರು ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 13,88,666 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 14,03,178 ಮತಗಳು! ಈ ಹೆಚ್ಚುವರಿ 14,512 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಇವು ಮೊದಲ ಹಂತದಲ್ಲಿ ನಡೆದ 373 ಕೇತ್ರಗಳಲ್ಲಿ ಅತಿ ಹೆಚ್ಚು ಪ್ರಮಾಣದ ವ್ಯತ್ಯಾಸ ತೋರಿಸಿದ 4 ಕ್ಷೇತ್ರಗಳು. ಹೀಗೇ ಇನ್ನು 220 ಕ್ಷೇತ್ರಗಳಲ್ಲಿ ಹೆಚ್ಚುವರಿ ಮತಗಳು ‘ಉದ್ಭವಿಸಿದರೆ’, ಉಳಿದ ಕ್ಷೇತ್ರಗಳಲ್ಲಿ ಅವು ವೋಟ್ ಆಗಿದ್ದಕ್ಕಿಂತ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿವೆ!

ಆಯೋಗದ ವೆಬ್‍ಸೈಟಿನಿಂದ ‘ಡೇಟಾ’ ಮಾಯ!

ಚುನಾವಣಾ ಆಯೋಗವು ಮೊದಲ ನಾಲ್ಕು ಹಂತಗಳ ಡೇಟಾವನ್ನು ಪ್ರಕಟಿಸಿ, ಇವು ಪರಿಪೂರ್ಣ ಅಂಕಿಅಂಶಗಳು ಎಂದು ಸಾರಿತ್ತು. ಹಾಗಾಗಿ ಕ್ವಿಂಟ್ ಪೋರ್ಟಲ್ ಈ ಡೇಟಾದ ಆಧಾರದಲ್ಲೇ ಪರೀಕ್ಷೆ ನಡೆಸಿತು. ಯಾವಾಗ ದೊಡ್ಡ ವ್ಯತ್ಯಾಸಗಳು ಕಂಡವೋ, ಕ್ವಿಂಟ್ ಈ ಕುರಿತಾಗಿ ಆಯೋಗವನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸದ ಆಯೋಗವು, ತನ್ನ ವೆಬ್‍ಸೈಟಿನಿಂದ ಈ ಎಲ್ಲ ಅಂಕಿಅಂಶಗಳನ್ನು ತೆಗೆದು ಹಾಕುವ ಮೂಲಕ ಜನರ ಸಂಶಯವನ್ನು ಇನ್ನಷ್ಟು ಹೆಚ್ಚಿಸಿದೆ.

ಕ್ವಿಂಟ್ ತಾನು ಆಯೋಗದ ವೆಬ್‍ಸೈಟಿನಿಂದ ಡೌನ್‍ಲೋಡ್ ಮಾಡಿದ ಅಂಕಿಅಂಶಗಳು ಮತ್ತು ಪತ್ತೆ ಮಾಡಿದ ವ್ಯತ್ಯಾಸಗಳ ಕಾಪಿಗಳನ್ನು ಮೇಲ್ ಮೂಲಕ ಇನ್ನೊಮ್ಮೆ ಆಯೋಗಕ್ಕೆ ಕಳಿಸಿತು. ಈವರೆಗೂ ಆಯೋಗದಿಂದ ಉತ್ತರವೇ ಇಲ್ಲ!

ಮೇ 23ರ ಚುನಾವಣೆ ಮುಗಿದು 6-7 ದಿನಗಳಾದರೂ (ಮೇ 27ರಂದು) ಉಳಿದೆಲ್ಲ ಕ್ಷೇತ್ರಗಳ ವೋಟ್ ಆದ ಡೇಟಾವನ್ನು ಕಂಪೈಲ್ ಮಾಡಲಾಗಿಲ್ಲ ಎಂಬ ಸಬೂಬನ್ನೂ ಆಯೋಗ ನೀಡಿದೆ. ಯಾಕೆ ಸಂಪೂರ್ಣ ಮತ ಎಣಿಕೆ ಮುಗಿದ ಏಳು ದಿನವಾದರೂ ಡೇಟಾವನ್ನು ಕಂಪೈಲ್ ಮಾಡಲಿಲ್ಲ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ.

ಈ ಕುರಿತಂತೆ ಕ್ವಿಂಟ್ ಜೊತೆ ಮಾತಾಡಿರುವ ಮಾಜಿ ಚುನಾವಣಾ ಆಯುಕ್ತ ರಾವತ್ ಅವರು. ‘ಇದೊಂದು ಗಂಭೀರ ವಿಷಯ. ನಾನು ಆಯುಕ್ತನಾಗಿದ್ದಾಗ ಇಂಥದ್ದು ಎಂದೂ ಸಂಭವಿಸರಲೇ ಇಲ್ಲ. ಆಯೋಗ ಇದಕ್ಕೆ ಸ್ಪಷ್ಟನೆ ನೀಡಲೇಬೇಕು’ ಎಂದು ಒತ್ತಾಯಿಸಿದ್ದಾರೆ. ಇತರ ಮಾಜಿ ಆಯುಕ್ತರಾದ ಗೋಪಾಲಸ್ವಾಮಿ, ಖುರೇಶಿ ಮತ್ತು ಬ್ರಹ್ಮಾ ಅವರು ಕೂಡ ಆಯೋಗ ಇದಕ್ಕೆಲ್ಲ ಕೂಡಲೇ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಚಲಾವಣೆಯಾದ ಮತಗಳಿಗಿಂತ ಕೌಂಟ್ ಆದ ಮತಗಳೆ ಹೆಚ್ಚು 

ಇಲ್ಲಿ ಆಯೋಗ ಈ ನಾಲ್ಕು ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡುವ ಹೊಣೆ ಹೊರಬೇಕು:

ಮೊದಲ 4 ಹಂತದ ಮತದಾನದಲ್ಲಿ ಮತದಾನವಾದ ಅಂತಿಮ ಅಂಕಿಅಂಶಗಳು ಎಂದು ಆಯೋಗ ತನ್ನ ವೆಬ್‍ಸೈಟಿನಲ್ಲಿ ಅಪ್‍ಲೋಡ್ ಮಾಡಿದ್ದು ಏಕೆ?
ದಿಡೀರ್ ಎಂದು ಈ ಡೇಟಾವನ್ನು ವೆಬ್‍ಸೈಟಿನಿಂದ ತೆಗೆದದ್ದು ಏಕೆ?
ಈ ಗಂಭಿರ ವ್ಯತ್ಯಾಸಗಳ ಕುರಿತು ಆಯೋಗ ಏಕೆ ಉತ್ತರಿಸುತ್ತಿಲ್ಲ? ಅದಕ್ಕೆ ಇದರಲ್ಲಿ ಮುಚ್ಚಿಡುವಂತಾದ್ದು ಏನಾದರೂ ಇದೆಯೇ?
ಈ ದೊಡ್ಡ ವ್ಯತ್ಯಾಸಗಳು ಕಂಡುಬರಲು ಕಾರಣವೇನು? ಇವಿಎಂಗಳು ದೋಷಪೂರಿತವಾಗಿವೆಯೇ?

(ಆಧಾರ: ದಿ ಕ್ವಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...