Homeನಿಜವೋ ಸುಳ್ಳೋವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ವೋಟು ವ್ಯತ್ಯಾಸಕ್ಕೂ ನಮಗೂ ಸಂಬಂಧವಿಲ್ಲ : ಚುನಾವಣಾ ಆಯೋಗ

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

- Advertisement -
- Advertisement -

ದಿ ಕ್ವಿಂಟ್ ಪೋರ್ಟಲ್‍ನವರು ಮೊದಲ ನಾಲ್ಕು ಹಂತಗಳಲ್ಲಿ ನಡೆದ ಮತದಾನ ಪ್ರಮಾಣ ಮತ್ತು ಏಣಿಕೆಯಾದ ಮತಗಳ ಸಂಖ್ಯೆಯನ್ನು ಕೂಲಂಕುಶವಾಗಿ ಪರಿಗಣಿಸಿದಾಗ ದಿಗ್ಭ್ರಮೆಗೊಳಿಸುವ ವಿಚಾರ ಹೊರಬಂದಿದೆ. 373 ಕ್ಷೇತ್ರಗಳಲ್ಲಿ ವೋಟ್ ಆದ ಮತಗಳಿಗೂ, ಎಣಿಕೆ ಆದ ಮತಗಳಿಗೂ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಆದರೆ ಇಲ್ಲಿವರೆಗೆ ಈ ಕುರಿತು ಸ್ಪಷ್ಟನೆ ನೀಡದ ಚುನಾವಣಾ ಆಯೋಗ, ತನ್ನ ವೆಬ್‍ಸೈಟಿನಿಂದ ಮಾಹಿತಿ-ಅಂಕಿಅಂಶಗಳನ್ನೇ ತೆಗೆದು ಹಾಕುವ ದುಸ್ಸಾಹಸ ಮಾಡುವ ಮೂಲಕ ಮತ್ತಷ್ಟು ಸಂಶಯಗಳಿಗೆ ಕಾರಣವಾಗಿದೆ…..

ಚುನಾವಣಾ ಅಯೋಗವೇ ಅಧಿಕೃತವಾಗಿ ಸಾರ್ವಜನಿಕರಿಗೆಂದೇ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿದ ಎರಡು ಸೆಟ್ ಅಂಕಿ-ಸಂಖ್ಯೆಗಳನ್ನು ತೆಗೆದುಕೊಂಡು ಈ ವ್ಯತ್ಯಾಸಗಳನ್ನು ಪತ್ತೆ ಮಾಡಲಾಗಿದೆ. ಮೊದಲ ನಾಲ್ಕು ಹಂತಗಳಲ್ಲಿ ನಡೆದ 373 ಕ್ಷೇತ್ರಗಳಲ್ಲಿ ಜನರು ವೋಟ್ ಮಾಡಿದ್ದ ಮತಗಳು ಮತ್ತು ಮೇ 23ರಂದು ಕೌಂಟ್ ಆದ ಮತಗಳಲ್ಲಿ ಸಾಕಷ್ಟು ವ್ಯತ್ಯಾಸ ಕಣ್ಣಿಗೆ ಹೊಡೆಯುವಂತೆ ಕಾಣುತ್ತಿದೆ.

ತಮಿಳುನಾಡಿನ ಕಂಚೀಪುರಂ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 12,14,036 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,32,417 ಮತಗಳು! ಈ ಹೆಚ್ಚುವರಿ 18,331 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಧರ್ಮಪುರಿ ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 11,94, 440 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 12,12,311 ಮತಗಳು! ಈ ಹೆಚ್ಚುವರಿ 17,871 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ತಮಿಳುನಾಡಿನ ಪೆರಂಬದೂರು ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 13,88,666 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 14,03,178 ಮತಗಳು! ಈ ಹೆಚ್ಚುವರಿ 14,512 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಉತ್ತರಪ್ರದೇಶದ ಮಥುರಾ  ಕ್ಷೇತ್ರದಲ್ಲಿ ಆಯೋಗವು ಹೇಳುವ ಪ್ರಕಾರ, 10,86,206 ಮತಗಳು ಇವಿಯಂನಲ್ಲಿ ವೋಟ್ ಮಾಡಲ್ಪಟ್ಟಿದ್ದರೆ, ಏಣಿಕೆಯಾಗಿದ್ದು 10,98,112 ಮತಗಳು! ಈ ಹೆಚ್ಚುವರಿ 9,906 ಮತಗಳು ಎಲ್ಲಿಂದ ಬಂದವು? ಆಯೋಗದ ಬಳಿ ಉತ್ತರವಿಲ್ಲ!

ಇವು ಮೊದಲ ಹಂತದಲ್ಲಿ ನಡೆದ 373 ಕೇತ್ರಗಳಲ್ಲಿ ಅತಿ ಹೆಚ್ಚು ಪ್ರಮಾಣದ ವ್ಯತ್ಯಾಸ ತೋರಿಸಿದ 4 ಕ್ಷೇತ್ರಗಳು. ಹೀಗೇ ಇನ್ನು 220 ಕ್ಷೇತ್ರಗಳಲ್ಲಿ ಹೆಚ್ಚುವರಿ ಮತಗಳು ‘ಉದ್ಭವಿಸಿದರೆ’, ಉಳಿದ ಕ್ಷೇತ್ರಗಳಲ್ಲಿ ಅವು ವೋಟ್ ಆಗಿದ್ದಕ್ಕಿಂತ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿವೆ!

ಆಯೋಗದ ವೆಬ್‍ಸೈಟಿನಿಂದ ‘ಡೇಟಾ’ ಮಾಯ!

ಚುನಾವಣಾ ಆಯೋಗವು ಮೊದಲ ನಾಲ್ಕು ಹಂತಗಳ ಡೇಟಾವನ್ನು ಪ್ರಕಟಿಸಿ, ಇವು ಪರಿಪೂರ್ಣ ಅಂಕಿಅಂಶಗಳು ಎಂದು ಸಾರಿತ್ತು. ಹಾಗಾಗಿ ಕ್ವಿಂಟ್ ಪೋರ್ಟಲ್ ಈ ಡೇಟಾದ ಆಧಾರದಲ್ಲೇ ಪರೀಕ್ಷೆ ನಡೆಸಿತು. ಯಾವಾಗ ದೊಡ್ಡ ವ್ಯತ್ಯಾಸಗಳು ಕಂಡವೋ, ಕ್ವಿಂಟ್ ಈ ಕುರಿತಾಗಿ ಆಯೋಗವನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸದ ಆಯೋಗವು, ತನ್ನ ವೆಬ್‍ಸೈಟಿನಿಂದ ಈ ಎಲ್ಲ ಅಂಕಿಅಂಶಗಳನ್ನು ತೆಗೆದು ಹಾಕುವ ಮೂಲಕ ಜನರ ಸಂಶಯವನ್ನು ಇನ್ನಷ್ಟು ಹೆಚ್ಚಿಸಿದೆ.

ಕ್ವಿಂಟ್ ತಾನು ಆಯೋಗದ ವೆಬ್‍ಸೈಟಿನಿಂದ ಡೌನ್‍ಲೋಡ್ ಮಾಡಿದ ಅಂಕಿಅಂಶಗಳು ಮತ್ತು ಪತ್ತೆ ಮಾಡಿದ ವ್ಯತ್ಯಾಸಗಳ ಕಾಪಿಗಳನ್ನು ಮೇಲ್ ಮೂಲಕ ಇನ್ನೊಮ್ಮೆ ಆಯೋಗಕ್ಕೆ ಕಳಿಸಿತು. ಈವರೆಗೂ ಆಯೋಗದಿಂದ ಉತ್ತರವೇ ಇಲ್ಲ!

ಮೇ 23ರ ಚುನಾವಣೆ ಮುಗಿದು 6-7 ದಿನಗಳಾದರೂ (ಮೇ 27ರಂದು) ಉಳಿದೆಲ್ಲ ಕ್ಷೇತ್ರಗಳ ವೋಟ್ ಆದ ಡೇಟಾವನ್ನು ಕಂಪೈಲ್ ಮಾಡಲಾಗಿಲ್ಲ ಎಂಬ ಸಬೂಬನ್ನೂ ಆಯೋಗ ನೀಡಿದೆ. ಯಾಕೆ ಸಂಪೂರ್ಣ ಮತ ಎಣಿಕೆ ಮುಗಿದ ಏಳು ದಿನವಾದರೂ ಡೇಟಾವನ್ನು ಕಂಪೈಲ್ ಮಾಡಲಿಲ್ಲ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ.

ಈ ಕುರಿತಂತೆ ಕ್ವಿಂಟ್ ಜೊತೆ ಮಾತಾಡಿರುವ ಮಾಜಿ ಚುನಾವಣಾ ಆಯುಕ್ತ ರಾವತ್ ಅವರು. ‘ಇದೊಂದು ಗಂಭೀರ ವಿಷಯ. ನಾನು ಆಯುಕ್ತನಾಗಿದ್ದಾಗ ಇಂಥದ್ದು ಎಂದೂ ಸಂಭವಿಸರಲೇ ಇಲ್ಲ. ಆಯೋಗ ಇದಕ್ಕೆ ಸ್ಪಷ್ಟನೆ ನೀಡಲೇಬೇಕು’ ಎಂದು ಒತ್ತಾಯಿಸಿದ್ದಾರೆ. ಇತರ ಮಾಜಿ ಆಯುಕ್ತರಾದ ಗೋಪಾಲಸ್ವಾಮಿ, ಖುರೇಶಿ ಮತ್ತು ಬ್ರಹ್ಮಾ ಅವರು ಕೂಡ ಆಯೋಗ ಇದಕ್ಕೆಲ್ಲ ಕೂಡಲೇ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಚಲಾವಣೆಯಾದ ಮತಗಳಿಗಿಂತ ಕೌಂಟ್ ಆದ ಮತಗಳೆ ಹೆಚ್ಚು 

ಇಲ್ಲಿ ಆಯೋಗ ಈ ನಾಲ್ಕು ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡುವ ಹೊಣೆ ಹೊರಬೇಕು:

ಮೊದಲ 4 ಹಂತದ ಮತದಾನದಲ್ಲಿ ಮತದಾನವಾದ ಅಂತಿಮ ಅಂಕಿಅಂಶಗಳು ಎಂದು ಆಯೋಗ ತನ್ನ ವೆಬ್‍ಸೈಟಿನಲ್ಲಿ ಅಪ್‍ಲೋಡ್ ಮಾಡಿದ್ದು ಏಕೆ?
ದಿಡೀರ್ ಎಂದು ಈ ಡೇಟಾವನ್ನು ವೆಬ್‍ಸೈಟಿನಿಂದ ತೆಗೆದದ್ದು ಏಕೆ?
ಈ ಗಂಭಿರ ವ್ಯತ್ಯಾಸಗಳ ಕುರಿತು ಆಯೋಗ ಏಕೆ ಉತ್ತರಿಸುತ್ತಿಲ್ಲ? ಅದಕ್ಕೆ ಇದರಲ್ಲಿ ಮುಚ್ಚಿಡುವಂತಾದ್ದು ಏನಾದರೂ ಇದೆಯೇ?
ಈ ದೊಡ್ಡ ವ್ಯತ್ಯಾಸಗಳು ಕಂಡುಬರಲು ಕಾರಣವೇನು? ಇವಿಎಂಗಳು ದೋಷಪೂರಿತವಾಗಿವೆಯೇ?

(ಆಧಾರ: ದಿ ಕ್ವಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...