Homeಮುಖಪುಟಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

- Advertisement -
- Advertisement -

ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಪ್ರಯಾಣಿಸಿದ ಘಟನೆ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದ್ದು, ಆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮತ್ತು ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಅದೇ ಸಂದರ್ಭದಲ್ಲಿ ಪ್ರತಿಭಟನೆ ಮತ್ತು ಘೇರಾವ್ ನಡೆಸಿದ ಪ್ರತಿಪಕ್ಷಗಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಿನ್ನೆ ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ಆದರೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಅನ್ನು ಪಕ್ಕದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದ್ರ ಪೌಲ್‌ರವರ ಪತ್ನಿಯ ಕಾರಿನಲ್ಲಿ ಸಾಗಿಸಿದ್ದರು. ಕಾರು ಸ್ಟ್ರಾಂಗ್‌ರೂಂ ಬಳಿ ಬರುತ್ತಲೇ ವಿರೋಧ ಪಕ್ಷದ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಿಂಸಾಚಾರ ಉಲ್ಭಣಗೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀ ಚಾರ್ಜ್ ಮಾಡಿದ್ದರು.

ರಾತ್ರಿ 9 ಗಂಟೆಯ ಸಮಯದಲ್ಲಿ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಸಮಯದಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ರಾತ್ರಿ 9:20ರ ಸಮಯದಲ್ಲಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪತ್ನಿಯದಾಗಿತ್ತು. ಅದು ನಮಗೆ ಗೊತ್ತಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯುವುದಾಗಿ, ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ತೀವ್ರ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಮರುಮತದಾನಕ್ಕೆ ಆದೇಶಿಸಲಾಗಿದೆ. ನಾಲ್ಕರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳಲ್ಲಿಯೂ ಸಹ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆಡಳಿತರೂಢ ಟಿಎಂಸಿ ಪಕ್ಷ ಪದೇ ಪದೇ ಆರೋಪಿಸಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...