Homeಮುಖಪುಟಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

- Advertisement -
- Advertisement -

ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಪ್ರಯಾಣಿಸಿದ ಘಟನೆ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದ್ದು, ಆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮತ್ತು ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಅದೇ ಸಂದರ್ಭದಲ್ಲಿ ಪ್ರತಿಭಟನೆ ಮತ್ತು ಘೇರಾವ್ ನಡೆಸಿದ ಪ್ರತಿಪಕ್ಷಗಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಿನ್ನೆ ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ಆದರೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಅನ್ನು ಪಕ್ಕದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದ್ರ ಪೌಲ್‌ರವರ ಪತ್ನಿಯ ಕಾರಿನಲ್ಲಿ ಸಾಗಿಸಿದ್ದರು. ಕಾರು ಸ್ಟ್ರಾಂಗ್‌ರೂಂ ಬಳಿ ಬರುತ್ತಲೇ ವಿರೋಧ ಪಕ್ಷದ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಿಂಸಾಚಾರ ಉಲ್ಭಣಗೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀ ಚಾರ್ಜ್ ಮಾಡಿದ್ದರು.

ರಾತ್ರಿ 9 ಗಂಟೆಯ ಸಮಯದಲ್ಲಿ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಸಮಯದಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ರಾತ್ರಿ 9:20ರ ಸಮಯದಲ್ಲಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪತ್ನಿಯದಾಗಿತ್ತು. ಅದು ನಮಗೆ ಗೊತ್ತಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯುವುದಾಗಿ, ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ತೀವ್ರ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಮರುಮತದಾನಕ್ಕೆ ಆದೇಶಿಸಲಾಗಿದೆ. ನಾಲ್ಕರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳಲ್ಲಿಯೂ ಸಹ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆಡಳಿತರೂಢ ಟಿಎಂಸಿ ಪಕ್ಷ ಪದೇ ಪದೇ ಆರೋಪಿಸಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...