Homeಮುಖಪುಟಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

- Advertisement -
- Advertisement -

ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಪ್ರಯಾಣಿಸಿದ ಘಟನೆ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದ್ದು, ಆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮತ್ತು ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಅದೇ ಸಂದರ್ಭದಲ್ಲಿ ಪ್ರತಿಭಟನೆ ಮತ್ತು ಘೇರಾವ್ ನಡೆಸಿದ ಪ್ರತಿಪಕ್ಷಗಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಿನ್ನೆ ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ಆದರೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಅನ್ನು ಪಕ್ಕದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದ್ರ ಪೌಲ್‌ರವರ ಪತ್ನಿಯ ಕಾರಿನಲ್ಲಿ ಸಾಗಿಸಿದ್ದರು. ಕಾರು ಸ್ಟ್ರಾಂಗ್‌ರೂಂ ಬಳಿ ಬರುತ್ತಲೇ ವಿರೋಧ ಪಕ್ಷದ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಿಂಸಾಚಾರ ಉಲ್ಭಣಗೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀ ಚಾರ್ಜ್ ಮಾಡಿದ್ದರು.

ರಾತ್ರಿ 9 ಗಂಟೆಯ ಸಮಯದಲ್ಲಿ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಸಮಯದಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ರಾತ್ರಿ 9:20ರ ಸಮಯದಲ್ಲಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪತ್ನಿಯದಾಗಿತ್ತು. ಅದು ನಮಗೆ ಗೊತ್ತಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯುವುದಾಗಿ, ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ತೀವ್ರ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಮರುಮತದಾನಕ್ಕೆ ಆದೇಶಿಸಲಾಗಿದೆ. ನಾಲ್ಕರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳಲ್ಲಿಯೂ ಸಹ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆಡಳಿತರೂಢ ಟಿಎಂಸಿ ಪಕ್ಷ ಪದೇ ಪದೇ ಆರೋಪಿಸಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...