Homeಮುಖಪುಟಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

- Advertisement -
- Advertisement -

ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಪ್ರಯಾಣಿಸಿದ ಘಟನೆ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದ್ದು, ಆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮತ್ತು ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಅದೇ ಸಂದರ್ಭದಲ್ಲಿ ಪ್ರತಿಭಟನೆ ಮತ್ತು ಘೇರಾವ್ ನಡೆಸಿದ ಪ್ರತಿಪಕ್ಷಗಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಿನ್ನೆ ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ಆದರೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಅನ್ನು ಪಕ್ಕದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದ್ರ ಪೌಲ್‌ರವರ ಪತ್ನಿಯ ಕಾರಿನಲ್ಲಿ ಸಾಗಿಸಿದ್ದರು. ಕಾರು ಸ್ಟ್ರಾಂಗ್‌ರೂಂ ಬಳಿ ಬರುತ್ತಲೇ ವಿರೋಧ ಪಕ್ಷದ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಿಂಸಾಚಾರ ಉಲ್ಭಣಗೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀ ಚಾರ್ಜ್ ಮಾಡಿದ್ದರು.

ರಾತ್ರಿ 9 ಗಂಟೆಯ ಸಮಯದಲ್ಲಿ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಸಮಯದಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ರಾತ್ರಿ 9:20ರ ಸಮಯದಲ್ಲಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪತ್ನಿಯದಾಗಿತ್ತು. ಅದು ನಮಗೆ ಗೊತ್ತಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯುವುದಾಗಿ, ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ತೀವ್ರ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಮರುಮತದಾನಕ್ಕೆ ಆದೇಶಿಸಲಾಗಿದೆ. ನಾಲ್ಕರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳಲ್ಲಿಯೂ ಸಹ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆಡಳಿತರೂಢ ಟಿಎಂಸಿ ಪಕ್ಷ ಪದೇ ಪದೇ ಆರೋಪಿಸಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...