Homeಚಳವಳಿಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

ಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

- Advertisement -
- Advertisement -

ಮತದಾರರ ಪಟ್ಟಿಗಳನ್ನು ಹುಡುಕಲು ಸಾಧ್ಯವಾಗುವಂತೆ ಮಾಡುವುದು ಮತ್ತು ಎಲೆಕ್ಟ್ರಾನಿಕ್ ವೋಟರ್ ಯಂತ್ರಗಳ (ಇವಿಎಂ) ಮೂಲ ಕೋಡ್ ಅನ್ನು ಬಿಡುಗಡೆ ಮಾಡುವುದರಿಂದ ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ನಾಗರಿಕರ ಹಕ್ಕುಗಳ ಸಂಘಟನೆಯೊಂದು ಶುಕ್ರವಾರ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಕೇವಲ 28% ಭಾರತೀಯರು ಮಾತ್ರ ಚುನಾವಣಾ ಆಯೋಗದಲ್ಲಿ ನಂಬಿಕೆ ಹೊಂದಿದ್ದಾರೆ ಎಂಬ ಸಮೀಕ್ಷೆಯೊಂದರ ಹಿನ್ನಲೆಯಲ್ಲಿ ‘Vote for Democracy” ಎಂಬ ಹೆಸರಿನ 83 ಜನರ ಈ ನಾಗರಿಕ ಹಕ್ಕುಗಳ ಗುಂಪು ಚುನಾವಣಾ ಆಯೋಗಕ್ಕೆ ಆರು ಸಲಹೆಗಳನ್ನು ನೀಡಿದೆ. ಚುನಾವಣಾ ಆಯೋಗದ ಮೇಲೆ ನಂಬಿಕೆ ಕಳೆದುಕೊಳ್ಳುವುದು “ಪ್ರಜಾಪ್ರಭುತ್ವದ ಹಿನ್ನಡೆಯ ಆತಂಕಕಾರಿ ಸೂಚನೆ” ಎಂದು ಅದು ಹೇಳಿದೆ.

ಹುಡುಕಿ ಕಂಡುಕೊಳ್ಳಬಹುದಾದ ಡೇಟಾಬೇಸ್ ಇಲ್ಲದೆ, ಎಲ್ಲಾ ಅರ್ಹ ನಿವಾಸಿಗಳನ್ನು ಮತದಾರರಾಗಿ ಪಟ್ಟಿ ಮಾಡಲಾಗಿದೆಯೇ ಅಥವಾ ಮರಣ ಹೊಂದಿದವರನ್ನು ಅಧಿಕೃತ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆಯೇ ಎಂದು ನಾಗರಿಕರು ಸ್ವತಂತ್ರವಾಗಿ ಪರಿಶೀಲಿಸಲು ಈಗ ಯಾವುದೇ ಮಾರ್ಗವಿಲ್ಲ ಎಂದು ನಾಗರಿಕ ಹಕ್ಕುಗಳ ಗುಂಪು ವಾದಿಸಿದೆ. “ನಮ್ಮ ಈ ಬೇಡಿಕೆಯನ್ನು ಪೂರೈಸುವಲ್ಲಿ ವಿಫಲವಾದರೆ, ಚುನಾವಣಾ ಆಯೋಗವು ತಾಂತ್ರಿಕವಾಗಿ ಹಾಗೆ ಒದಗಿಸಲು ಸಜ್ಜಾಗಿಲ್ಲ ಎಂದರ್ಥ” ಎಂದು ಅವರ ಮನವಿ ಪತ್ರವು ಹೇಳಿದೆ.

ಮತದಾನ ಯಂತ್ರಗಳ ಮೂಲ ಕೋಡ್ ಸಾರ್ವಜನಿಕವಾಗಿ ಲಭ್ಯವಿಲ್ಲ ಎಂಬ ವಿಚಾರವನ್ನು ಎತ್ತಿತೋರಿಸಿರುವ ಅವರು, “ಬ್ಯಾಲೆಟ್‌ ಯೂನಿಟ್‌ನ ಬಟನ್‌ಗಳಲ್ಲಿ ಪ್ರತಿ ಅಭ್ಯರ್ಥಿಗೆ ಮತಗಳನ್ನು ದಾಖಲಿಸುವುದು ಮತ್ತು ಮತಗಳನ್ನು ಎಣಿಸುವುದು ಸೇರಿದಂತೆ ಮುಂತಾದ ಯಾವುದೆ ತೊಂದರೆ ಇಲ್ಲದ ಕೆಲಸ ಮಾಡುವ ಒಂದು ಸರಳ ಮೂಲ ಕೋಡ್‌ನ ಸುತ್ತ ಏಕೆ ಇಂತಹ ಗೌಪ್ಯತೆ ಇದೆ?” ಎಂದು ಮನವಿ ಪತ್ರವು ಕೇಳಿದೆ.

ಇದೆಲ್ಲದೆ, ಎಲ್ಲಾ ಬೂತ್‌ಗಳು ಮತ್ತು ಕ್ಷೇತ್ರಗಳಿಂದ ಹುಡುಕಿ ಕಂಡುಕೊಳ್ಳಬಹುದಾದ ಸ್ವರೂಪದಲ್ಲಿ ಫಾರ್ಮ್ 17C ಡೇಟಾವನ್ನು ಮತ್ತು ಒಟ್ಟು ಮತ ಎಣಿಕೆಗಳನ್ನು ಸಾರ್ವಜನಿಕ ಪರಿಶೀಲನೆಗಾಗಿ ಸಾರ್ವಜನಿಕವಾಗಿ ಅಪ್‌ಲೋಡ್ ಮಾಡಲು ಗುಂಪು ಕರೆ ನೀಡಿದೆ.

ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವನ್ನು ಅಲ್ಲಿನ ಪ್ರೆಸೀಡಿಂಗ್ ಆಫೀಸರ್‌ ಪ್ರತಿನಿಧಿಸುತ್ತಾರೆ. ಮತದಾನ ಕೇಂದ್ರದಲ್ಲಿ ಮತದಾನ ಮುಗಿದ ನಂತರ, ಈ ಪ್ರೆಸೀಡಿಂಗ್ ಅಧಿಕಾರಿ ಫಾರ್ಮ್ 17C ಅನ್ನು ಭರ್ತಿ ಮಾಡುತ್ತಾರೆ. ಇದು ಮತಗಟ್ಟೆಯಲ್ಲಿ ನೋಂದಾಯಿಸಲಾದ ಮತದಾರರ ಸಂಖ್ಯೆ ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರದಲ್ಲಿ ದಾಖಲಾದ ಮತಗಳ ಸಂಖ್ಯೆ ಮತ್ತು ಮತ ಚಲಾಯಿಸಿದ ಮತದಾರರ ಲಿಂಗವಾರು ವಿಂಗಡಣೆಯಂತಹ ವಿವರಗಳನ್ನು ಹೊಂದಿರುತ್ತದೆ.

ಪಾರದರ್ಶಕತೆಗಾಗಿ ಮತ್ತು ಹುಡುಕಿ ಪಡೆಯಲು ಡೇಟಾಬೇಸ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಮೂನೆಗಳು – ಫಾರ್ಮ್ 9, 10, 11, 11A, ಮತ್ತು 11B – ಕೂಡಾ ಸಾರ್ವಜನಿಕರಿಗೆ ಲಭ್ಯ ಇರಬೇಕು ಎಂದು ನಾಗರಿಕ ಗುಂಪು ಒತ್ತಾಯಿಸಿದೆ. ಹೆಚ್ಚುವರಿಯಾಗಿ, ಚುನಾವಣೆಗಳಲ್ಲಿ ಬಳಸಲಾಗುವ ಪ್ರತಿಯೊಂದು ಚಿಹ್ನೆಯನ್ನು ಲೋಡಿಂಗ್ ಘಟಕದಿಂದ ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಲು ಗುಂಪು ಒತ್ತಾಯಿಸಿದೆ ಮತ್ತು ಪ್ರತಿ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳಿಗೆ ಮತದಾರರ ಪರಿಶೀಲಿಸಿದ ಪೇಪರ್ ಆಡಿಟ್ ಟ್ರೇಲ್‌ಗಳನ್ನು ರಚಿಸುವಂತೆ ಒತ್ತಾಯಿಸಿದೆ.

VVPAT ಚೀಟಿಗಳನ್ನು ಮತದಾರರಿಗೆ ನೀಡಬೇಕು, ನಂತರ ಅವರು ಅವುಗಳನ್ನು ಪ್ರತ್ಯೇಕ ಮತಪೆಟ್ಟಿಗೆಯಲ್ಲಿ ಇಡಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳನ್ನು ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (VVPAT) ಘಟಕದಲ್ಲಿ ಅಪ್‌ಲೋಡ್ ಮಾಡಲು ಸಿಂಬಲ್ ಲೋಡಿಂಗ್ ಘಟಕವನ್ನು ಬಳಸಲಾಗುತ್ತದೆ. ನಂತರ ಅದನ್ನು ಎಲೆಕ್ಟ್ರಾನಿಕ್ ಮತ ಯಂತ್ರಗಳ ಮೂಲಕ ಚಲಾಯಿಸಿದ ಮತಗಳನ್ನು ಪರಿಶೀಲಿಸಲು ಬಳಸಲಾಗುತ್ತದೆ.

ಎಲೆಕ್ಟ್ರಾನಿಕ್ ಮತ ಯಂತ್ರಗಳು ತಾಂತ್ರಿಕ ದುರ್ಬಲವಾಗಿದ್ದರೆ ಮತ್ತು ಕಾರ್ಯವಿಧಾನದ ಲೋಪಗಳಿಂದ ಕೂಡಿದ್ದರೆ ಅವುಗಳ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತವೆ ಎಂದು ಗುಂಪು ಆರೋಪಿಸಿದೆ. ಆದಾಗ್ಯೂ, ಈ ಶಿಫಾರಸುಗಳನ್ನು ಅನುಸರಿಸಿದರೆ, ಕಾಗದದ ಮತಪತ್ರಗಳಲ್ಲಿ ಮತದಾನ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದು, ಒಂದು ವೇಳೆ VVPAT ಯಂತ್ರಗಳನ್ನು ಬಲಪಡಿಸಲು ಸಾಧ್ಯವಾಗದಿದ್ದರೆ ಕಾಗದದ ಮತಪತ್ರಗಳು ಯೋಗ್ಯವಾಗಿರುತ್ತದೆ ಎಂದು ಅವರು ವಾದಿಸಿದ್ದಾರೆ.

ಈ ಮನವಿ ಪತ್ರವನ್ನು ಅನುಮೋದಿಸಿದವರಲ್ಲಿ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಎಂ.ಜಿ. ದೇವಸಹಾಯಂ, ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಡಿ. ಹರಿಪರಂತಮನ್ ಮತ್ತು ಬಿ.ಜಿ. ಕೋಲ್ಸೆ ಪಾಟೀಲ್ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಇದ್ದಾರೆ. ಇವಿಎಂ ಮೂಲ ಕೋಡ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...