Homeಚಳವಳಿಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

ಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

- Advertisement -
- Advertisement -

ಮತದಾರರ ಪಟ್ಟಿಗಳನ್ನು ಹುಡುಕಲು ಸಾಧ್ಯವಾಗುವಂತೆ ಮಾಡುವುದು ಮತ್ತು ಎಲೆಕ್ಟ್ರಾನಿಕ್ ವೋಟರ್ ಯಂತ್ರಗಳ (ಇವಿಎಂ) ಮೂಲ ಕೋಡ್ ಅನ್ನು ಬಿಡುಗಡೆ ಮಾಡುವುದರಿಂದ ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ನಾಗರಿಕರ ಹಕ್ಕುಗಳ ಸಂಘಟನೆಯೊಂದು ಶುಕ್ರವಾರ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಕೇವಲ 28% ಭಾರತೀಯರು ಮಾತ್ರ ಚುನಾವಣಾ ಆಯೋಗದಲ್ಲಿ ನಂಬಿಕೆ ಹೊಂದಿದ್ದಾರೆ ಎಂಬ ಸಮೀಕ್ಷೆಯೊಂದರ ಹಿನ್ನಲೆಯಲ್ಲಿ ‘Vote for Democracy” ಎಂಬ ಹೆಸರಿನ 83 ಜನರ ಈ ನಾಗರಿಕ ಹಕ್ಕುಗಳ ಗುಂಪು ಚುನಾವಣಾ ಆಯೋಗಕ್ಕೆ ಆರು ಸಲಹೆಗಳನ್ನು ನೀಡಿದೆ. ಚುನಾವಣಾ ಆಯೋಗದ ಮೇಲೆ ನಂಬಿಕೆ ಕಳೆದುಕೊಳ್ಳುವುದು “ಪ್ರಜಾಪ್ರಭುತ್ವದ ಹಿನ್ನಡೆಯ ಆತಂಕಕಾರಿ ಸೂಚನೆ” ಎಂದು ಅದು ಹೇಳಿದೆ.

ಹುಡುಕಿ ಕಂಡುಕೊಳ್ಳಬಹುದಾದ ಡೇಟಾಬೇಸ್ ಇಲ್ಲದೆ, ಎಲ್ಲಾ ಅರ್ಹ ನಿವಾಸಿಗಳನ್ನು ಮತದಾರರಾಗಿ ಪಟ್ಟಿ ಮಾಡಲಾಗಿದೆಯೇ ಅಥವಾ ಮರಣ ಹೊಂದಿದವರನ್ನು ಅಧಿಕೃತ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆಯೇ ಎಂದು ನಾಗರಿಕರು ಸ್ವತಂತ್ರವಾಗಿ ಪರಿಶೀಲಿಸಲು ಈಗ ಯಾವುದೇ ಮಾರ್ಗವಿಲ್ಲ ಎಂದು ನಾಗರಿಕ ಹಕ್ಕುಗಳ ಗುಂಪು ವಾದಿಸಿದೆ. “ನಮ್ಮ ಈ ಬೇಡಿಕೆಯನ್ನು ಪೂರೈಸುವಲ್ಲಿ ವಿಫಲವಾದರೆ, ಚುನಾವಣಾ ಆಯೋಗವು ತಾಂತ್ರಿಕವಾಗಿ ಹಾಗೆ ಒದಗಿಸಲು ಸಜ್ಜಾಗಿಲ್ಲ ಎಂದರ್ಥ” ಎಂದು ಅವರ ಮನವಿ ಪತ್ರವು ಹೇಳಿದೆ.

ಮತದಾನ ಯಂತ್ರಗಳ ಮೂಲ ಕೋಡ್ ಸಾರ್ವಜನಿಕವಾಗಿ ಲಭ್ಯವಿಲ್ಲ ಎಂಬ ವಿಚಾರವನ್ನು ಎತ್ತಿತೋರಿಸಿರುವ ಅವರು, “ಬ್ಯಾಲೆಟ್‌ ಯೂನಿಟ್‌ನ ಬಟನ್‌ಗಳಲ್ಲಿ ಪ್ರತಿ ಅಭ್ಯರ್ಥಿಗೆ ಮತಗಳನ್ನು ದಾಖಲಿಸುವುದು ಮತ್ತು ಮತಗಳನ್ನು ಎಣಿಸುವುದು ಸೇರಿದಂತೆ ಮುಂತಾದ ಯಾವುದೆ ತೊಂದರೆ ಇಲ್ಲದ ಕೆಲಸ ಮಾಡುವ ಒಂದು ಸರಳ ಮೂಲ ಕೋಡ್‌ನ ಸುತ್ತ ಏಕೆ ಇಂತಹ ಗೌಪ್ಯತೆ ಇದೆ?” ಎಂದು ಮನವಿ ಪತ್ರವು ಕೇಳಿದೆ.

ಇದೆಲ್ಲದೆ, ಎಲ್ಲಾ ಬೂತ್‌ಗಳು ಮತ್ತು ಕ್ಷೇತ್ರಗಳಿಂದ ಹುಡುಕಿ ಕಂಡುಕೊಳ್ಳಬಹುದಾದ ಸ್ವರೂಪದಲ್ಲಿ ಫಾರ್ಮ್ 17C ಡೇಟಾವನ್ನು ಮತ್ತು ಒಟ್ಟು ಮತ ಎಣಿಕೆಗಳನ್ನು ಸಾರ್ವಜನಿಕ ಪರಿಶೀಲನೆಗಾಗಿ ಸಾರ್ವಜನಿಕವಾಗಿ ಅಪ್‌ಲೋಡ್ ಮಾಡಲು ಗುಂಪು ಕರೆ ನೀಡಿದೆ.

ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವನ್ನು ಅಲ್ಲಿನ ಪ್ರೆಸೀಡಿಂಗ್ ಆಫೀಸರ್‌ ಪ್ರತಿನಿಧಿಸುತ್ತಾರೆ. ಮತದಾನ ಕೇಂದ್ರದಲ್ಲಿ ಮತದಾನ ಮುಗಿದ ನಂತರ, ಈ ಪ್ರೆಸೀಡಿಂಗ್ ಅಧಿಕಾರಿ ಫಾರ್ಮ್ 17C ಅನ್ನು ಭರ್ತಿ ಮಾಡುತ್ತಾರೆ. ಇದು ಮತಗಟ್ಟೆಯಲ್ಲಿ ನೋಂದಾಯಿಸಲಾದ ಮತದಾರರ ಸಂಖ್ಯೆ ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರದಲ್ಲಿ ದಾಖಲಾದ ಮತಗಳ ಸಂಖ್ಯೆ ಮತ್ತು ಮತ ಚಲಾಯಿಸಿದ ಮತದಾರರ ಲಿಂಗವಾರು ವಿಂಗಡಣೆಯಂತಹ ವಿವರಗಳನ್ನು ಹೊಂದಿರುತ್ತದೆ.

ಪಾರದರ್ಶಕತೆಗಾಗಿ ಮತ್ತು ಹುಡುಕಿ ಪಡೆಯಲು ಡೇಟಾಬೇಸ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಮೂನೆಗಳು – ಫಾರ್ಮ್ 9, 10, 11, 11A, ಮತ್ತು 11B – ಕೂಡಾ ಸಾರ್ವಜನಿಕರಿಗೆ ಲಭ್ಯ ಇರಬೇಕು ಎಂದು ನಾಗರಿಕ ಗುಂಪು ಒತ್ತಾಯಿಸಿದೆ. ಹೆಚ್ಚುವರಿಯಾಗಿ, ಚುನಾವಣೆಗಳಲ್ಲಿ ಬಳಸಲಾಗುವ ಪ್ರತಿಯೊಂದು ಚಿಹ್ನೆಯನ್ನು ಲೋಡಿಂಗ್ ಘಟಕದಿಂದ ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಲು ಗುಂಪು ಒತ್ತಾಯಿಸಿದೆ ಮತ್ತು ಪ್ರತಿ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳಿಗೆ ಮತದಾರರ ಪರಿಶೀಲಿಸಿದ ಪೇಪರ್ ಆಡಿಟ್ ಟ್ರೇಲ್‌ಗಳನ್ನು ರಚಿಸುವಂತೆ ಒತ್ತಾಯಿಸಿದೆ.

VVPAT ಚೀಟಿಗಳನ್ನು ಮತದಾರರಿಗೆ ನೀಡಬೇಕು, ನಂತರ ಅವರು ಅವುಗಳನ್ನು ಪ್ರತ್ಯೇಕ ಮತಪೆಟ್ಟಿಗೆಯಲ್ಲಿ ಇಡಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳನ್ನು ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (VVPAT) ಘಟಕದಲ್ಲಿ ಅಪ್‌ಲೋಡ್ ಮಾಡಲು ಸಿಂಬಲ್ ಲೋಡಿಂಗ್ ಘಟಕವನ್ನು ಬಳಸಲಾಗುತ್ತದೆ. ನಂತರ ಅದನ್ನು ಎಲೆಕ್ಟ್ರಾನಿಕ್ ಮತ ಯಂತ್ರಗಳ ಮೂಲಕ ಚಲಾಯಿಸಿದ ಮತಗಳನ್ನು ಪರಿಶೀಲಿಸಲು ಬಳಸಲಾಗುತ್ತದೆ.

ಎಲೆಕ್ಟ್ರಾನಿಕ್ ಮತ ಯಂತ್ರಗಳು ತಾಂತ್ರಿಕ ದುರ್ಬಲವಾಗಿದ್ದರೆ ಮತ್ತು ಕಾರ್ಯವಿಧಾನದ ಲೋಪಗಳಿಂದ ಕೂಡಿದ್ದರೆ ಅವುಗಳ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತವೆ ಎಂದು ಗುಂಪು ಆರೋಪಿಸಿದೆ. ಆದಾಗ್ಯೂ, ಈ ಶಿಫಾರಸುಗಳನ್ನು ಅನುಸರಿಸಿದರೆ, ಕಾಗದದ ಮತಪತ್ರಗಳಲ್ಲಿ ಮತದಾನ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದು, ಒಂದು ವೇಳೆ VVPAT ಯಂತ್ರಗಳನ್ನು ಬಲಪಡಿಸಲು ಸಾಧ್ಯವಾಗದಿದ್ದರೆ ಕಾಗದದ ಮತಪತ್ರಗಳು ಯೋಗ್ಯವಾಗಿರುತ್ತದೆ ಎಂದು ಅವರು ವಾದಿಸಿದ್ದಾರೆ.

ಈ ಮನವಿ ಪತ್ರವನ್ನು ಅನುಮೋದಿಸಿದವರಲ್ಲಿ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಎಂ.ಜಿ. ದೇವಸಹಾಯಂ, ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಡಿ. ಹರಿಪರಂತಮನ್ ಮತ್ತು ಬಿ.ಜಿ. ಕೋಲ್ಸೆ ಪಾಟೀಲ್ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಇದ್ದಾರೆ. ಇವಿಎಂ ಮೂಲ ಕೋಡ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...