Homeಚಳವಳಿಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

ಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

- Advertisement -
- Advertisement -

ಮತದಾರರ ಪಟ್ಟಿಗಳನ್ನು ಹುಡುಕಲು ಸಾಧ್ಯವಾಗುವಂತೆ ಮಾಡುವುದು ಮತ್ತು ಎಲೆಕ್ಟ್ರಾನಿಕ್ ವೋಟರ್ ಯಂತ್ರಗಳ (ಇವಿಎಂ) ಮೂಲ ಕೋಡ್ ಅನ್ನು ಬಿಡುಗಡೆ ಮಾಡುವುದರಿಂದ ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ನಾಗರಿಕರ ಹಕ್ಕುಗಳ ಸಂಘಟನೆಯೊಂದು ಶುಕ್ರವಾರ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಕೇವಲ 28% ಭಾರತೀಯರು ಮಾತ್ರ ಚುನಾವಣಾ ಆಯೋಗದಲ್ಲಿ ನಂಬಿಕೆ ಹೊಂದಿದ್ದಾರೆ ಎಂಬ ಸಮೀಕ್ಷೆಯೊಂದರ ಹಿನ್ನಲೆಯಲ್ಲಿ ‘Vote for Democracy” ಎಂಬ ಹೆಸರಿನ 83 ಜನರ ಈ ನಾಗರಿಕ ಹಕ್ಕುಗಳ ಗುಂಪು ಚುನಾವಣಾ ಆಯೋಗಕ್ಕೆ ಆರು ಸಲಹೆಗಳನ್ನು ನೀಡಿದೆ. ಚುನಾವಣಾ ಆಯೋಗದ ಮೇಲೆ ನಂಬಿಕೆ ಕಳೆದುಕೊಳ್ಳುವುದು “ಪ್ರಜಾಪ್ರಭುತ್ವದ ಹಿನ್ನಡೆಯ ಆತಂಕಕಾರಿ ಸೂಚನೆ” ಎಂದು ಅದು ಹೇಳಿದೆ.

ಹುಡುಕಿ ಕಂಡುಕೊಳ್ಳಬಹುದಾದ ಡೇಟಾಬೇಸ್ ಇಲ್ಲದೆ, ಎಲ್ಲಾ ಅರ್ಹ ನಿವಾಸಿಗಳನ್ನು ಮತದಾರರಾಗಿ ಪಟ್ಟಿ ಮಾಡಲಾಗಿದೆಯೇ ಅಥವಾ ಮರಣ ಹೊಂದಿದವರನ್ನು ಅಧಿಕೃತ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆಯೇ ಎಂದು ನಾಗರಿಕರು ಸ್ವತಂತ್ರವಾಗಿ ಪರಿಶೀಲಿಸಲು ಈಗ ಯಾವುದೇ ಮಾರ್ಗವಿಲ್ಲ ಎಂದು ನಾಗರಿಕ ಹಕ್ಕುಗಳ ಗುಂಪು ವಾದಿಸಿದೆ. “ನಮ್ಮ ಈ ಬೇಡಿಕೆಯನ್ನು ಪೂರೈಸುವಲ್ಲಿ ವಿಫಲವಾದರೆ, ಚುನಾವಣಾ ಆಯೋಗವು ತಾಂತ್ರಿಕವಾಗಿ ಹಾಗೆ ಒದಗಿಸಲು ಸಜ್ಜಾಗಿಲ್ಲ ಎಂದರ್ಥ” ಎಂದು ಅವರ ಮನವಿ ಪತ್ರವು ಹೇಳಿದೆ.

ಮತದಾನ ಯಂತ್ರಗಳ ಮೂಲ ಕೋಡ್ ಸಾರ್ವಜನಿಕವಾಗಿ ಲಭ್ಯವಿಲ್ಲ ಎಂಬ ವಿಚಾರವನ್ನು ಎತ್ತಿತೋರಿಸಿರುವ ಅವರು, “ಬ್ಯಾಲೆಟ್‌ ಯೂನಿಟ್‌ನ ಬಟನ್‌ಗಳಲ್ಲಿ ಪ್ರತಿ ಅಭ್ಯರ್ಥಿಗೆ ಮತಗಳನ್ನು ದಾಖಲಿಸುವುದು ಮತ್ತು ಮತಗಳನ್ನು ಎಣಿಸುವುದು ಸೇರಿದಂತೆ ಮುಂತಾದ ಯಾವುದೆ ತೊಂದರೆ ಇಲ್ಲದ ಕೆಲಸ ಮಾಡುವ ಒಂದು ಸರಳ ಮೂಲ ಕೋಡ್‌ನ ಸುತ್ತ ಏಕೆ ಇಂತಹ ಗೌಪ್ಯತೆ ಇದೆ?” ಎಂದು ಮನವಿ ಪತ್ರವು ಕೇಳಿದೆ.

ಇದೆಲ್ಲದೆ, ಎಲ್ಲಾ ಬೂತ್‌ಗಳು ಮತ್ತು ಕ್ಷೇತ್ರಗಳಿಂದ ಹುಡುಕಿ ಕಂಡುಕೊಳ್ಳಬಹುದಾದ ಸ್ವರೂಪದಲ್ಲಿ ಫಾರ್ಮ್ 17C ಡೇಟಾವನ್ನು ಮತ್ತು ಒಟ್ಟು ಮತ ಎಣಿಕೆಗಳನ್ನು ಸಾರ್ವಜನಿಕ ಪರಿಶೀಲನೆಗಾಗಿ ಸಾರ್ವಜನಿಕವಾಗಿ ಅಪ್‌ಲೋಡ್ ಮಾಡಲು ಗುಂಪು ಕರೆ ನೀಡಿದೆ.

ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವನ್ನು ಅಲ್ಲಿನ ಪ್ರೆಸೀಡಿಂಗ್ ಆಫೀಸರ್‌ ಪ್ರತಿನಿಧಿಸುತ್ತಾರೆ. ಮತದಾನ ಕೇಂದ್ರದಲ್ಲಿ ಮತದಾನ ಮುಗಿದ ನಂತರ, ಈ ಪ್ರೆಸೀಡಿಂಗ್ ಅಧಿಕಾರಿ ಫಾರ್ಮ್ 17C ಅನ್ನು ಭರ್ತಿ ಮಾಡುತ್ತಾರೆ. ಇದು ಮತಗಟ್ಟೆಯಲ್ಲಿ ನೋಂದಾಯಿಸಲಾದ ಮತದಾರರ ಸಂಖ್ಯೆ ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರದಲ್ಲಿ ದಾಖಲಾದ ಮತಗಳ ಸಂಖ್ಯೆ ಮತ್ತು ಮತ ಚಲಾಯಿಸಿದ ಮತದಾರರ ಲಿಂಗವಾರು ವಿಂಗಡಣೆಯಂತಹ ವಿವರಗಳನ್ನು ಹೊಂದಿರುತ್ತದೆ.

ಪಾರದರ್ಶಕತೆಗಾಗಿ ಮತ್ತು ಹುಡುಕಿ ಪಡೆಯಲು ಡೇಟಾಬೇಸ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಮೂನೆಗಳು – ಫಾರ್ಮ್ 9, 10, 11, 11A, ಮತ್ತು 11B – ಕೂಡಾ ಸಾರ್ವಜನಿಕರಿಗೆ ಲಭ್ಯ ಇರಬೇಕು ಎಂದು ನಾಗರಿಕ ಗುಂಪು ಒತ್ತಾಯಿಸಿದೆ. ಹೆಚ್ಚುವರಿಯಾಗಿ, ಚುನಾವಣೆಗಳಲ್ಲಿ ಬಳಸಲಾಗುವ ಪ್ರತಿಯೊಂದು ಚಿಹ್ನೆಯನ್ನು ಲೋಡಿಂಗ್ ಘಟಕದಿಂದ ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಲು ಗುಂಪು ಒತ್ತಾಯಿಸಿದೆ ಮತ್ತು ಪ್ರತಿ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳಿಗೆ ಮತದಾರರ ಪರಿಶೀಲಿಸಿದ ಪೇಪರ್ ಆಡಿಟ್ ಟ್ರೇಲ್‌ಗಳನ್ನು ರಚಿಸುವಂತೆ ಒತ್ತಾಯಿಸಿದೆ.

VVPAT ಚೀಟಿಗಳನ್ನು ಮತದಾರರಿಗೆ ನೀಡಬೇಕು, ನಂತರ ಅವರು ಅವುಗಳನ್ನು ಪ್ರತ್ಯೇಕ ಮತಪೆಟ್ಟಿಗೆಯಲ್ಲಿ ಇಡಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳನ್ನು ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (VVPAT) ಘಟಕದಲ್ಲಿ ಅಪ್‌ಲೋಡ್ ಮಾಡಲು ಸಿಂಬಲ್ ಲೋಡಿಂಗ್ ಘಟಕವನ್ನು ಬಳಸಲಾಗುತ್ತದೆ. ನಂತರ ಅದನ್ನು ಎಲೆಕ್ಟ್ರಾನಿಕ್ ಮತ ಯಂತ್ರಗಳ ಮೂಲಕ ಚಲಾಯಿಸಿದ ಮತಗಳನ್ನು ಪರಿಶೀಲಿಸಲು ಬಳಸಲಾಗುತ್ತದೆ.

ಎಲೆಕ್ಟ್ರಾನಿಕ್ ಮತ ಯಂತ್ರಗಳು ತಾಂತ್ರಿಕ ದುರ್ಬಲವಾಗಿದ್ದರೆ ಮತ್ತು ಕಾರ್ಯವಿಧಾನದ ಲೋಪಗಳಿಂದ ಕೂಡಿದ್ದರೆ ಅವುಗಳ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತವೆ ಎಂದು ಗುಂಪು ಆರೋಪಿಸಿದೆ. ಆದಾಗ್ಯೂ, ಈ ಶಿಫಾರಸುಗಳನ್ನು ಅನುಸರಿಸಿದರೆ, ಕಾಗದದ ಮತಪತ್ರಗಳಲ್ಲಿ ಮತದಾನ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದು, ಒಂದು ವೇಳೆ VVPAT ಯಂತ್ರಗಳನ್ನು ಬಲಪಡಿಸಲು ಸಾಧ್ಯವಾಗದಿದ್ದರೆ ಕಾಗದದ ಮತಪತ್ರಗಳು ಯೋಗ್ಯವಾಗಿರುತ್ತದೆ ಎಂದು ಅವರು ವಾದಿಸಿದ್ದಾರೆ.

ಈ ಮನವಿ ಪತ್ರವನ್ನು ಅನುಮೋದಿಸಿದವರಲ್ಲಿ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಎಂ.ಜಿ. ದೇವಸಹಾಯಂ, ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಡಿ. ಹರಿಪರಂತಮನ್ ಮತ್ತು ಬಿ.ಜಿ. ಕೋಲ್ಸೆ ಪಾಟೀಲ್ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಇದ್ದಾರೆ. ಇವಿಎಂ ಮೂಲ ಕೋಡ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...