Homeಚಳವಳಿಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

ಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

- Advertisement -
- Advertisement -

ಮತದಾರರ ಪಟ್ಟಿಗಳನ್ನು ಹುಡುಕಲು ಸಾಧ್ಯವಾಗುವಂತೆ ಮಾಡುವುದು ಮತ್ತು ಎಲೆಕ್ಟ್ರಾನಿಕ್ ವೋಟರ್ ಯಂತ್ರಗಳ (ಇವಿಎಂ) ಮೂಲ ಕೋಡ್ ಅನ್ನು ಬಿಡುಗಡೆ ಮಾಡುವುದರಿಂದ ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ನಾಗರಿಕರ ಹಕ್ಕುಗಳ ಸಂಘಟನೆಯೊಂದು ಶುಕ್ರವಾರ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಕೇವಲ 28% ಭಾರತೀಯರು ಮಾತ್ರ ಚುನಾವಣಾ ಆಯೋಗದಲ್ಲಿ ನಂಬಿಕೆ ಹೊಂದಿದ್ದಾರೆ ಎಂಬ ಸಮೀಕ್ಷೆಯೊಂದರ ಹಿನ್ನಲೆಯಲ್ಲಿ ‘Vote for Democracy” ಎಂಬ ಹೆಸರಿನ 83 ಜನರ ಈ ನಾಗರಿಕ ಹಕ್ಕುಗಳ ಗುಂಪು ಚುನಾವಣಾ ಆಯೋಗಕ್ಕೆ ಆರು ಸಲಹೆಗಳನ್ನು ನೀಡಿದೆ. ಚುನಾವಣಾ ಆಯೋಗದ ಮೇಲೆ ನಂಬಿಕೆ ಕಳೆದುಕೊಳ್ಳುವುದು “ಪ್ರಜಾಪ್ರಭುತ್ವದ ಹಿನ್ನಡೆಯ ಆತಂಕಕಾರಿ ಸೂಚನೆ” ಎಂದು ಅದು ಹೇಳಿದೆ.

ಹುಡುಕಿ ಕಂಡುಕೊಳ್ಳಬಹುದಾದ ಡೇಟಾಬೇಸ್ ಇಲ್ಲದೆ, ಎಲ್ಲಾ ಅರ್ಹ ನಿವಾಸಿಗಳನ್ನು ಮತದಾರರಾಗಿ ಪಟ್ಟಿ ಮಾಡಲಾಗಿದೆಯೇ ಅಥವಾ ಮರಣ ಹೊಂದಿದವರನ್ನು ಅಧಿಕೃತ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆಯೇ ಎಂದು ನಾಗರಿಕರು ಸ್ವತಂತ್ರವಾಗಿ ಪರಿಶೀಲಿಸಲು ಈಗ ಯಾವುದೇ ಮಾರ್ಗವಿಲ್ಲ ಎಂದು ನಾಗರಿಕ ಹಕ್ಕುಗಳ ಗುಂಪು ವಾದಿಸಿದೆ. “ನಮ್ಮ ಈ ಬೇಡಿಕೆಯನ್ನು ಪೂರೈಸುವಲ್ಲಿ ವಿಫಲವಾದರೆ, ಚುನಾವಣಾ ಆಯೋಗವು ತಾಂತ್ರಿಕವಾಗಿ ಹಾಗೆ ಒದಗಿಸಲು ಸಜ್ಜಾಗಿಲ್ಲ ಎಂದರ್ಥ” ಎಂದು ಅವರ ಮನವಿ ಪತ್ರವು ಹೇಳಿದೆ.

ಮತದಾನ ಯಂತ್ರಗಳ ಮೂಲ ಕೋಡ್ ಸಾರ್ವಜನಿಕವಾಗಿ ಲಭ್ಯವಿಲ್ಲ ಎಂಬ ವಿಚಾರವನ್ನು ಎತ್ತಿತೋರಿಸಿರುವ ಅವರು, “ಬ್ಯಾಲೆಟ್‌ ಯೂನಿಟ್‌ನ ಬಟನ್‌ಗಳಲ್ಲಿ ಪ್ರತಿ ಅಭ್ಯರ್ಥಿಗೆ ಮತಗಳನ್ನು ದಾಖಲಿಸುವುದು ಮತ್ತು ಮತಗಳನ್ನು ಎಣಿಸುವುದು ಸೇರಿದಂತೆ ಮುಂತಾದ ಯಾವುದೆ ತೊಂದರೆ ಇಲ್ಲದ ಕೆಲಸ ಮಾಡುವ ಒಂದು ಸರಳ ಮೂಲ ಕೋಡ್‌ನ ಸುತ್ತ ಏಕೆ ಇಂತಹ ಗೌಪ್ಯತೆ ಇದೆ?” ಎಂದು ಮನವಿ ಪತ್ರವು ಕೇಳಿದೆ.

ಇದೆಲ್ಲದೆ, ಎಲ್ಲಾ ಬೂತ್‌ಗಳು ಮತ್ತು ಕ್ಷೇತ್ರಗಳಿಂದ ಹುಡುಕಿ ಕಂಡುಕೊಳ್ಳಬಹುದಾದ ಸ್ವರೂಪದಲ್ಲಿ ಫಾರ್ಮ್ 17C ಡೇಟಾವನ್ನು ಮತ್ತು ಒಟ್ಟು ಮತ ಎಣಿಕೆಗಳನ್ನು ಸಾರ್ವಜನಿಕ ಪರಿಶೀಲನೆಗಾಗಿ ಸಾರ್ವಜನಿಕವಾಗಿ ಅಪ್‌ಲೋಡ್ ಮಾಡಲು ಗುಂಪು ಕರೆ ನೀಡಿದೆ.

ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವನ್ನು ಅಲ್ಲಿನ ಪ್ರೆಸೀಡಿಂಗ್ ಆಫೀಸರ್‌ ಪ್ರತಿನಿಧಿಸುತ್ತಾರೆ. ಮತದಾನ ಕೇಂದ್ರದಲ್ಲಿ ಮತದಾನ ಮುಗಿದ ನಂತರ, ಈ ಪ್ರೆಸೀಡಿಂಗ್ ಅಧಿಕಾರಿ ಫಾರ್ಮ್ 17C ಅನ್ನು ಭರ್ತಿ ಮಾಡುತ್ತಾರೆ. ಇದು ಮತಗಟ್ಟೆಯಲ್ಲಿ ನೋಂದಾಯಿಸಲಾದ ಮತದಾರರ ಸಂಖ್ಯೆ ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರದಲ್ಲಿ ದಾಖಲಾದ ಮತಗಳ ಸಂಖ್ಯೆ ಮತ್ತು ಮತ ಚಲಾಯಿಸಿದ ಮತದಾರರ ಲಿಂಗವಾರು ವಿಂಗಡಣೆಯಂತಹ ವಿವರಗಳನ್ನು ಹೊಂದಿರುತ್ತದೆ.

ಪಾರದರ್ಶಕತೆಗಾಗಿ ಮತ್ತು ಹುಡುಕಿ ಪಡೆಯಲು ಡೇಟಾಬೇಸ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಮೂನೆಗಳು – ಫಾರ್ಮ್ 9, 10, 11, 11A, ಮತ್ತು 11B – ಕೂಡಾ ಸಾರ್ವಜನಿಕರಿಗೆ ಲಭ್ಯ ಇರಬೇಕು ಎಂದು ನಾಗರಿಕ ಗುಂಪು ಒತ್ತಾಯಿಸಿದೆ. ಹೆಚ್ಚುವರಿಯಾಗಿ, ಚುನಾವಣೆಗಳಲ್ಲಿ ಬಳಸಲಾಗುವ ಪ್ರತಿಯೊಂದು ಚಿಹ್ನೆಯನ್ನು ಲೋಡಿಂಗ್ ಘಟಕದಿಂದ ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಲು ಗುಂಪು ಒತ್ತಾಯಿಸಿದೆ ಮತ್ತು ಪ್ರತಿ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳಿಗೆ ಮತದಾರರ ಪರಿಶೀಲಿಸಿದ ಪೇಪರ್ ಆಡಿಟ್ ಟ್ರೇಲ್‌ಗಳನ್ನು ರಚಿಸುವಂತೆ ಒತ್ತಾಯಿಸಿದೆ.

VVPAT ಚೀಟಿಗಳನ್ನು ಮತದಾರರಿಗೆ ನೀಡಬೇಕು, ನಂತರ ಅವರು ಅವುಗಳನ್ನು ಪ್ರತ್ಯೇಕ ಮತಪೆಟ್ಟಿಗೆಯಲ್ಲಿ ಇಡಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳನ್ನು ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (VVPAT) ಘಟಕದಲ್ಲಿ ಅಪ್‌ಲೋಡ್ ಮಾಡಲು ಸಿಂಬಲ್ ಲೋಡಿಂಗ್ ಘಟಕವನ್ನು ಬಳಸಲಾಗುತ್ತದೆ. ನಂತರ ಅದನ್ನು ಎಲೆಕ್ಟ್ರಾನಿಕ್ ಮತ ಯಂತ್ರಗಳ ಮೂಲಕ ಚಲಾಯಿಸಿದ ಮತಗಳನ್ನು ಪರಿಶೀಲಿಸಲು ಬಳಸಲಾಗುತ್ತದೆ.

ಎಲೆಕ್ಟ್ರಾನಿಕ್ ಮತ ಯಂತ್ರಗಳು ತಾಂತ್ರಿಕ ದುರ್ಬಲವಾಗಿದ್ದರೆ ಮತ್ತು ಕಾರ್ಯವಿಧಾನದ ಲೋಪಗಳಿಂದ ಕೂಡಿದ್ದರೆ ಅವುಗಳ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತವೆ ಎಂದು ಗುಂಪು ಆರೋಪಿಸಿದೆ. ಆದಾಗ್ಯೂ, ಈ ಶಿಫಾರಸುಗಳನ್ನು ಅನುಸರಿಸಿದರೆ, ಕಾಗದದ ಮತಪತ್ರಗಳಲ್ಲಿ ಮತದಾನ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದು, ಒಂದು ವೇಳೆ VVPAT ಯಂತ್ರಗಳನ್ನು ಬಲಪಡಿಸಲು ಸಾಧ್ಯವಾಗದಿದ್ದರೆ ಕಾಗದದ ಮತಪತ್ರಗಳು ಯೋಗ್ಯವಾಗಿರುತ್ತದೆ ಎಂದು ಅವರು ವಾದಿಸಿದ್ದಾರೆ.

ಈ ಮನವಿ ಪತ್ರವನ್ನು ಅನುಮೋದಿಸಿದವರಲ್ಲಿ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಎಂ.ಜಿ. ದೇವಸಹಾಯಂ, ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಡಿ. ಹರಿಪರಂತಮನ್ ಮತ್ತು ಬಿ.ಜಿ. ಕೋಲ್ಸೆ ಪಾಟೀಲ್ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಇದ್ದಾರೆ. ಇವಿಎಂ ಮೂಲ ಕೋಡ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...