Homeಮುಖಪುಟಯುಪಿ-ವಾರಣಾಸಿಯ ‘ಇವಿಎಂ ಕಳ್ಳತನ’ ವಿವಾದ: ಅಧಿಕಾರಿ ಅಮಾನತು ಸಾಧ್ಯತೆ

ಯುಪಿ-ವಾರಣಾಸಿಯ ‘ಇವಿಎಂ ಕಳ್ಳತನ’ ವಿವಾದ: ಅಧಿಕಾರಿ ಅಮಾನತು ಸಾಧ್ಯತೆ

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತಯಂತ್ರಗಳನ್ನು ಇಟ್ಟಿದ್ದ ಕೇಂದ್ರದಿಂದ ಮತಯಂತ್ರಗಳನ್ನು ಕಳವು ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಹಿರಿಯ ಆಡಳಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ತರಬೇತಿ ಇವಿಎಂಗಳ ಸಾಗಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕುರಿತು ವಾರಣಾಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌.ಕೆ. ಸಿಂಗ್ ವಿರುದ್ಧ ಕ್ರಮಕ್ಕೆ ಭಾರತೀಯ ಚುನಾವಣಾ ಆಯೋಗ ಆದೇಶಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ ತಿಳಿಸಿವೆ. ನಿನ್ನೆ ಆಗಿರುವ ತಪ್ಪನ್ನು ನಗರ ಪೊಲೀಸ್ ಕಮಿಷನರ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಗೋವಾ: ಅಧಿಕಾರಕ್ಕಾಗಿ ಟಿಎಂಸಿ ಮಿತ್ರ ಪಕ್ಷ ಎಂಜಿಪಿ ಜೊತೆ ಚರ್ಚೆ ಆರಂಭಿಸಿದ ಬಿಜೆಪಿ!

ಎನ್‌.ಕೆ. ಸಿಂಗ್ ಅವರ ಮೇಲಾಧಿಕಾರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ ಅವರು ಇಂದು ನೀಡಿರುವ ಹೇಳಿಕೆಯಲ್ಲಿ,“ಇವಿಎಂಗಳನ್ನು ಇಂದು ಬೆಳಿಗ್ಗೆ ಸ್ಥಳಾಂತರಿಸಬೇಕಾಗಿತ್ತು. ಆದರೆ ಈಗ ಅಮಾನತುಗೊಂಡಿರುವ ಅಧಿಕಾರಿ, ಯಾರಿಗೂ ತಿಳಿಸದೆ ಹಿಂದಿನ ರಾತ್ರಿ ಅವುಗಳನ್ನು ಹೊರತೆಗೆದಿದ್ದಾರೆ” ಎಂದು ತಿಳಿಸಿದ್ದಾರೆ.

ವಾರಣಾಸಿಯಲ್ಲಿ ನಿನ್ನೆ ಪಕ್ಷದ ಕಾರ್ಯಕರ್ತರು ಮತದಾನ ಯಂತ್ರಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಅಡ್ಡಗಟ್ಟಿದ ನಂತರ ಸಮಾಜವಾದಿ ಪಕ್ಷವು “ಮತದಾನವನ್ನು ಕದಿಯಾಲಾಗುತ್ತಿದೆ” ಎಂದು ಆರೋಪಿಸಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು 2017 ರಲ್ಲಿ ಸುಮಾರು 50 ಸ್ಥಾನಗಳನ್ನು ಬಿಜೆಪಿ 5000 ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದುಕೊಂಡಿತ್ತು ಎಂದು ಗಮನಸೆಳೆದಿದ್ದರು. ವಿವಿಧ ಜಿಲ್ಲೆಗಳಿಂದ ಇವಿಎಂ ಅನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಬರುತ್ತಿದ್ದು, ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದರು.

ಇದನ್ನೂ ಓದಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ಇಂದು, ಸಮಾಜವಾದಿ ಪಕ್ಷವು ವಾರಣಾಸಿಯ ಕಮಿಷನರ್ ದೀಪಕ್ ಅಗರ್ವಾಲ್ ಅವರು ಕರ್ತವ್ಯದಲ್ಲಿ ಲೋಪವಾಗಿರುವುದನ್ನು ಒಪ್ಪಿಕೊಂಡಿರುವ ವೀಡಿಯೊವನ್ನು ಟ್ವೀಟ್ ಮಾಡಿದೆ. ಆದರೆ, ಅಗರ್ವಾಲ್ ಅವರು ವಿಡಿಯೊದಲ್ಲಿ ನಿರ್ದಿಷ್ಟ ಲೋಪಗಳನ್ನು ಉಲ್ಲೇಖಿಸಿಲ್ಲ. ಪ್ರಸ್ತುತ ಯಂತ್ರಗಳು ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತಿತ್ತು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

“ನೀವು ಇವಿಎಂಗಳ ಕೊಂಡೊಯ್ಯುದರ ಪ್ರೋಟೋಕಾಲ್ ಬಗ್ಗೆ ಮಾತನಾಡಿದರೆ, ಪ್ರೋಟೋಕಾಲ್‌ನಲ್ಲಿ ಲೋಪವಾಗಿದೆ, ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾನು ನಿಮಗೆ ಖಾತರಿ ನೀಡಬಲ್ಲೆ, ಮತದಾನದಲ್ಲಿ ಬಳಸುವ ಯಂತ್ರಗಳನ್ನು ತೆಗೆದುಕೊಂಡು ಹೋಗುವುದು ಅಸಾಧ್ಯ” ಎಂದು ಅವರು ವೀಡಿಯೊದಲ್ಲಿ ಹೇಳಿರುವುದು ಕೇಳಿಬರುತ್ತಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಸಮಾಜವಾದಿ ಪಕ್ಷವು ಪ್ರೋಟೋಕಾಲ್ ಅನ್ನು ಅನುಸರಿಸಿಲ್ಲ ಎಂದು ಒಪ್ಪಿಕೊಳ್ಳಲಾಗಿದೆ ಎಂದು ಹೇಳಿದೆ.

“ತರಬೇತಿ ಅಥವಾ ಮೀಸಲು ವಿದ್ಯುನ್ಮಾನ ಮತಯಂತ್ರಗಳನ್ನು ಸ್ಥಳಾಂತರಿಸಿದಾಗ, ಅಭ್ಯರ್ಥಿಗಳು ಅಥವಾ ಪಕ್ಷದ ಕಾರ್ಯಕರ್ತರಿಗೆ ತಿಳಿಸಬೇಕು ಮತ್ತು ಇದನ್ನು ಮಾಡಲಾಗಿಲ್ಲ” ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ವಿವಾದದ ಬಗ್ಗೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...