Homeಮುಖಪುಟಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

- Advertisement -
- Advertisement -

ವಾರಣಾಸಿಯ ಮತ ಎಣಿಕೆ ಕೇಂದ್ರಗಳಿಂದ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ಕಳ್ಳತನ ಮಾಡಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿದೆ. ಟ್ರಕ್‌ನಲ್ಲಿ ಇರಿಸಲಾಗಿದ್ದ ಯಂತ್ರಗಳನ್ನು ಮತ ಎಣಿಕೆಗೆ ಎರಡು ದಿನಗಳ ಮೊದಲು ಹೊರತೆಗೆಯಲಾಗಿದೆ ಎಂದು ಆರೋಪಿಸಲಾಗಿದ್ದು, ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬೆಂಬಲಿಗರು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, “ವಾರಣಾಸಿಯಲ್ಲಿ ಇವಿಎಂ ಸಿಕ್ಕಿಬಿದ್ದಿರುವ ಸುದ್ದಿ ಯುಪಿಯ ಪ್ರತಿ ವಿಧಾನಸಭೆಯಲ್ಲೂ ಎಚ್ಚರಿಕೆಯಲ್ಲಿ ಇರುವಂತೆ ಸಂದೇಶ ನೀಡುತ್ತಿದೆ. ಮತ ಎಣಿಕೆಯಲ್ಲಿ ಅಕ್ರಮವೆಸಗುವ ಪ್ರಯತ್ನವನ್ನು ವಿಫಲಗೊಳಿಸಲು ಎಸ್‌ಪಿ-ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳು ಮತ್ತು ಬೆಂಬಲಿಗರು ತಮ್ಮ ಕ್ಯಾಮೆರಾಗಳೊಂದಿಗೆ ಸಿದ್ಧರಾಗಿರಬೇಕು. ಯುವ ಪ್ರಜಾಪ್ರಭುತ್ವ ಮತ್ತು ಭವಿಷ್ಯವನ್ನು ರಕ್ಷಿಸಲು, ಮತ ಎಣಿಕೆಯಲ್ಲಿ ಸೈನಿಕರಾಗಿ!” ಎಂದು ಟ್ವೀಟ್ ಮಾಡಿದ್ದಾರೆ.

 

ಸಮಾಜವಾದಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿರುವ ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್, ಪ್ರಸ್ತುತ ಇಎಂಗಳನ್ನು ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಮತ್ತು ಅವುಗಳನ್ನು ಮತದಾನಕ್ಕೆ ಬಳಸಿರಲಿಲ್ಲ ಎಂದು ಹೇಳಿದ್ದಾರೆ.

“ಕೆಲವು ರಾಜಕೀಯ ಪಕ್ಷಗಳು” ವದಂತಿಗಳನ್ನು ಹರಡುತ್ತಿವೆ ಎಂದು ಆರೋಪಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ, “ಚುನಾವಣೆಯಲ್ಲಿ ಬಳಸಿದ ಇವಿಎಂಗಳನ್ನು ಸಿಆರ್‌ಪಿಎಫ್ ವಶದಲ್ಲಿರುವ ಸ್ಟ್ರಾಂಗ್ ರೂಮ್‌ನಲ್ಲಿ ಸೀಲ್ ಮಾಡಲಾಗಿದೆ. ಅಲ್ಲಿ ಸಿಸಿಟಿವಿ ಕಣ್ಗಾವಲು ಇದ್ದು ಅದನ್ನು ಎಲ್ಲಾ ರಾಜಕೀಯ ಪಕ್ಷಗಳ ಜನರು ವೀಕ್ಷಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಪ್ರಸ್ತುತ ಇವಿಎಂಗಳು ಮಂಡಿಯಲ್ಲಿನ ಕಾಲೇಜಿನ ಆಹಾರ ಸಂಗ್ರಹಣೆಯಿಂದ ಹೋಗುತ್ತಿದ್ದವು. ನಾಳೆ ಎಣಿಕೆ ಕರ್ತವ್ಯದಲ್ಲಿ ತೊಡಗಿರುವ ನೌಕರರಿಗೆ ಎರಡನೇ ಹಂತದ ತರಬೇತಿಯಾಗಿದೆ. ಈ ಯಂತ್ರಗಳನ್ನು ಯಾವಾಗಲೂ ಪ್ರಾಯೋಗಿಕ ತರಬೇತಿಗಾಗಿ ಬಳಸಲಾಗುತ್ತದೆ” ಎಂದು ಶರ್ಮಾ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮಾಧ್ಯಮಗಳ ಮುಂದೆ ಈ ಹೇಳಿಕೆಗೆ ವಿರುದ್ಧವಾದ ಹೇಳಿಕೆ ನೀಡಿದ್ದು, “ವಾರಾಣಸಿಯಲ್ಲಿ ನಾವು ಒಂದು ಟ್ರಕ್ ಅನ್ನು ಅಡ್ಡಗಟ್ಟಿದ್ದೇವೆ. ಎರಡು ಟ್ರಕ್‌ಗಳು ಪರಾರಿಯಾಗಿವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಇಲ್ಲದಿದ್ದರೆ, ಇವಿಎಂಗಳನ್ನು ಹೊಂದಿರುವ ಎರಡು ಟ್ರಕ್‌ಗಳು ತಪ್ಪಿಸಿಕೊಂಡಿದ್ದು ಯಾಕೆ? ಅಭ್ಯರ್ಥಿಗಳ ಒಪ್ಪಿಗೆಯಿಲ್ಲದೆ ನೀವು ಯಾವುದೇ ಇವಿಎಂಗಳನ್ನು ಕೊಂಡೊಯ್ಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯೊಬ್ಬರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ‘ಬಿಜೆಪಿ ಸೋತಲ್ಲೆಲ್ಲ ಎಣಿಕೆ ನಿಧಾನವಾಗಲಿ’ ಎಂದು ಹೇಳುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಈಗ ಇವಿಎಂಗಳು ಸಿಕ್ಕಿಬಿದ್ದಿರುವುದರಿಂದ ಅಧಿಕಾರಿಗಳು ಹಲವು ನೆಪಗಳನ್ನು ಹೇಳುತ್ತಿದ್ದಾರೆ…” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಗುರುವಾರ ಮತ ಎಣಿಕೆ ನಡೆಯಲಿದ್ದು, ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರದ ನಿರೀಕ್ಷೆಯಲ್ಲಿದೆ. ರಾಜ್ಯದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ: ಶಿವಸೇನೆ ನಾಯಕರ ನಿವಾಸಗಳ ಮೇಲೆ IT ದಾಳಿ: ಅವರಿಗೆ ಬೇರೆ ಯಾರೂ ಸಿಗುತ್ತಿಲ್ಲವೆ ಎಂದ ಸಂಜಯ್ ರಾವತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೋಲು ಖಚಿತ ಅಂತ ಗೊತ್ತಾದ ಕೂಡಲೇ SP,BSP,Congress ಹೇಳೋ ಮೊದಲ ಪದವೇ EVM ಸರಿ ಇಲ್ಲಾ,EVM ನಲ್ಲಿ ಅಕ್ರಮ ನಡೆದಿದೆ ಅಂತ

  2. How was this caughty, where are the robbers, who caught them. There should be a video of how the truck was caught isnt it… Bidhru meese managilla anno ranathanthra idhu.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...