Homeಮುಖಪುಟಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

- Advertisement -
- Advertisement -

ವಾರಣಾಸಿಯ ಮತ ಎಣಿಕೆ ಕೇಂದ್ರಗಳಿಂದ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ಕಳ್ಳತನ ಮಾಡಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿದೆ. ಟ್ರಕ್‌ನಲ್ಲಿ ಇರಿಸಲಾಗಿದ್ದ ಯಂತ್ರಗಳನ್ನು ಮತ ಎಣಿಕೆಗೆ ಎರಡು ದಿನಗಳ ಮೊದಲು ಹೊರತೆಗೆಯಲಾಗಿದೆ ಎಂದು ಆರೋಪಿಸಲಾಗಿದ್ದು, ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬೆಂಬಲಿಗರು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, “ವಾರಣಾಸಿಯಲ್ಲಿ ಇವಿಎಂ ಸಿಕ್ಕಿಬಿದ್ದಿರುವ ಸುದ್ದಿ ಯುಪಿಯ ಪ್ರತಿ ವಿಧಾನಸಭೆಯಲ್ಲೂ ಎಚ್ಚರಿಕೆಯಲ್ಲಿ ಇರುವಂತೆ ಸಂದೇಶ ನೀಡುತ್ತಿದೆ. ಮತ ಎಣಿಕೆಯಲ್ಲಿ ಅಕ್ರಮವೆಸಗುವ ಪ್ರಯತ್ನವನ್ನು ವಿಫಲಗೊಳಿಸಲು ಎಸ್‌ಪಿ-ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳು ಮತ್ತು ಬೆಂಬಲಿಗರು ತಮ್ಮ ಕ್ಯಾಮೆರಾಗಳೊಂದಿಗೆ ಸಿದ್ಧರಾಗಿರಬೇಕು. ಯುವ ಪ್ರಜಾಪ್ರಭುತ್ವ ಮತ್ತು ಭವಿಷ್ಯವನ್ನು ರಕ್ಷಿಸಲು, ಮತ ಎಣಿಕೆಯಲ್ಲಿ ಸೈನಿಕರಾಗಿ!” ಎಂದು ಟ್ವೀಟ್ ಮಾಡಿದ್ದಾರೆ.

 

ಸಮಾಜವಾದಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿರುವ ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್, ಪ್ರಸ್ತುತ ಇಎಂಗಳನ್ನು ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಮತ್ತು ಅವುಗಳನ್ನು ಮತದಾನಕ್ಕೆ ಬಳಸಿರಲಿಲ್ಲ ಎಂದು ಹೇಳಿದ್ದಾರೆ.

“ಕೆಲವು ರಾಜಕೀಯ ಪಕ್ಷಗಳು” ವದಂತಿಗಳನ್ನು ಹರಡುತ್ತಿವೆ ಎಂದು ಆರೋಪಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ, “ಚುನಾವಣೆಯಲ್ಲಿ ಬಳಸಿದ ಇವಿಎಂಗಳನ್ನು ಸಿಆರ್‌ಪಿಎಫ್ ವಶದಲ್ಲಿರುವ ಸ್ಟ್ರಾಂಗ್ ರೂಮ್‌ನಲ್ಲಿ ಸೀಲ್ ಮಾಡಲಾಗಿದೆ. ಅಲ್ಲಿ ಸಿಸಿಟಿವಿ ಕಣ್ಗಾವಲು ಇದ್ದು ಅದನ್ನು ಎಲ್ಲಾ ರಾಜಕೀಯ ಪಕ್ಷಗಳ ಜನರು ವೀಕ್ಷಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಪ್ರಸ್ತುತ ಇವಿಎಂಗಳು ಮಂಡಿಯಲ್ಲಿನ ಕಾಲೇಜಿನ ಆಹಾರ ಸಂಗ್ರಹಣೆಯಿಂದ ಹೋಗುತ್ತಿದ್ದವು. ನಾಳೆ ಎಣಿಕೆ ಕರ್ತವ್ಯದಲ್ಲಿ ತೊಡಗಿರುವ ನೌಕರರಿಗೆ ಎರಡನೇ ಹಂತದ ತರಬೇತಿಯಾಗಿದೆ. ಈ ಯಂತ್ರಗಳನ್ನು ಯಾವಾಗಲೂ ಪ್ರಾಯೋಗಿಕ ತರಬೇತಿಗಾಗಿ ಬಳಸಲಾಗುತ್ತದೆ” ಎಂದು ಶರ್ಮಾ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮಾಧ್ಯಮಗಳ ಮುಂದೆ ಈ ಹೇಳಿಕೆಗೆ ವಿರುದ್ಧವಾದ ಹೇಳಿಕೆ ನೀಡಿದ್ದು, “ವಾರಾಣಸಿಯಲ್ಲಿ ನಾವು ಒಂದು ಟ್ರಕ್ ಅನ್ನು ಅಡ್ಡಗಟ್ಟಿದ್ದೇವೆ. ಎರಡು ಟ್ರಕ್‌ಗಳು ಪರಾರಿಯಾಗಿವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಇಲ್ಲದಿದ್ದರೆ, ಇವಿಎಂಗಳನ್ನು ಹೊಂದಿರುವ ಎರಡು ಟ್ರಕ್‌ಗಳು ತಪ್ಪಿಸಿಕೊಂಡಿದ್ದು ಯಾಕೆ? ಅಭ್ಯರ್ಥಿಗಳ ಒಪ್ಪಿಗೆಯಿಲ್ಲದೆ ನೀವು ಯಾವುದೇ ಇವಿಎಂಗಳನ್ನು ಕೊಂಡೊಯ್ಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯೊಬ್ಬರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ‘ಬಿಜೆಪಿ ಸೋತಲ್ಲೆಲ್ಲ ಎಣಿಕೆ ನಿಧಾನವಾಗಲಿ’ ಎಂದು ಹೇಳುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಈಗ ಇವಿಎಂಗಳು ಸಿಕ್ಕಿಬಿದ್ದಿರುವುದರಿಂದ ಅಧಿಕಾರಿಗಳು ಹಲವು ನೆಪಗಳನ್ನು ಹೇಳುತ್ತಿದ್ದಾರೆ…” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಗುರುವಾರ ಮತ ಎಣಿಕೆ ನಡೆಯಲಿದ್ದು, ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರದ ನಿರೀಕ್ಷೆಯಲ್ಲಿದೆ. ರಾಜ್ಯದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ: ಶಿವಸೇನೆ ನಾಯಕರ ನಿವಾಸಗಳ ಮೇಲೆ IT ದಾಳಿ: ಅವರಿಗೆ ಬೇರೆ ಯಾರೂ ಸಿಗುತ್ತಿಲ್ಲವೆ ಎಂದ ಸಂಜಯ್ ರಾವತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೋಲು ಖಚಿತ ಅಂತ ಗೊತ್ತಾದ ಕೂಡಲೇ SP,BSP,Congress ಹೇಳೋ ಮೊದಲ ಪದವೇ EVM ಸರಿ ಇಲ್ಲಾ,EVM ನಲ್ಲಿ ಅಕ್ರಮ ನಡೆದಿದೆ ಅಂತ

  2. How was this caughty, where are the robbers, who caught them. There should be a video of how the truck was caught isnt it… Bidhru meese managilla anno ranathanthra idhu.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...