Homeಮುಖಪುಟಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

- Advertisement -
- Advertisement -

ವಾರಣಾಸಿಯ ಮತ ಎಣಿಕೆ ಕೇಂದ್ರಗಳಿಂದ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ಕಳ್ಳತನ ಮಾಡಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿದೆ. ಟ್ರಕ್‌ನಲ್ಲಿ ಇರಿಸಲಾಗಿದ್ದ ಯಂತ್ರಗಳನ್ನು ಮತ ಎಣಿಕೆಗೆ ಎರಡು ದಿನಗಳ ಮೊದಲು ಹೊರತೆಗೆಯಲಾಗಿದೆ ಎಂದು ಆರೋಪಿಸಲಾಗಿದ್ದು, ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬೆಂಬಲಿಗರು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, “ವಾರಣಾಸಿಯಲ್ಲಿ ಇವಿಎಂ ಸಿಕ್ಕಿಬಿದ್ದಿರುವ ಸುದ್ದಿ ಯುಪಿಯ ಪ್ರತಿ ವಿಧಾನಸಭೆಯಲ್ಲೂ ಎಚ್ಚರಿಕೆಯಲ್ಲಿ ಇರುವಂತೆ ಸಂದೇಶ ನೀಡುತ್ತಿದೆ. ಮತ ಎಣಿಕೆಯಲ್ಲಿ ಅಕ್ರಮವೆಸಗುವ ಪ್ರಯತ್ನವನ್ನು ವಿಫಲಗೊಳಿಸಲು ಎಸ್‌ಪಿ-ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳು ಮತ್ತು ಬೆಂಬಲಿಗರು ತಮ್ಮ ಕ್ಯಾಮೆರಾಗಳೊಂದಿಗೆ ಸಿದ್ಧರಾಗಿರಬೇಕು. ಯುವ ಪ್ರಜಾಪ್ರಭುತ್ವ ಮತ್ತು ಭವಿಷ್ಯವನ್ನು ರಕ್ಷಿಸಲು, ಮತ ಎಣಿಕೆಯಲ್ಲಿ ಸೈನಿಕರಾಗಿ!” ಎಂದು ಟ್ವೀಟ್ ಮಾಡಿದ್ದಾರೆ.

 

ಸಮಾಜವಾದಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿರುವ ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್, ಪ್ರಸ್ತುತ ಇಎಂಗಳನ್ನು ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಮತ್ತು ಅವುಗಳನ್ನು ಮತದಾನಕ್ಕೆ ಬಳಸಿರಲಿಲ್ಲ ಎಂದು ಹೇಳಿದ್ದಾರೆ.

“ಕೆಲವು ರಾಜಕೀಯ ಪಕ್ಷಗಳು” ವದಂತಿಗಳನ್ನು ಹರಡುತ್ತಿವೆ ಎಂದು ಆರೋಪಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ, “ಚುನಾವಣೆಯಲ್ಲಿ ಬಳಸಿದ ಇವಿಎಂಗಳನ್ನು ಸಿಆರ್‌ಪಿಎಫ್ ವಶದಲ್ಲಿರುವ ಸ್ಟ್ರಾಂಗ್ ರೂಮ್‌ನಲ್ಲಿ ಸೀಲ್ ಮಾಡಲಾಗಿದೆ. ಅಲ್ಲಿ ಸಿಸಿಟಿವಿ ಕಣ್ಗಾವಲು ಇದ್ದು ಅದನ್ನು ಎಲ್ಲಾ ರಾಜಕೀಯ ಪಕ್ಷಗಳ ಜನರು ವೀಕ್ಷಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಪ್ರಸ್ತುತ ಇವಿಎಂಗಳು ಮಂಡಿಯಲ್ಲಿನ ಕಾಲೇಜಿನ ಆಹಾರ ಸಂಗ್ರಹಣೆಯಿಂದ ಹೋಗುತ್ತಿದ್ದವು. ನಾಳೆ ಎಣಿಕೆ ಕರ್ತವ್ಯದಲ್ಲಿ ತೊಡಗಿರುವ ನೌಕರರಿಗೆ ಎರಡನೇ ಹಂತದ ತರಬೇತಿಯಾಗಿದೆ. ಈ ಯಂತ್ರಗಳನ್ನು ಯಾವಾಗಲೂ ಪ್ರಾಯೋಗಿಕ ತರಬೇತಿಗಾಗಿ ಬಳಸಲಾಗುತ್ತದೆ” ಎಂದು ಶರ್ಮಾ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮಾಧ್ಯಮಗಳ ಮುಂದೆ ಈ ಹೇಳಿಕೆಗೆ ವಿರುದ್ಧವಾದ ಹೇಳಿಕೆ ನೀಡಿದ್ದು, “ವಾರಾಣಸಿಯಲ್ಲಿ ನಾವು ಒಂದು ಟ್ರಕ್ ಅನ್ನು ಅಡ್ಡಗಟ್ಟಿದ್ದೇವೆ. ಎರಡು ಟ್ರಕ್‌ಗಳು ಪರಾರಿಯಾಗಿವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಇಲ್ಲದಿದ್ದರೆ, ಇವಿಎಂಗಳನ್ನು ಹೊಂದಿರುವ ಎರಡು ಟ್ರಕ್‌ಗಳು ತಪ್ಪಿಸಿಕೊಂಡಿದ್ದು ಯಾಕೆ? ಅಭ್ಯರ್ಥಿಗಳ ಒಪ್ಪಿಗೆಯಿಲ್ಲದೆ ನೀವು ಯಾವುದೇ ಇವಿಎಂಗಳನ್ನು ಕೊಂಡೊಯ್ಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯೊಬ್ಬರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ‘ಬಿಜೆಪಿ ಸೋತಲ್ಲೆಲ್ಲ ಎಣಿಕೆ ನಿಧಾನವಾಗಲಿ’ ಎಂದು ಹೇಳುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಈಗ ಇವಿಎಂಗಳು ಸಿಕ್ಕಿಬಿದ್ದಿರುವುದರಿಂದ ಅಧಿಕಾರಿಗಳು ಹಲವು ನೆಪಗಳನ್ನು ಹೇಳುತ್ತಿದ್ದಾರೆ…” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಗುರುವಾರ ಮತ ಎಣಿಕೆ ನಡೆಯಲಿದ್ದು, ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರದ ನಿರೀಕ್ಷೆಯಲ್ಲಿದೆ. ರಾಜ್ಯದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ: ಶಿವಸೇನೆ ನಾಯಕರ ನಿವಾಸಗಳ ಮೇಲೆ IT ದಾಳಿ: ಅವರಿಗೆ ಬೇರೆ ಯಾರೂ ಸಿಗುತ್ತಿಲ್ಲವೆ ಎಂದ ಸಂಜಯ್ ರಾವತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೋಲು ಖಚಿತ ಅಂತ ಗೊತ್ತಾದ ಕೂಡಲೇ SP,BSP,Congress ಹೇಳೋ ಮೊದಲ ಪದವೇ EVM ಸರಿ ಇಲ್ಲಾ,EVM ನಲ್ಲಿ ಅಕ್ರಮ ನಡೆದಿದೆ ಅಂತ

  2. How was this caughty, where are the robbers, who caught them. There should be a video of how the truck was caught isnt it… Bidhru meese managilla anno ranathanthra idhu.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...