Homeಕರ್ನಾಟಕನಾವೆಲ್ಲಾ ಕೋತಿಗಳಾಗುತ್ತಿರುವುದು ಹೇಗೆ? ವಿಕಾಸ ಮತ್ತು ಹಿಂಚಲನೆ... - ಅಭಿಜಿತ್ ಬ್ಯಾನರ್ಜಿ

ನಾವೆಲ್ಲಾ ಕೋತಿಗಳಾಗುತ್ತಿರುವುದು ಹೇಗೆ? ವಿಕಾಸ ಮತ್ತು ಹಿಂಚಲನೆ… – ಅಭಿಜಿತ್ ಬ್ಯಾನರ್ಜಿ

ನಮ್ಮ ದೇಶದಲ್ಲಿನ ಮುಕ್ತತೆಯ, ಕುತೂಹಲದ, ಸಂವಾದದ, ಅಮೂರ್ತತೆಯ, ಆತಿಥ್ಯದ ಮತ್ತು ಕಾರುಣ್ಯದ ಸಂಪ್ರದಾಯಗಳನ್ನು ಗೌರವಿಸಿ, ಮೆಚ್ಚುವ ಚಳುವಳಿಯೊಂದನ್ನು ಹುಟ್ಟುಹಾಕಬೇಕಾಗಿದೆ.

- Advertisement -
- Advertisement -

ವಿಕಾಸ ಮತ್ತು ಹಿಂಚಲನೆ : ಅಭಿಜಿತ್ ಬ್ಯಾನರ್ಜಿ
ಅನುವಾದ: ಟಿ ಎಸ್ ವೇಣುಗೋಪಾಲ್

ಕೋತಿ ಮನುಷ್ಯನಾಗೋದನ್ನು ನಾವ್ಯಾರೂ ನೋಡಿಲ್ಲ. ಆದರೆ ಮನುಷ್ಯರು ಮಂಗಗಳಾಗುವುದನ್ನು ಆಗೀಗ ನೋಡುತ್ತಿರುತ್ತೇವೆ. ತಾನು ಕಂಡೇ ಇಲ್ಲದ್ದನ್ನು, ಯಾರೂ ಯಾವತ್ತೂ ಕಾಣದ್ದನ್ನು ಕಲ್ಪಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯ ಮನುಷ್ಯನಿಗೆ ಮಾತ್ರ ಸಾಧ್ಯ. ಚಿಂಪಾಂಜಿಗಳಿಗೆ ಕೆಲವು ಗುರುತುಗಳನ್ನು ಗ್ರಹಿಸಿಕೊಳ್ಳಲಿಕ್ಕೆ ಸಾಧ್ಯವಾಗಬಹುದು, ಕೆಲವು ಪದಗಳನ್ನೂ ಕಲಿಯಬಹುದು. ಆದರೆ ಯಾವುದೇ ಚಿಂಪಾಂಜಿಗೂ ಗಣೇಶನನ್ನೋ ಅಥವಾ ಒಂದು ಏಕಶೃಂಗಿಯನ್ನೋ ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ.

ಇತ್ತೀಚಿನ ದಿನಗಳಲ್ಲಿ ಮನುಷ್ಯನ ಈ ಪ್ರಮುಖ ಗುಣವನ್ನು ಅಲ್ಲಗೆಳೆಯುವುದೇ ಜಗತ್ತಿನೆಲ್ಲೆಡೆ ಬಲಪಂಥೀಯ ಜನಪ್ರಿಯ ರಾಜಕೀಯದ ಪ್ರಮುಖ ಕಸುಬಾಗಿಬಿಟ್ಟಿದೆೆ. “ದಲಿತರು ಅಂದರೆ ಮಲ ತೆಗೆಯುವವರು. ಅವರ ವ್ಯವಹಾರ ಎಲ್ಲಾ ಏನಿದ್ದರೂ ಸತ್ತ ಪ್ರಾಣಿಗಳು, ಮನುಷ್ಯರ ಕಕ್ಕಸ್ಸಿನ ಜೊತೆಗೆ. ಅವರ ಕೈಯಲ್ಲಿ ನಾವು ನೀರೇ ಕುಡಿಯುವುದಿಲ್ಲ. ಇನ್ನು ಅವರಿಗೆ ಮಗಳನ್ನು ಕೊಡುವುದೇ?” “ಮುಸಲ್ಮಾನರು ಕಟುಕರು, ಮುಗ್ದ ಜನರನ್ನು ಬಾಂಬು ಹಾಕಿ ಕೊಲ್ಲೋ ಜನ. ಹಿಂಸೆ ಅವರ ಭಾಗವಾಗಿಬಿಟ್ಟಿದೆ,” “ಕರಿಯರು ಅಂದ್ರೆ ಡ್ರಗ್ಸ್ ಮಾರೋರು, ಅಪರಾಧಿಗಳು ಅಂತ ಯಾರಿಗೆ ತಾನೆ ಗೊತ್ತಿಲ್ಲ? ಜೈಲು ತುಂಬಾ ಅವರೇ ಇದ್ದಾರೆ. ಅವರು ನಮಗೆ ಸಮಾನರಾಗೋದಕ್ಕೆ ಹೇಗೆ ಸಾಧ್ಯ?” ಹೀಗೆಲ್ಲಾ ಮಾತನಾಡುತ್ತಾರೆ.

ದಲಿತರೇನು ಮಲ ತೆಗೆಯಬೇಕು ಅಂತ ಬಯಸಿಕೊಂಡು ತೆಗೆಯುತ್ತಿಲ್ಲ. ಹಾಗೆಯೇ ನೀಗ್ರೋಗಳು ತಮ್ಮದು ಗುಲಾಮಗಿರಿಯ ಹಾಗೂ ಅನ್ಯಾಯದ ಚರಿತ್ರೆ ಆಗಿರಲಿ ಅಂತ ಬಯಸಿರಲಿಲ್ಲ. ಹಿಂಸೆ ರಾಜಕೀಯ ಪ್ರತಿರೋಧದ ಒಂದು ರೂಪ. (ಸಾಮಾನ್ಯವಾಗಿ ಇಂತಹ ಹಿಂಸೆಯಲ್ಲಿ ಮುಗ್ದರೇ ಸಾಯುತ್ತಿದ್ದರು.) ಆ ಹಿಂಸೆಯ ಪರಂಪರೆಯನ್ನು ಇಂದು ಮುಸ್ಲಿಂ ಭಯೋತ್ಪಾದಕತೆ ಮುಂದುವರಿಸಿಕೊಂಡು ಹೋಗುತ್ತಿದೆ. ಹಲವು ಬಂಗಾಲಿಗಳು ಮತ್ತು ಮಹಾರಾಷ್ಟ್ರದ (ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ್ ಸಾರ್ವಕರ್‌ ಸೇರಿದಂತೆ) ಹಿಂದುಗಳು ಇದನ್ನು ಬ್ರಿಟಿಷರ ವಿರುದ್ಧ ಬಳಸಿದ್ದರು. ಯಹೂದಿ ನಾಗರಿಕ ಹೋರಾಟಗಾರರು ಬ್ರಿಟಿಷರ ವಿರುದ್ಧ ಬಳಸಿದ್ದರು. ಆಗ ಅದು ಪ್ಯಾಲೆಸ್ತೈನ್ ಆಗಿತ್ತು. ಐರಿಷ್ ಕ್ಯಾಥೊಲಿಕರು ಇತ್ತೀಚಿನ ಕೆಲವು ವರ್ಷಗಳವರೆಗೆ ತಮ್ಮ ಇಂಗ್ಲಿಷ್ ಧಣಿಗಳ ವಿರುದ್ಧ ಬಳಸಿದ್ದರು. ಈಗ ಆ ಚರಿತ್ರೆ ಹೆಚ್ಚು ಕಡಿಮೆ ಮರೆತೇಹೋಗಿದೆ. 2001ರ ನಂತರ ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದಾಗಿಬಿಟ್ಟಿದೆ.

ಹೀಗೆ ವಾಚ್ಯಾರ್ಥವನ್ನು ನಿರೂಪಿಸುವ ಈ ಪ್ರವೃತ್ತಿಯೇ ಭೂಮಿ ಚಪ್ಪಟೆಯಾಗಿದೆ ಎಂಬ ಚಳುವಳಿಗೂ ಸ್ಪೂರ್ತಿ ನೀಡಿದೆ. ಅಮೇರಿಕೆಯಲ್ಲಿ ಟ್ರಂಪ್ ಬೆಂಬಲಿಗರಲ್ಲಿ ಇದು ತುಂಬಾ ಜನಪ್ರಿಯವಾಗಿದೆ: “ನನಗೆ ಭೂಮಿ ಚಪ್ಪಟೆಯಾಗಿ ಕಾಣುತ್ತಿದೆ. ಅಷ್ಟೇ ಅಲ್ಲ ಬೈಬಲಿನಲ್ಲೂ ಹಾಗೆ ಹೇಳಿದೆ.” ಜೊತೆಗೆ ಈ ಬೈಬಲ್ ಗೆಳೆಯರು, ಹಾಗೂ ನಮ್ಮ ಹಿಂದಿ ವಲಯದವರು ಪಾಪ ಡಾರ್ವಿನ್ನನನ್ನು ಕೂಡ ಟೀಕಿಸುತ್ತಿದ್ದಾರೆ. ಡಾರ್ವಿನ್ ಹೇಳಿರೋದು ಅವರ ಧರ್ಮಗ್ರಂಥಗಳಿಗೆ ಅನುಗುಣವಾಗಿ ಇಲ್ಲವಂತೆ. ಹೀಗೆಲ್ಲಾ ವಾದಿಸೋದನ್ನು ಮೇಲ್‌ಸ್ತರದವರ ವಿಜ್ಞಾನ ಹಾಗೂ ಸಮಾಜವಿಜ್ಞಾನದ ಚಿಂತನೆಗಳನ್ನು ತಳಸಮುದಾಯದವರು ವಿರೋಧಿಸುವ ಕ್ರಮ ಅಂತ ಭಾವಿಸಿಬಿಡಬಹುದು. ಆದರೆ ಅದು ತಪ್ಪು. ಹಾಗೆ ಮಾಡೋತ್ತಾ ಹೋದರೆ ಕೊನೆಗೆ ತಳಸ್ತರದವರನ್ನು ಓಲೈಕೆ ಮಾಡಿದಂತೆ ಆಗುತ್ತದೆ.

ವಿಜ್ಞಾನ ಅಂತ ನೀವು ಹೇಳುತ್ತಿರೋದು ನನಗೆ ಕಾಣುತ್ತಿಲ್ಲ ಅಂತ ಒಬ್ಬ ಸಾಮಾನ್ಯ ಹೆಂಗಸು ಹೇಳೋದಿಲ್ಲ. ಅವಳಿಗೂ ನಮ್ಮ ನಾಯಕರಷ್ಟೇ ಅಥವಾ ಅವರಿಗಿಂತ ಹೆಚ್ಚು ಅಮೂರ್ತವಾದ ಕಲ್ಪನೆಗಳನ್ನು ಗ್ರಹಿಸಿಕೊಳ್ಳೋದಕ್ಕೆ ಸಾಧ್ಯ. ಯಾಕೆಂದರೆ ಅವಳು ಅಷ್ಟೊಂದು ಸಿನಿಕಲ್ ಆಗಿಲ್ಲ. ಅವಳು ದಿನ ಮೈಕ್ರೋವೇವ್ ಬಳಸುತ್ತಾಳೆ. ಬೆಂಕಿಯಿಲ್ಲದೆ ಶಾಖ ಹೇಗೆ ಬಂತು ಅಂತ ಅವಳು ಕೇಳೋಲ್ಲ. ಅವಳಿಗೆ ಅಷ್ಟು ಜಾಣತನ ಇದೆ. ವಿಜ್ಞಾನದ ಎಷ್ಟೋ ಕೆಲಸಗಳು ಹಿನ್ನೆಲೆಯಲ್ಲಿ ನಡೆಯುತ್ತಿರುತ್ತವೆ. ಅವು ಕಣ್ಣಿಗೆ ಕಾಣಿಸೋದಿಲ್ಲ ಅನ್ನೋದು ಅವಳಿಗೆ ಗೊತ್ತು. ವಿಕಾಸ ಅನ್ನೋದು ನನ್ನ ಕಣ್ಣ ಮುಂದೆ ನಡೆಯಬೇಕು ಅಂತ ಅವಳು ಕೇಳುವುದಿಲ್ಲ.

ಮುಸ್ಲಿಮರನ್ನು ದ್ವೇಷಿಸುವುದಕ್ಕೆ ಆಗಲಿ, ದಲಿತರನ್ನು ಕೀಳಾಗಿ ಕಾಣುವುದಕ್ಕೇ ಆಗಲಿ ನಮ್ಮ ನೇರ ಅನುಭವ ಕಾರಣ ಅಲ್ಲ. ನಮ್ಮಲ್ಲಿ ಬಹುಪಾಲು ಮಂದಿಗೆ ಅಂತಹ ಯಾವುದೇ ಅನುಭವ ಆಗಿಲ್ಲ. ನಮ್ಮ ಅಕ್ಕಪಕ್ಕದ ಮುಸ್ಲಿಮರು ಉಳಿದ ಎಲ್ಲರಂತೆಯೇ ಇರುತ್ತಾರೆ. ಅದು ನಮ್ಮ ದಿನನಿತ್ಯದ ಅನುಭವ. ಆದರೆ ನಿಜವಾದ ಸಮಸ್ಯೆಯೆಂದರೆ ಈಗ ನಮ್ಮ ಅಕ್ಕಪಕ್ಕದಲ್ಲಿ ಮುಸ್ಲಿಮರು ವಾಸಿಸುತ್ತಿಲ್ಲ. ಅವರಲ್ಲಿ ಹೆದರಿಕೆ ಹುಟ್ಟಿಸಿ, ತಮ್ಮಷ್ಟಕ್ಕೆ ತಾವೇ ಅವರು ಅದೃಶ್ಯರಾಗುವಂತೆ ಮಾಡಿದ್ದೇವೆ. ನಾವು ಅವರನ್ನು ಇಂದು ನೋಡುತ್ತಿರುವುದು ವೃತ್ತಪತ್ರಿಕೆಯ ಪುಟಗಳಲ್ಲಿ ಅಥವಾ ಮಾಂಸದ ಅಂಗಡಿಗಳಲ್ಲಿ. ಅದು ನಮ್ಮ ಪೂರ್ವಗ್ರಹವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ.

ಇನ್ನು ನಮ್ಮ ಮಗಳನ್ನು ಮದುವೆಯಾಗಲಿರುವ ಕೆಳಜಾತಿಯ ಅಳಿಯನ ವಿಷಯಕ್ಕೆ ಬಂದರೆ, ಅವನ ಮೋಹಕ ಗುಣ, ಜಗತ್ತಿನಲ್ಲಿ ಅವನು ಸಾಧಿಸಿರುವ ಯಶಸ್ಸನ್ನು ತಿರಸ್ಕರಿಸುವುದಕ್ಕೆ ನಮಗೆ ಆಗೋದಿಲ್ಲ. ಅದಕ್ಕೇ ಅವನು ‘ಅಪಾಯಕಾರಿ’ಯಾಗಿ ಕಾಣುತ್ತಾನೆ. ಹಾಗಾಗಿಯೇ ಖಾಪ್ ಪಂಚಾಯತಿಗಳು ಅವರನ್ನು ಹೆದರಿಸಿ, ಬೆದರಿಸುವ ಕೆಲಸಕ್ಕೆ ಕೈಹಾಕಿವೆ.

ಈ ಸಂಕುಚಿತ ಮನಸ್ಸಿನ, ಪೂರ್ವಗ್ರಹದ ಕಥೆಗಳಲ್ಲಿ ಆರ್ಗಾನಿಕ್ ಆದದ್ದು ಅಥವಾ ಸತ್ಯ ಅನ್ನುವಂತಹದ್ದು ಏನೂ ಇಲ್ಲ. ಇಲ್ಲೊಂದಿಷ್ಟು ಕೊಂಕು, ಅಲ್ಲೊಂದಿಷ್ಟು ಅರ್ಧ ಸತ್ಯ ಸೇರಿಕೊಂಡು ಜಾಗರೂಕತೆಯಿಂದ ಈ ಕಥೆಯನ್ನು ಹೆಣೆಯಲಾಗಿದೆ. ಇಂದು ಪದ್ಮಾವತಿ, ನಾಳೆ ಅಯೋಧ್ಯಾ ಇಂತಹ ಘಟನೆಗಳು. ನಿರಂತರವಾಗಿ ಯುದ್ಧವೊಂದು ನಡೆಯುತ್ತಿದೆ, ತಮಗೆ ಅದರಲ್ಲಿ ಸೋಲಾಗಬಹುದು ಅನ್ನುವ ಭಾವನೆಯನ್ನು ಜನರಲ್ಲಿ ಮೂಡಿಸುತ್ತಿವೆ. ಇಂತಹ ಘಟನೆಗಳನ್ನು ನಿರಂತರವಾಗಿ ಸೃಷ್ಟಿಸುತ್ತಾ, ಉರಿ ಆರದ ಹಾಗೆ ನೋಡಿಕೊಳ್ಳುತ್ತಿವೆ.

ಬೇರೆ ಏನೂ ವಿಷಯ ಸಿಗದೇ ಹೋದಾಗ, ವಿಕಾಸದ ವಿಷಯವನ್ನು ಯಾಕೆ ಪ್ರಯತ್ನಿಸಬಾರದು? ಈ ಕಚ್ಚಾಟದಲ್ಲಿ ಯಾರಾದರೂ ಒಂದಿಷ್ಟು ಜನ ತೊಡಗಿಕೊಳ್ಳಬಹುದು ಅನ್ನೋ ಯೋಚನೆ ಇವರಿಗೆ ಬರುತ್ತೆ. ನಾವೆಲ್ಲಾ ಕೋತಿಗಳಾಗುತ್ತಿರುವುದು ಹೀಗೆ. ನಿಜವಾಗಿ ಆತಂಕದ ವಿಷಯ ಅಂದರೆ ಈ ಕುರಿತು ಏನೂ ಮಾಡುತ್ತಿಲ್ಲ. ನನ್ನದೇ ವಿಷಯಕ್ಕೆ ಬಂದರೆ ಕೈ ಹಿಸುಕಿಕೊಂಡು ಒಳ್ಳೆಯ ಶಿಕ್ಷಣ ಬೇಕು ಅಂತ ಮಾತನಾಡುತ್ತೇನೆ. ನಿಜ ಹೇಳಬೇಕೆಂದರೆ ಆಶೋಕ ವಿಶ್ವವಿದ್ಯಾನಿಲಯದಲ್ಲಿ ಮತ್ತು ಅಹಮದಾಬಾದ್ ವಿಶ್ವವಿದ್ಯಾನಿಲಯಗಳಲ್ಲ್ಲಿ ಒಳ್ಳೆ ಕೆಲಸಗಳು ಆಗುತ್ತಿವೆ. ಒಂದು ಉದಾರವಾದಿ ಶಿಕ್ಷಣ ಕೊಡೋ ಅದ್ಭುತವಾದ ಕೆಲಸ ಅಲ್ಲಿ ನಡೆಯುತ್ತಿದೆ. ಹಾಗೆಯೇ ಚೆನ್ನೈನಲ್ಲಿನ ಇನ್ಸ್ಟಿಟ್ಯೂಟ್ ಫಾರ್ ಫೈನಾನ್ಸಿಯಲ್ ಮ್ಯಾನೇಜ್‌ಮೆಂಟ್ ಅಂಡ್ ರೀಸರ್ಚ್ ಅಂತಹ ಸಂಸ್ಥೆಗಳಲ್ಲೂ ಒಳ್ಳೆ ಕೆಲಸ ಆಗುತ್ತಿದೆ. ಆದರೆ ತುಂಬಾ ಕಡಿಮೆ. ತುಂಬಾ ಸಮಯ ಉಳಿದಿಲ್ಲ.

ನಮ್ಮ ದೇಶವನ್ನು ಉಳಿಸಲು, ಅಥವಾ ನಮ್ಮಲ್ಲಿ ಅನೇಕರು ಇದೆ ಅಂದುಕೊಂಡಿದ್ದ ದೇಶವನ್ನು ಉಳಿಸಲು ಒಂದು ಚಳುವಳಿಯನ್ನು ಮಾಡಬೇಕಾಗಿದೆ. ನಮ್ಮ ದೇಶದಲ್ಲಿನ ಮುಕ್ತತೆಯ, ಕುತೂಹಲದ, ಸಂವಾದದ, ಅಮೂರ್ತತೆಯ, ಆತಿಥ್ಯದ ಮತ್ತು ಕಾರುಣ್ಯದ ಸಂಪ್ರದಾಯಗಳನ್ನು ಗೌರವಿಸಿ, ಮೆಚ್ಚುವ ಚಳುವಳಿಯೊಂದನ್ನು ಹುಟ್ಟುಹಾಕಬೇಕಾಗಿದೆ. ಈ ಚಳುವಳಿಯಲ್ಲಿ ಧಾರ್ಮಿಕರು ಮತ್ತು ನಿರೀಶ್ವರವಾದಿಗಳು; ಅಂತೆಯೇ ತೀವ್ರವಾದ ಭಾವುಕತೆ ಹಾಗೂ ವೈಚಾರಿಕತೆ ಮತ್ತು ವಿಶಿಷ್ಟವಾಗಿ ಭಾರತೀಯವೇ ಅಗಿರುವ ಇವೆಲ್ಲವುಗಳು ಒಟ್ಟಾಗಿ ಸೇರಿಕೊಂಡ ಚಳುವಳಿಯೊಂದು ಆಗಬೇಕಾಗಿದೆ. ಹೊಸ ರಾಷ್ಟ್ರೀಯ ಚಳುವಳಿಯೊಂದು ಬೇಕಾಗಿದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...