Homeಕರ್ನಾಟಕನಾವೆಲ್ಲಾ ಕೋತಿಗಳಾಗುತ್ತಿರುವುದು ಹೇಗೆ? ವಿಕಾಸ ಮತ್ತು ಹಿಂಚಲನೆ... - ಅಭಿಜಿತ್ ಬ್ಯಾನರ್ಜಿ

ನಾವೆಲ್ಲಾ ಕೋತಿಗಳಾಗುತ್ತಿರುವುದು ಹೇಗೆ? ವಿಕಾಸ ಮತ್ತು ಹಿಂಚಲನೆ… – ಅಭಿಜಿತ್ ಬ್ಯಾನರ್ಜಿ

ನಮ್ಮ ದೇಶದಲ್ಲಿನ ಮುಕ್ತತೆಯ, ಕುತೂಹಲದ, ಸಂವಾದದ, ಅಮೂರ್ತತೆಯ, ಆತಿಥ್ಯದ ಮತ್ತು ಕಾರುಣ್ಯದ ಸಂಪ್ರದಾಯಗಳನ್ನು ಗೌರವಿಸಿ, ಮೆಚ್ಚುವ ಚಳುವಳಿಯೊಂದನ್ನು ಹುಟ್ಟುಹಾಕಬೇಕಾಗಿದೆ.

- Advertisement -
- Advertisement -

ವಿಕಾಸ ಮತ್ತು ಹಿಂಚಲನೆ : ಅಭಿಜಿತ್ ಬ್ಯಾನರ್ಜಿ
ಅನುವಾದ: ಟಿ ಎಸ್ ವೇಣುಗೋಪಾಲ್

ಕೋತಿ ಮನುಷ್ಯನಾಗೋದನ್ನು ನಾವ್ಯಾರೂ ನೋಡಿಲ್ಲ. ಆದರೆ ಮನುಷ್ಯರು ಮಂಗಗಳಾಗುವುದನ್ನು ಆಗೀಗ ನೋಡುತ್ತಿರುತ್ತೇವೆ. ತಾನು ಕಂಡೇ ಇಲ್ಲದ್ದನ್ನು, ಯಾರೂ ಯಾವತ್ತೂ ಕಾಣದ್ದನ್ನು ಕಲ್ಪಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯ ಮನುಷ್ಯನಿಗೆ ಮಾತ್ರ ಸಾಧ್ಯ. ಚಿಂಪಾಂಜಿಗಳಿಗೆ ಕೆಲವು ಗುರುತುಗಳನ್ನು ಗ್ರಹಿಸಿಕೊಳ್ಳಲಿಕ್ಕೆ ಸಾಧ್ಯವಾಗಬಹುದು, ಕೆಲವು ಪದಗಳನ್ನೂ ಕಲಿಯಬಹುದು. ಆದರೆ ಯಾವುದೇ ಚಿಂಪಾಂಜಿಗೂ ಗಣೇಶನನ್ನೋ ಅಥವಾ ಒಂದು ಏಕಶೃಂಗಿಯನ್ನೋ ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ.

ಇತ್ತೀಚಿನ ದಿನಗಳಲ್ಲಿ ಮನುಷ್ಯನ ಈ ಪ್ರಮುಖ ಗುಣವನ್ನು ಅಲ್ಲಗೆಳೆಯುವುದೇ ಜಗತ್ತಿನೆಲ್ಲೆಡೆ ಬಲಪಂಥೀಯ ಜನಪ್ರಿಯ ರಾಜಕೀಯದ ಪ್ರಮುಖ ಕಸುಬಾಗಿಬಿಟ್ಟಿದೆೆ. “ದಲಿತರು ಅಂದರೆ ಮಲ ತೆಗೆಯುವವರು. ಅವರ ವ್ಯವಹಾರ ಎಲ್ಲಾ ಏನಿದ್ದರೂ ಸತ್ತ ಪ್ರಾಣಿಗಳು, ಮನುಷ್ಯರ ಕಕ್ಕಸ್ಸಿನ ಜೊತೆಗೆ. ಅವರ ಕೈಯಲ್ಲಿ ನಾವು ನೀರೇ ಕುಡಿಯುವುದಿಲ್ಲ. ಇನ್ನು ಅವರಿಗೆ ಮಗಳನ್ನು ಕೊಡುವುದೇ?” “ಮುಸಲ್ಮಾನರು ಕಟುಕರು, ಮುಗ್ದ ಜನರನ್ನು ಬಾಂಬು ಹಾಕಿ ಕೊಲ್ಲೋ ಜನ. ಹಿಂಸೆ ಅವರ ಭಾಗವಾಗಿಬಿಟ್ಟಿದೆ,” “ಕರಿಯರು ಅಂದ್ರೆ ಡ್ರಗ್ಸ್ ಮಾರೋರು, ಅಪರಾಧಿಗಳು ಅಂತ ಯಾರಿಗೆ ತಾನೆ ಗೊತ್ತಿಲ್ಲ? ಜೈಲು ತುಂಬಾ ಅವರೇ ಇದ್ದಾರೆ. ಅವರು ನಮಗೆ ಸಮಾನರಾಗೋದಕ್ಕೆ ಹೇಗೆ ಸಾಧ್ಯ?” ಹೀಗೆಲ್ಲಾ ಮಾತನಾಡುತ್ತಾರೆ.

ದಲಿತರೇನು ಮಲ ತೆಗೆಯಬೇಕು ಅಂತ ಬಯಸಿಕೊಂಡು ತೆಗೆಯುತ್ತಿಲ್ಲ. ಹಾಗೆಯೇ ನೀಗ್ರೋಗಳು ತಮ್ಮದು ಗುಲಾಮಗಿರಿಯ ಹಾಗೂ ಅನ್ಯಾಯದ ಚರಿತ್ರೆ ಆಗಿರಲಿ ಅಂತ ಬಯಸಿರಲಿಲ್ಲ. ಹಿಂಸೆ ರಾಜಕೀಯ ಪ್ರತಿರೋಧದ ಒಂದು ರೂಪ. (ಸಾಮಾನ್ಯವಾಗಿ ಇಂತಹ ಹಿಂಸೆಯಲ್ಲಿ ಮುಗ್ದರೇ ಸಾಯುತ್ತಿದ್ದರು.) ಆ ಹಿಂಸೆಯ ಪರಂಪರೆಯನ್ನು ಇಂದು ಮುಸ್ಲಿಂ ಭಯೋತ್ಪಾದಕತೆ ಮುಂದುವರಿಸಿಕೊಂಡು ಹೋಗುತ್ತಿದೆ. ಹಲವು ಬಂಗಾಲಿಗಳು ಮತ್ತು ಮಹಾರಾಷ್ಟ್ರದ (ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ್ ಸಾರ್ವಕರ್‌ ಸೇರಿದಂತೆ) ಹಿಂದುಗಳು ಇದನ್ನು ಬ್ರಿಟಿಷರ ವಿರುದ್ಧ ಬಳಸಿದ್ದರು. ಯಹೂದಿ ನಾಗರಿಕ ಹೋರಾಟಗಾರರು ಬ್ರಿಟಿಷರ ವಿರುದ್ಧ ಬಳಸಿದ್ದರು. ಆಗ ಅದು ಪ್ಯಾಲೆಸ್ತೈನ್ ಆಗಿತ್ತು. ಐರಿಷ್ ಕ್ಯಾಥೊಲಿಕರು ಇತ್ತೀಚಿನ ಕೆಲವು ವರ್ಷಗಳವರೆಗೆ ತಮ್ಮ ಇಂಗ್ಲಿಷ್ ಧಣಿಗಳ ವಿರುದ್ಧ ಬಳಸಿದ್ದರು. ಈಗ ಆ ಚರಿತ್ರೆ ಹೆಚ್ಚು ಕಡಿಮೆ ಮರೆತೇಹೋಗಿದೆ. 2001ರ ನಂತರ ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದಾಗಿಬಿಟ್ಟಿದೆ.

ಹೀಗೆ ವಾಚ್ಯಾರ್ಥವನ್ನು ನಿರೂಪಿಸುವ ಈ ಪ್ರವೃತ್ತಿಯೇ ಭೂಮಿ ಚಪ್ಪಟೆಯಾಗಿದೆ ಎಂಬ ಚಳುವಳಿಗೂ ಸ್ಪೂರ್ತಿ ನೀಡಿದೆ. ಅಮೇರಿಕೆಯಲ್ಲಿ ಟ್ರಂಪ್ ಬೆಂಬಲಿಗರಲ್ಲಿ ಇದು ತುಂಬಾ ಜನಪ್ರಿಯವಾಗಿದೆ: “ನನಗೆ ಭೂಮಿ ಚಪ್ಪಟೆಯಾಗಿ ಕಾಣುತ್ತಿದೆ. ಅಷ್ಟೇ ಅಲ್ಲ ಬೈಬಲಿನಲ್ಲೂ ಹಾಗೆ ಹೇಳಿದೆ.” ಜೊತೆಗೆ ಈ ಬೈಬಲ್ ಗೆಳೆಯರು, ಹಾಗೂ ನಮ್ಮ ಹಿಂದಿ ವಲಯದವರು ಪಾಪ ಡಾರ್ವಿನ್ನನನ್ನು ಕೂಡ ಟೀಕಿಸುತ್ತಿದ್ದಾರೆ. ಡಾರ್ವಿನ್ ಹೇಳಿರೋದು ಅವರ ಧರ್ಮಗ್ರಂಥಗಳಿಗೆ ಅನುಗುಣವಾಗಿ ಇಲ್ಲವಂತೆ. ಹೀಗೆಲ್ಲಾ ವಾದಿಸೋದನ್ನು ಮೇಲ್‌ಸ್ತರದವರ ವಿಜ್ಞಾನ ಹಾಗೂ ಸಮಾಜವಿಜ್ಞಾನದ ಚಿಂತನೆಗಳನ್ನು ತಳಸಮುದಾಯದವರು ವಿರೋಧಿಸುವ ಕ್ರಮ ಅಂತ ಭಾವಿಸಿಬಿಡಬಹುದು. ಆದರೆ ಅದು ತಪ್ಪು. ಹಾಗೆ ಮಾಡೋತ್ತಾ ಹೋದರೆ ಕೊನೆಗೆ ತಳಸ್ತರದವರನ್ನು ಓಲೈಕೆ ಮಾಡಿದಂತೆ ಆಗುತ್ತದೆ.

ವಿಜ್ಞಾನ ಅಂತ ನೀವು ಹೇಳುತ್ತಿರೋದು ನನಗೆ ಕಾಣುತ್ತಿಲ್ಲ ಅಂತ ಒಬ್ಬ ಸಾಮಾನ್ಯ ಹೆಂಗಸು ಹೇಳೋದಿಲ್ಲ. ಅವಳಿಗೂ ನಮ್ಮ ನಾಯಕರಷ್ಟೇ ಅಥವಾ ಅವರಿಗಿಂತ ಹೆಚ್ಚು ಅಮೂರ್ತವಾದ ಕಲ್ಪನೆಗಳನ್ನು ಗ್ರಹಿಸಿಕೊಳ್ಳೋದಕ್ಕೆ ಸಾಧ್ಯ. ಯಾಕೆಂದರೆ ಅವಳು ಅಷ್ಟೊಂದು ಸಿನಿಕಲ್ ಆಗಿಲ್ಲ. ಅವಳು ದಿನ ಮೈಕ್ರೋವೇವ್ ಬಳಸುತ್ತಾಳೆ. ಬೆಂಕಿಯಿಲ್ಲದೆ ಶಾಖ ಹೇಗೆ ಬಂತು ಅಂತ ಅವಳು ಕೇಳೋಲ್ಲ. ಅವಳಿಗೆ ಅಷ್ಟು ಜಾಣತನ ಇದೆ. ವಿಜ್ಞಾನದ ಎಷ್ಟೋ ಕೆಲಸಗಳು ಹಿನ್ನೆಲೆಯಲ್ಲಿ ನಡೆಯುತ್ತಿರುತ್ತವೆ. ಅವು ಕಣ್ಣಿಗೆ ಕಾಣಿಸೋದಿಲ್ಲ ಅನ್ನೋದು ಅವಳಿಗೆ ಗೊತ್ತು. ವಿಕಾಸ ಅನ್ನೋದು ನನ್ನ ಕಣ್ಣ ಮುಂದೆ ನಡೆಯಬೇಕು ಅಂತ ಅವಳು ಕೇಳುವುದಿಲ್ಲ.

ಮುಸ್ಲಿಮರನ್ನು ದ್ವೇಷಿಸುವುದಕ್ಕೆ ಆಗಲಿ, ದಲಿತರನ್ನು ಕೀಳಾಗಿ ಕಾಣುವುದಕ್ಕೇ ಆಗಲಿ ನಮ್ಮ ನೇರ ಅನುಭವ ಕಾರಣ ಅಲ್ಲ. ನಮ್ಮಲ್ಲಿ ಬಹುಪಾಲು ಮಂದಿಗೆ ಅಂತಹ ಯಾವುದೇ ಅನುಭವ ಆಗಿಲ್ಲ. ನಮ್ಮ ಅಕ್ಕಪಕ್ಕದ ಮುಸ್ಲಿಮರು ಉಳಿದ ಎಲ್ಲರಂತೆಯೇ ಇರುತ್ತಾರೆ. ಅದು ನಮ್ಮ ದಿನನಿತ್ಯದ ಅನುಭವ. ಆದರೆ ನಿಜವಾದ ಸಮಸ್ಯೆಯೆಂದರೆ ಈಗ ನಮ್ಮ ಅಕ್ಕಪಕ್ಕದಲ್ಲಿ ಮುಸ್ಲಿಮರು ವಾಸಿಸುತ್ತಿಲ್ಲ. ಅವರಲ್ಲಿ ಹೆದರಿಕೆ ಹುಟ್ಟಿಸಿ, ತಮ್ಮಷ್ಟಕ್ಕೆ ತಾವೇ ಅವರು ಅದೃಶ್ಯರಾಗುವಂತೆ ಮಾಡಿದ್ದೇವೆ. ನಾವು ಅವರನ್ನು ಇಂದು ನೋಡುತ್ತಿರುವುದು ವೃತ್ತಪತ್ರಿಕೆಯ ಪುಟಗಳಲ್ಲಿ ಅಥವಾ ಮಾಂಸದ ಅಂಗಡಿಗಳಲ್ಲಿ. ಅದು ನಮ್ಮ ಪೂರ್ವಗ್ರಹವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ.

ಇನ್ನು ನಮ್ಮ ಮಗಳನ್ನು ಮದುವೆಯಾಗಲಿರುವ ಕೆಳಜಾತಿಯ ಅಳಿಯನ ವಿಷಯಕ್ಕೆ ಬಂದರೆ, ಅವನ ಮೋಹಕ ಗುಣ, ಜಗತ್ತಿನಲ್ಲಿ ಅವನು ಸಾಧಿಸಿರುವ ಯಶಸ್ಸನ್ನು ತಿರಸ್ಕರಿಸುವುದಕ್ಕೆ ನಮಗೆ ಆಗೋದಿಲ್ಲ. ಅದಕ್ಕೇ ಅವನು ‘ಅಪಾಯಕಾರಿ’ಯಾಗಿ ಕಾಣುತ್ತಾನೆ. ಹಾಗಾಗಿಯೇ ಖಾಪ್ ಪಂಚಾಯತಿಗಳು ಅವರನ್ನು ಹೆದರಿಸಿ, ಬೆದರಿಸುವ ಕೆಲಸಕ್ಕೆ ಕೈಹಾಕಿವೆ.

ಈ ಸಂಕುಚಿತ ಮನಸ್ಸಿನ, ಪೂರ್ವಗ್ರಹದ ಕಥೆಗಳಲ್ಲಿ ಆರ್ಗಾನಿಕ್ ಆದದ್ದು ಅಥವಾ ಸತ್ಯ ಅನ್ನುವಂತಹದ್ದು ಏನೂ ಇಲ್ಲ. ಇಲ್ಲೊಂದಿಷ್ಟು ಕೊಂಕು, ಅಲ್ಲೊಂದಿಷ್ಟು ಅರ್ಧ ಸತ್ಯ ಸೇರಿಕೊಂಡು ಜಾಗರೂಕತೆಯಿಂದ ಈ ಕಥೆಯನ್ನು ಹೆಣೆಯಲಾಗಿದೆ. ಇಂದು ಪದ್ಮಾವತಿ, ನಾಳೆ ಅಯೋಧ್ಯಾ ಇಂತಹ ಘಟನೆಗಳು. ನಿರಂತರವಾಗಿ ಯುದ್ಧವೊಂದು ನಡೆಯುತ್ತಿದೆ, ತಮಗೆ ಅದರಲ್ಲಿ ಸೋಲಾಗಬಹುದು ಅನ್ನುವ ಭಾವನೆಯನ್ನು ಜನರಲ್ಲಿ ಮೂಡಿಸುತ್ತಿವೆ. ಇಂತಹ ಘಟನೆಗಳನ್ನು ನಿರಂತರವಾಗಿ ಸೃಷ್ಟಿಸುತ್ತಾ, ಉರಿ ಆರದ ಹಾಗೆ ನೋಡಿಕೊಳ್ಳುತ್ತಿವೆ.

ಬೇರೆ ಏನೂ ವಿಷಯ ಸಿಗದೇ ಹೋದಾಗ, ವಿಕಾಸದ ವಿಷಯವನ್ನು ಯಾಕೆ ಪ್ರಯತ್ನಿಸಬಾರದು? ಈ ಕಚ್ಚಾಟದಲ್ಲಿ ಯಾರಾದರೂ ಒಂದಿಷ್ಟು ಜನ ತೊಡಗಿಕೊಳ್ಳಬಹುದು ಅನ್ನೋ ಯೋಚನೆ ಇವರಿಗೆ ಬರುತ್ತೆ. ನಾವೆಲ್ಲಾ ಕೋತಿಗಳಾಗುತ್ತಿರುವುದು ಹೀಗೆ. ನಿಜವಾಗಿ ಆತಂಕದ ವಿಷಯ ಅಂದರೆ ಈ ಕುರಿತು ಏನೂ ಮಾಡುತ್ತಿಲ್ಲ. ನನ್ನದೇ ವಿಷಯಕ್ಕೆ ಬಂದರೆ ಕೈ ಹಿಸುಕಿಕೊಂಡು ಒಳ್ಳೆಯ ಶಿಕ್ಷಣ ಬೇಕು ಅಂತ ಮಾತನಾಡುತ್ತೇನೆ. ನಿಜ ಹೇಳಬೇಕೆಂದರೆ ಆಶೋಕ ವಿಶ್ವವಿದ್ಯಾನಿಲಯದಲ್ಲಿ ಮತ್ತು ಅಹಮದಾಬಾದ್ ವಿಶ್ವವಿದ್ಯಾನಿಲಯಗಳಲ್ಲ್ಲಿ ಒಳ್ಳೆ ಕೆಲಸಗಳು ಆಗುತ್ತಿವೆ. ಒಂದು ಉದಾರವಾದಿ ಶಿಕ್ಷಣ ಕೊಡೋ ಅದ್ಭುತವಾದ ಕೆಲಸ ಅಲ್ಲಿ ನಡೆಯುತ್ತಿದೆ. ಹಾಗೆಯೇ ಚೆನ್ನೈನಲ್ಲಿನ ಇನ್ಸ್ಟಿಟ್ಯೂಟ್ ಫಾರ್ ಫೈನಾನ್ಸಿಯಲ್ ಮ್ಯಾನೇಜ್‌ಮೆಂಟ್ ಅಂಡ್ ರೀಸರ್ಚ್ ಅಂತಹ ಸಂಸ್ಥೆಗಳಲ್ಲೂ ಒಳ್ಳೆ ಕೆಲಸ ಆಗುತ್ತಿದೆ. ಆದರೆ ತುಂಬಾ ಕಡಿಮೆ. ತುಂಬಾ ಸಮಯ ಉಳಿದಿಲ್ಲ.

ನಮ್ಮ ದೇಶವನ್ನು ಉಳಿಸಲು, ಅಥವಾ ನಮ್ಮಲ್ಲಿ ಅನೇಕರು ಇದೆ ಅಂದುಕೊಂಡಿದ್ದ ದೇಶವನ್ನು ಉಳಿಸಲು ಒಂದು ಚಳುವಳಿಯನ್ನು ಮಾಡಬೇಕಾಗಿದೆ. ನಮ್ಮ ದೇಶದಲ್ಲಿನ ಮುಕ್ತತೆಯ, ಕುತೂಹಲದ, ಸಂವಾದದ, ಅಮೂರ್ತತೆಯ, ಆತಿಥ್ಯದ ಮತ್ತು ಕಾರುಣ್ಯದ ಸಂಪ್ರದಾಯಗಳನ್ನು ಗೌರವಿಸಿ, ಮೆಚ್ಚುವ ಚಳುವಳಿಯೊಂದನ್ನು ಹುಟ್ಟುಹಾಕಬೇಕಾಗಿದೆ. ಈ ಚಳುವಳಿಯಲ್ಲಿ ಧಾರ್ಮಿಕರು ಮತ್ತು ನಿರೀಶ್ವರವಾದಿಗಳು; ಅಂತೆಯೇ ತೀವ್ರವಾದ ಭಾವುಕತೆ ಹಾಗೂ ವೈಚಾರಿಕತೆ ಮತ್ತು ವಿಶಿಷ್ಟವಾಗಿ ಭಾರತೀಯವೇ ಅಗಿರುವ ಇವೆಲ್ಲವುಗಳು ಒಟ್ಟಾಗಿ ಸೇರಿಕೊಂಡ ಚಳುವಳಿಯೊಂದು ಆಗಬೇಕಾಗಿದೆ. ಹೊಸ ರಾಷ್ಟ್ರೀಯ ಚಳುವಳಿಯೊಂದು ಬೇಕಾಗಿದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...