Homeಕರ್ನಾಟಕನಾವೆಲ್ಲಾ ಕೋತಿಗಳಾಗುತ್ತಿರುವುದು ಹೇಗೆ? ವಿಕಾಸ ಮತ್ತು ಹಿಂಚಲನೆ... - ಅಭಿಜಿತ್ ಬ್ಯಾನರ್ಜಿ

ನಾವೆಲ್ಲಾ ಕೋತಿಗಳಾಗುತ್ತಿರುವುದು ಹೇಗೆ? ವಿಕಾಸ ಮತ್ತು ಹಿಂಚಲನೆ… – ಅಭಿಜಿತ್ ಬ್ಯಾನರ್ಜಿ

ನಮ್ಮ ದೇಶದಲ್ಲಿನ ಮುಕ್ತತೆಯ, ಕುತೂಹಲದ, ಸಂವಾದದ, ಅಮೂರ್ತತೆಯ, ಆತಿಥ್ಯದ ಮತ್ತು ಕಾರುಣ್ಯದ ಸಂಪ್ರದಾಯಗಳನ್ನು ಗೌರವಿಸಿ, ಮೆಚ್ಚುವ ಚಳುವಳಿಯೊಂದನ್ನು ಹುಟ್ಟುಹಾಕಬೇಕಾಗಿದೆ.

- Advertisement -
- Advertisement -

ವಿಕಾಸ ಮತ್ತು ಹಿಂಚಲನೆ : ಅಭಿಜಿತ್ ಬ್ಯಾನರ್ಜಿ
ಅನುವಾದ: ಟಿ ಎಸ್ ವೇಣುಗೋಪಾಲ್

ಕೋತಿ ಮನುಷ್ಯನಾಗೋದನ್ನು ನಾವ್ಯಾರೂ ನೋಡಿಲ್ಲ. ಆದರೆ ಮನುಷ್ಯರು ಮಂಗಗಳಾಗುವುದನ್ನು ಆಗೀಗ ನೋಡುತ್ತಿರುತ್ತೇವೆ. ತಾನು ಕಂಡೇ ಇಲ್ಲದ್ದನ್ನು, ಯಾರೂ ಯಾವತ್ತೂ ಕಾಣದ್ದನ್ನು ಕಲ್ಪಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯ ಮನುಷ್ಯನಿಗೆ ಮಾತ್ರ ಸಾಧ್ಯ. ಚಿಂಪಾಂಜಿಗಳಿಗೆ ಕೆಲವು ಗುರುತುಗಳನ್ನು ಗ್ರಹಿಸಿಕೊಳ್ಳಲಿಕ್ಕೆ ಸಾಧ್ಯವಾಗಬಹುದು, ಕೆಲವು ಪದಗಳನ್ನೂ ಕಲಿಯಬಹುದು. ಆದರೆ ಯಾವುದೇ ಚಿಂಪಾಂಜಿಗೂ ಗಣೇಶನನ್ನೋ ಅಥವಾ ಒಂದು ಏಕಶೃಂಗಿಯನ್ನೋ ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ.

ಇತ್ತೀಚಿನ ದಿನಗಳಲ್ಲಿ ಮನುಷ್ಯನ ಈ ಪ್ರಮುಖ ಗುಣವನ್ನು ಅಲ್ಲಗೆಳೆಯುವುದೇ ಜಗತ್ತಿನೆಲ್ಲೆಡೆ ಬಲಪಂಥೀಯ ಜನಪ್ರಿಯ ರಾಜಕೀಯದ ಪ್ರಮುಖ ಕಸುಬಾಗಿಬಿಟ್ಟಿದೆೆ. “ದಲಿತರು ಅಂದರೆ ಮಲ ತೆಗೆಯುವವರು. ಅವರ ವ್ಯವಹಾರ ಎಲ್ಲಾ ಏನಿದ್ದರೂ ಸತ್ತ ಪ್ರಾಣಿಗಳು, ಮನುಷ್ಯರ ಕಕ್ಕಸ್ಸಿನ ಜೊತೆಗೆ. ಅವರ ಕೈಯಲ್ಲಿ ನಾವು ನೀರೇ ಕುಡಿಯುವುದಿಲ್ಲ. ಇನ್ನು ಅವರಿಗೆ ಮಗಳನ್ನು ಕೊಡುವುದೇ?” “ಮುಸಲ್ಮಾನರು ಕಟುಕರು, ಮುಗ್ದ ಜನರನ್ನು ಬಾಂಬು ಹಾಕಿ ಕೊಲ್ಲೋ ಜನ. ಹಿಂಸೆ ಅವರ ಭಾಗವಾಗಿಬಿಟ್ಟಿದೆ,” “ಕರಿಯರು ಅಂದ್ರೆ ಡ್ರಗ್ಸ್ ಮಾರೋರು, ಅಪರಾಧಿಗಳು ಅಂತ ಯಾರಿಗೆ ತಾನೆ ಗೊತ್ತಿಲ್ಲ? ಜೈಲು ತುಂಬಾ ಅವರೇ ಇದ್ದಾರೆ. ಅವರು ನಮಗೆ ಸಮಾನರಾಗೋದಕ್ಕೆ ಹೇಗೆ ಸಾಧ್ಯ?” ಹೀಗೆಲ್ಲಾ ಮಾತನಾಡುತ್ತಾರೆ.

ದಲಿತರೇನು ಮಲ ತೆಗೆಯಬೇಕು ಅಂತ ಬಯಸಿಕೊಂಡು ತೆಗೆಯುತ್ತಿಲ್ಲ. ಹಾಗೆಯೇ ನೀಗ್ರೋಗಳು ತಮ್ಮದು ಗುಲಾಮಗಿರಿಯ ಹಾಗೂ ಅನ್ಯಾಯದ ಚರಿತ್ರೆ ಆಗಿರಲಿ ಅಂತ ಬಯಸಿರಲಿಲ್ಲ. ಹಿಂಸೆ ರಾಜಕೀಯ ಪ್ರತಿರೋಧದ ಒಂದು ರೂಪ. (ಸಾಮಾನ್ಯವಾಗಿ ಇಂತಹ ಹಿಂಸೆಯಲ್ಲಿ ಮುಗ್ದರೇ ಸಾಯುತ್ತಿದ್ದರು.) ಆ ಹಿಂಸೆಯ ಪರಂಪರೆಯನ್ನು ಇಂದು ಮುಸ್ಲಿಂ ಭಯೋತ್ಪಾದಕತೆ ಮುಂದುವರಿಸಿಕೊಂಡು ಹೋಗುತ್ತಿದೆ. ಹಲವು ಬಂಗಾಲಿಗಳು ಮತ್ತು ಮಹಾರಾಷ್ಟ್ರದ (ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ್ ಸಾರ್ವಕರ್‌ ಸೇರಿದಂತೆ) ಹಿಂದುಗಳು ಇದನ್ನು ಬ್ರಿಟಿಷರ ವಿರುದ್ಧ ಬಳಸಿದ್ದರು. ಯಹೂದಿ ನಾಗರಿಕ ಹೋರಾಟಗಾರರು ಬ್ರಿಟಿಷರ ವಿರುದ್ಧ ಬಳಸಿದ್ದರು. ಆಗ ಅದು ಪ್ಯಾಲೆಸ್ತೈನ್ ಆಗಿತ್ತು. ಐರಿಷ್ ಕ್ಯಾಥೊಲಿಕರು ಇತ್ತೀಚಿನ ಕೆಲವು ವರ್ಷಗಳವರೆಗೆ ತಮ್ಮ ಇಂಗ್ಲಿಷ್ ಧಣಿಗಳ ವಿರುದ್ಧ ಬಳಸಿದ್ದರು. ಈಗ ಆ ಚರಿತ್ರೆ ಹೆಚ್ಚು ಕಡಿಮೆ ಮರೆತೇಹೋಗಿದೆ. 2001ರ ನಂತರ ಕೇವಲ ಮುಸ್ಲಿಮರು ಮಾತ್ರ ಭಯೋತ್ಪಾದಕರು ಎಂದಾಗಿಬಿಟ್ಟಿದೆ.

ಹೀಗೆ ವಾಚ್ಯಾರ್ಥವನ್ನು ನಿರೂಪಿಸುವ ಈ ಪ್ರವೃತ್ತಿಯೇ ಭೂಮಿ ಚಪ್ಪಟೆಯಾಗಿದೆ ಎಂಬ ಚಳುವಳಿಗೂ ಸ್ಪೂರ್ತಿ ನೀಡಿದೆ. ಅಮೇರಿಕೆಯಲ್ಲಿ ಟ್ರಂಪ್ ಬೆಂಬಲಿಗರಲ್ಲಿ ಇದು ತುಂಬಾ ಜನಪ್ರಿಯವಾಗಿದೆ: “ನನಗೆ ಭೂಮಿ ಚಪ್ಪಟೆಯಾಗಿ ಕಾಣುತ್ತಿದೆ. ಅಷ್ಟೇ ಅಲ್ಲ ಬೈಬಲಿನಲ್ಲೂ ಹಾಗೆ ಹೇಳಿದೆ.” ಜೊತೆಗೆ ಈ ಬೈಬಲ್ ಗೆಳೆಯರು, ಹಾಗೂ ನಮ್ಮ ಹಿಂದಿ ವಲಯದವರು ಪಾಪ ಡಾರ್ವಿನ್ನನನ್ನು ಕೂಡ ಟೀಕಿಸುತ್ತಿದ್ದಾರೆ. ಡಾರ್ವಿನ್ ಹೇಳಿರೋದು ಅವರ ಧರ್ಮಗ್ರಂಥಗಳಿಗೆ ಅನುಗುಣವಾಗಿ ಇಲ್ಲವಂತೆ. ಹೀಗೆಲ್ಲಾ ವಾದಿಸೋದನ್ನು ಮೇಲ್‌ಸ್ತರದವರ ವಿಜ್ಞಾನ ಹಾಗೂ ಸಮಾಜವಿಜ್ಞಾನದ ಚಿಂತನೆಗಳನ್ನು ತಳಸಮುದಾಯದವರು ವಿರೋಧಿಸುವ ಕ್ರಮ ಅಂತ ಭಾವಿಸಿಬಿಡಬಹುದು. ಆದರೆ ಅದು ತಪ್ಪು. ಹಾಗೆ ಮಾಡೋತ್ತಾ ಹೋದರೆ ಕೊನೆಗೆ ತಳಸ್ತರದವರನ್ನು ಓಲೈಕೆ ಮಾಡಿದಂತೆ ಆಗುತ್ತದೆ.

ವಿಜ್ಞಾನ ಅಂತ ನೀವು ಹೇಳುತ್ತಿರೋದು ನನಗೆ ಕಾಣುತ್ತಿಲ್ಲ ಅಂತ ಒಬ್ಬ ಸಾಮಾನ್ಯ ಹೆಂಗಸು ಹೇಳೋದಿಲ್ಲ. ಅವಳಿಗೂ ನಮ್ಮ ನಾಯಕರಷ್ಟೇ ಅಥವಾ ಅವರಿಗಿಂತ ಹೆಚ್ಚು ಅಮೂರ್ತವಾದ ಕಲ್ಪನೆಗಳನ್ನು ಗ್ರಹಿಸಿಕೊಳ್ಳೋದಕ್ಕೆ ಸಾಧ್ಯ. ಯಾಕೆಂದರೆ ಅವಳು ಅಷ್ಟೊಂದು ಸಿನಿಕಲ್ ಆಗಿಲ್ಲ. ಅವಳು ದಿನ ಮೈಕ್ರೋವೇವ್ ಬಳಸುತ್ತಾಳೆ. ಬೆಂಕಿಯಿಲ್ಲದೆ ಶಾಖ ಹೇಗೆ ಬಂತು ಅಂತ ಅವಳು ಕೇಳೋಲ್ಲ. ಅವಳಿಗೆ ಅಷ್ಟು ಜಾಣತನ ಇದೆ. ವಿಜ್ಞಾನದ ಎಷ್ಟೋ ಕೆಲಸಗಳು ಹಿನ್ನೆಲೆಯಲ್ಲಿ ನಡೆಯುತ್ತಿರುತ್ತವೆ. ಅವು ಕಣ್ಣಿಗೆ ಕಾಣಿಸೋದಿಲ್ಲ ಅನ್ನೋದು ಅವಳಿಗೆ ಗೊತ್ತು. ವಿಕಾಸ ಅನ್ನೋದು ನನ್ನ ಕಣ್ಣ ಮುಂದೆ ನಡೆಯಬೇಕು ಅಂತ ಅವಳು ಕೇಳುವುದಿಲ್ಲ.

ಮುಸ್ಲಿಮರನ್ನು ದ್ವೇಷಿಸುವುದಕ್ಕೆ ಆಗಲಿ, ದಲಿತರನ್ನು ಕೀಳಾಗಿ ಕಾಣುವುದಕ್ಕೇ ಆಗಲಿ ನಮ್ಮ ನೇರ ಅನುಭವ ಕಾರಣ ಅಲ್ಲ. ನಮ್ಮಲ್ಲಿ ಬಹುಪಾಲು ಮಂದಿಗೆ ಅಂತಹ ಯಾವುದೇ ಅನುಭವ ಆಗಿಲ್ಲ. ನಮ್ಮ ಅಕ್ಕಪಕ್ಕದ ಮುಸ್ಲಿಮರು ಉಳಿದ ಎಲ್ಲರಂತೆಯೇ ಇರುತ್ತಾರೆ. ಅದು ನಮ್ಮ ದಿನನಿತ್ಯದ ಅನುಭವ. ಆದರೆ ನಿಜವಾದ ಸಮಸ್ಯೆಯೆಂದರೆ ಈಗ ನಮ್ಮ ಅಕ್ಕಪಕ್ಕದಲ್ಲಿ ಮುಸ್ಲಿಮರು ವಾಸಿಸುತ್ತಿಲ್ಲ. ಅವರಲ್ಲಿ ಹೆದರಿಕೆ ಹುಟ್ಟಿಸಿ, ತಮ್ಮಷ್ಟಕ್ಕೆ ತಾವೇ ಅವರು ಅದೃಶ್ಯರಾಗುವಂತೆ ಮಾಡಿದ್ದೇವೆ. ನಾವು ಅವರನ್ನು ಇಂದು ನೋಡುತ್ತಿರುವುದು ವೃತ್ತಪತ್ರಿಕೆಯ ಪುಟಗಳಲ್ಲಿ ಅಥವಾ ಮಾಂಸದ ಅಂಗಡಿಗಳಲ್ಲಿ. ಅದು ನಮ್ಮ ಪೂರ್ವಗ್ರಹವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ.

ಇನ್ನು ನಮ್ಮ ಮಗಳನ್ನು ಮದುವೆಯಾಗಲಿರುವ ಕೆಳಜಾತಿಯ ಅಳಿಯನ ವಿಷಯಕ್ಕೆ ಬಂದರೆ, ಅವನ ಮೋಹಕ ಗುಣ, ಜಗತ್ತಿನಲ್ಲಿ ಅವನು ಸಾಧಿಸಿರುವ ಯಶಸ್ಸನ್ನು ತಿರಸ್ಕರಿಸುವುದಕ್ಕೆ ನಮಗೆ ಆಗೋದಿಲ್ಲ. ಅದಕ್ಕೇ ಅವನು ‘ಅಪಾಯಕಾರಿ’ಯಾಗಿ ಕಾಣುತ್ತಾನೆ. ಹಾಗಾಗಿಯೇ ಖಾಪ್ ಪಂಚಾಯತಿಗಳು ಅವರನ್ನು ಹೆದರಿಸಿ, ಬೆದರಿಸುವ ಕೆಲಸಕ್ಕೆ ಕೈಹಾಕಿವೆ.

ಈ ಸಂಕುಚಿತ ಮನಸ್ಸಿನ, ಪೂರ್ವಗ್ರಹದ ಕಥೆಗಳಲ್ಲಿ ಆರ್ಗಾನಿಕ್ ಆದದ್ದು ಅಥವಾ ಸತ್ಯ ಅನ್ನುವಂತಹದ್ದು ಏನೂ ಇಲ್ಲ. ಇಲ್ಲೊಂದಿಷ್ಟು ಕೊಂಕು, ಅಲ್ಲೊಂದಿಷ್ಟು ಅರ್ಧ ಸತ್ಯ ಸೇರಿಕೊಂಡು ಜಾಗರೂಕತೆಯಿಂದ ಈ ಕಥೆಯನ್ನು ಹೆಣೆಯಲಾಗಿದೆ. ಇಂದು ಪದ್ಮಾವತಿ, ನಾಳೆ ಅಯೋಧ್ಯಾ ಇಂತಹ ಘಟನೆಗಳು. ನಿರಂತರವಾಗಿ ಯುದ್ಧವೊಂದು ನಡೆಯುತ್ತಿದೆ, ತಮಗೆ ಅದರಲ್ಲಿ ಸೋಲಾಗಬಹುದು ಅನ್ನುವ ಭಾವನೆಯನ್ನು ಜನರಲ್ಲಿ ಮೂಡಿಸುತ್ತಿವೆ. ಇಂತಹ ಘಟನೆಗಳನ್ನು ನಿರಂತರವಾಗಿ ಸೃಷ್ಟಿಸುತ್ತಾ, ಉರಿ ಆರದ ಹಾಗೆ ನೋಡಿಕೊಳ್ಳುತ್ತಿವೆ.

ಬೇರೆ ಏನೂ ವಿಷಯ ಸಿಗದೇ ಹೋದಾಗ, ವಿಕಾಸದ ವಿಷಯವನ್ನು ಯಾಕೆ ಪ್ರಯತ್ನಿಸಬಾರದು? ಈ ಕಚ್ಚಾಟದಲ್ಲಿ ಯಾರಾದರೂ ಒಂದಿಷ್ಟು ಜನ ತೊಡಗಿಕೊಳ್ಳಬಹುದು ಅನ್ನೋ ಯೋಚನೆ ಇವರಿಗೆ ಬರುತ್ತೆ. ನಾವೆಲ್ಲಾ ಕೋತಿಗಳಾಗುತ್ತಿರುವುದು ಹೀಗೆ. ನಿಜವಾಗಿ ಆತಂಕದ ವಿಷಯ ಅಂದರೆ ಈ ಕುರಿತು ಏನೂ ಮಾಡುತ್ತಿಲ್ಲ. ನನ್ನದೇ ವಿಷಯಕ್ಕೆ ಬಂದರೆ ಕೈ ಹಿಸುಕಿಕೊಂಡು ಒಳ್ಳೆಯ ಶಿಕ್ಷಣ ಬೇಕು ಅಂತ ಮಾತನಾಡುತ್ತೇನೆ. ನಿಜ ಹೇಳಬೇಕೆಂದರೆ ಆಶೋಕ ವಿಶ್ವವಿದ್ಯಾನಿಲಯದಲ್ಲಿ ಮತ್ತು ಅಹಮದಾಬಾದ್ ವಿಶ್ವವಿದ್ಯಾನಿಲಯಗಳಲ್ಲ್ಲಿ ಒಳ್ಳೆ ಕೆಲಸಗಳು ಆಗುತ್ತಿವೆ. ಒಂದು ಉದಾರವಾದಿ ಶಿಕ್ಷಣ ಕೊಡೋ ಅದ್ಭುತವಾದ ಕೆಲಸ ಅಲ್ಲಿ ನಡೆಯುತ್ತಿದೆ. ಹಾಗೆಯೇ ಚೆನ್ನೈನಲ್ಲಿನ ಇನ್ಸ್ಟಿಟ್ಯೂಟ್ ಫಾರ್ ಫೈನಾನ್ಸಿಯಲ್ ಮ್ಯಾನೇಜ್‌ಮೆಂಟ್ ಅಂಡ್ ರೀಸರ್ಚ್ ಅಂತಹ ಸಂಸ್ಥೆಗಳಲ್ಲೂ ಒಳ್ಳೆ ಕೆಲಸ ಆಗುತ್ತಿದೆ. ಆದರೆ ತುಂಬಾ ಕಡಿಮೆ. ತುಂಬಾ ಸಮಯ ಉಳಿದಿಲ್ಲ.

ನಮ್ಮ ದೇಶವನ್ನು ಉಳಿಸಲು, ಅಥವಾ ನಮ್ಮಲ್ಲಿ ಅನೇಕರು ಇದೆ ಅಂದುಕೊಂಡಿದ್ದ ದೇಶವನ್ನು ಉಳಿಸಲು ಒಂದು ಚಳುವಳಿಯನ್ನು ಮಾಡಬೇಕಾಗಿದೆ. ನಮ್ಮ ದೇಶದಲ್ಲಿನ ಮುಕ್ತತೆಯ, ಕುತೂಹಲದ, ಸಂವಾದದ, ಅಮೂರ್ತತೆಯ, ಆತಿಥ್ಯದ ಮತ್ತು ಕಾರುಣ್ಯದ ಸಂಪ್ರದಾಯಗಳನ್ನು ಗೌರವಿಸಿ, ಮೆಚ್ಚುವ ಚಳುವಳಿಯೊಂದನ್ನು ಹುಟ್ಟುಹಾಕಬೇಕಾಗಿದೆ. ಈ ಚಳುವಳಿಯಲ್ಲಿ ಧಾರ್ಮಿಕರು ಮತ್ತು ನಿರೀಶ್ವರವಾದಿಗಳು; ಅಂತೆಯೇ ತೀವ್ರವಾದ ಭಾವುಕತೆ ಹಾಗೂ ವೈಚಾರಿಕತೆ ಮತ್ತು ವಿಶಿಷ್ಟವಾಗಿ ಭಾರತೀಯವೇ ಅಗಿರುವ ಇವೆಲ್ಲವುಗಳು ಒಟ್ಟಾಗಿ ಸೇರಿಕೊಂಡ ಚಳುವಳಿಯೊಂದು ಆಗಬೇಕಾಗಿದೆ. ಹೊಸ ರಾಷ್ಟ್ರೀಯ ಚಳುವಳಿಯೊಂದು ಬೇಕಾಗಿದೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...