HomeಮುಖಪುಟEWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

EWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

- Advertisement -
- Advertisement -

ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯೂಎಸ್‌) ಗಳಿಗೆ ಒಕ್ಕೂಟ ಸರ್ಕಾರ ನೀಡಿರುವ 10% ಮೀಸಲಾತಿಯನ್ನು ಸುಪ್ರಿಂಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ. ಇದನ್ನು ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಇಂದಿನ ತೀರ್ಪು ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಸರ್ಕಾರ ಕೂಡಾ ಇಡಬ್ಲ್ಯೂಎಸ್‌‌ಗಳಿಗೆ 10% ಮೀಸಲಾತಿ ವಿರೋಧಿಸಿ ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್‌ ತಮಿಳುನಾಡು ಸೇರಿದಂತೆ ದೇಶದಾದ್ಯಂತ ದಾಖಲಿಸಲಾದ ಒಟ್ಟು 40 ಅರ್ಜಿಗಳನ್ನು ಆಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್‌, “ಇಡಬ್ಲ್ಯೂಎಸ್‌‌ 10% ಮೀಸಲಾತಿ ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. 50% ಸೀಲಿಂಗ್ ಮಿತಿಯ ನಿಯಮವನ್ನು ಉಲ್ಲಂಘಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್‌‌ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್‌‌ ಹೇಳಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು ವಿರೋಧಿಸಿ ಆರಂಭದಿಂದಲೂ ಹೋರಾಟ ನಡೆಸುತ್ತಲೆ ಬಂದಿರುವ ಚಿಂತಕ ಶ್ರೀಪಾದ ಭಟ್‌‌ ಅವರು, ಸುಪ್ರಿಂಕೋರ್ಟ್‌ನ ತೀರ್ಪು ನಿರಾಶೆದಾಯಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ವಿಚಾರವನ್ನು ಆರಂಭದಿಂದಲೂ ಗಂಭೀರವಾಗಿ ತೆಗೆದುಕೊಂಡು ಹೋರಾಟ ರೂಪಿಸದ ಸಾಮಾಜಿಕ ಸಂಘಟನೆಗಳ ಬಗ್ಗೆಯೂ ನನಗೆ ನಿರಾಸೆಯಿದೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಅವರು, “ಬಹಳ ಮುಖ್ಯವಾಗಿ ನ್ಯಾಯಾಂಗದಲ್ಲಿ ಪ್ರಾತಿನಿಧ್ಯವಿಲ್ಲದಿರುವುದು ಕೂಡಾ ಇಂತಹ ತೀರ್ಪಿಗೆ ಕಾರಣವಾಗುತ್ತದೆ. ಮುಸ್ಲಿಮರ ಪ್ರಾತಿನಿಧ್ಯವಿಲ್ಲ ಎಂದರೆ ಅವರ ಪರವಾಗಿ ತೀರ್ಪು ಬರುವುದಿಲ್ಲ. ದಲಿತರ ಪ್ರಾತಿನಿಧ್ಯವಿಲ್ಲ ಎಂದರೆ ದಲಿತರ ಪರವಾಗಿ ತೀರ್ಪು ಬರುವುದಿಲ್ಲ. ಹಾಗೆಂದ ಮಾತ್ರಕ್ಕೆ ಪ್ರಾತಿನಿಧ್ಯ ಇದ್ದ ಮಾತ್ರಕ್ಕೆ ಆಯಾ ಸಮುದಾಯದ ಪರವಾಗಿ ತೀರ್ಪು ನೀಡುತ್ತಾರೆ ಎಂದೇನೂ ಇಲ್ಲ. ಆದರೆ ಆಯಾ ಸಮುದಾಯದ ಪ್ರಾತಿನಿಧ್ಯ ಎಂಬುವುದು ಮೂಲಭೂತವಾದ ವಿಚಾರವಾಗಿದೆ” ಎಂದು ಶ್ರೀಪಾದ ಭಟ್ ಅವರು ಹೇಳುತ್ತಾರೆ.

“ನ್ಯಾಯಾಲಯದಲ್ಲಿ ಕೂತಿರುವ ನ್ಯಾಯಮೂರ್ತಿಗಳು ಕೂಡಾ ನಮ್ಮ ತರ ಮನುಷ್ಯರೆ ಆಗಿದ್ದಾರೆ. ಅವರು ದಿನನಿತ್ಯದ ವಿದ್ಯಾಮಾನದಿಂದ ಪ್ರಭಾವಿತರಾಗಿ ತೀರ್ಪು ನೀಡುತ್ತಾ ಇರುತ್ತಾರೆ. ಆರಂಭದಿಂದಲೂ ಈ ಬಗ್ಗೆ ಹೋರಾಟವೆ ಇಲ್ಲದ್ದರಿಂದ ಅವರು ಕೂಡಾ ಇದರ ಬಗ್ಗೆ ಅಷ್ಟೆನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ ಹೋರಾಟಗಳು ಆಗುತ್ತಿದ್ದರೆ, ಅವರು ಕೂಡಾ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಒಟ್ಟಿನಲ್ಲಿ ಮೀಸಲಾತಿ ಏನಕ್ಕೆ ಬೇಕು ಎಂದು ಕೇಳುತ್ತಿದ್ದವರಿಗೆ ಮೀಸಲಾತಿ ಸಿಕ್ಕಿದೆ” ಎಂದು ಶ್ರೀಪಾದ ಭಟ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

“10% ಮೀಸಲಾತಿ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗಿಲ್ಲ. ಸಾಮಾಜಿಕ ಸಂಘಟನೆಗಳು ಕೂಡಾ ಇವುಗಳನ್ನು ಹಿಡಿದು ಹೋರಾಟ ರೂಪಿಸಿಲ್ಲ. ಸಂಸತ್ತಿನಲ್ಲಿ ಕೂಡಾ ಯಾವ ಚರ್ಚೆಯೂ ಆಗದೆ ಇವುಗಳನ್ನು ಪಾಸ್ ಮಾಡಲಾಗಿತ್ತು. ನ್ಯಾಯಾಂಗವು ಸಂವಿಧಾನಕ್ಕಿಂತ ದೊಡ್ಡದಲ್ಲ. ನ್ಯಾಯಾಂಗದಲ್ಲಿ ಇರುವ ಕಾನೂನು ಪರಿಣಿತರು, ಸಾಮಾಜಿಕ ಸಂಘಟನೆಗಳು, ಹೋರಾಟಗಾರರು ಸೇರಿಕೊಂಡು ಒಂದು ತಂಡ ರಚನೆಯಾಗಿ ಇವುಗಳ ಬಗ್ಗೆ ಚರ್ಚೆ ಮಾಡಬೇಕು. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿರುವುದರಿಂದ ಇದನ್ನು ಮೀರಿ ಹೇಗೆ ಹೋರಾಟ ರೂಪಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಬೇಕು” ಎಂದು ಶ್ರೀಪಾದ ಭಟ್ ಹೇಳಿದರು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...