HomeಮುಖಪುಟEWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

EWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

- Advertisement -
- Advertisement -

ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯೂಎಸ್‌) ಗಳಿಗೆ ಒಕ್ಕೂಟ ಸರ್ಕಾರ ನೀಡಿರುವ 10% ಮೀಸಲಾತಿಯನ್ನು ಸುಪ್ರಿಂಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ. ಇದನ್ನು ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಇಂದಿನ ತೀರ್ಪು ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಸರ್ಕಾರ ಕೂಡಾ ಇಡಬ್ಲ್ಯೂಎಸ್‌‌ಗಳಿಗೆ 10% ಮೀಸಲಾತಿ ವಿರೋಧಿಸಿ ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್‌ ತಮಿಳುನಾಡು ಸೇರಿದಂತೆ ದೇಶದಾದ್ಯಂತ ದಾಖಲಿಸಲಾದ ಒಟ್ಟು 40 ಅರ್ಜಿಗಳನ್ನು ಆಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್‌, “ಇಡಬ್ಲ್ಯೂಎಸ್‌‌ 10% ಮೀಸಲಾತಿ ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. 50% ಸೀಲಿಂಗ್ ಮಿತಿಯ ನಿಯಮವನ್ನು ಉಲ್ಲಂಘಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್‌‌ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್‌‌ ಹೇಳಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು ವಿರೋಧಿಸಿ ಆರಂಭದಿಂದಲೂ ಹೋರಾಟ ನಡೆಸುತ್ತಲೆ ಬಂದಿರುವ ಚಿಂತಕ ಶ್ರೀಪಾದ ಭಟ್‌‌ ಅವರು, ಸುಪ್ರಿಂಕೋರ್ಟ್‌ನ ತೀರ್ಪು ನಿರಾಶೆದಾಯಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ವಿಚಾರವನ್ನು ಆರಂಭದಿಂದಲೂ ಗಂಭೀರವಾಗಿ ತೆಗೆದುಕೊಂಡು ಹೋರಾಟ ರೂಪಿಸದ ಸಾಮಾಜಿಕ ಸಂಘಟನೆಗಳ ಬಗ್ಗೆಯೂ ನನಗೆ ನಿರಾಸೆಯಿದೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಅವರು, “ಬಹಳ ಮುಖ್ಯವಾಗಿ ನ್ಯಾಯಾಂಗದಲ್ಲಿ ಪ್ರಾತಿನಿಧ್ಯವಿಲ್ಲದಿರುವುದು ಕೂಡಾ ಇಂತಹ ತೀರ್ಪಿಗೆ ಕಾರಣವಾಗುತ್ತದೆ. ಮುಸ್ಲಿಮರ ಪ್ರಾತಿನಿಧ್ಯವಿಲ್ಲ ಎಂದರೆ ಅವರ ಪರವಾಗಿ ತೀರ್ಪು ಬರುವುದಿಲ್ಲ. ದಲಿತರ ಪ್ರಾತಿನಿಧ್ಯವಿಲ್ಲ ಎಂದರೆ ದಲಿತರ ಪರವಾಗಿ ತೀರ್ಪು ಬರುವುದಿಲ್ಲ. ಹಾಗೆಂದ ಮಾತ್ರಕ್ಕೆ ಪ್ರಾತಿನಿಧ್ಯ ಇದ್ದ ಮಾತ್ರಕ್ಕೆ ಆಯಾ ಸಮುದಾಯದ ಪರವಾಗಿ ತೀರ್ಪು ನೀಡುತ್ತಾರೆ ಎಂದೇನೂ ಇಲ್ಲ. ಆದರೆ ಆಯಾ ಸಮುದಾಯದ ಪ್ರಾತಿನಿಧ್ಯ ಎಂಬುವುದು ಮೂಲಭೂತವಾದ ವಿಚಾರವಾಗಿದೆ” ಎಂದು ಶ್ರೀಪಾದ ಭಟ್ ಅವರು ಹೇಳುತ್ತಾರೆ.

“ನ್ಯಾಯಾಲಯದಲ್ಲಿ ಕೂತಿರುವ ನ್ಯಾಯಮೂರ್ತಿಗಳು ಕೂಡಾ ನಮ್ಮ ತರ ಮನುಷ್ಯರೆ ಆಗಿದ್ದಾರೆ. ಅವರು ದಿನನಿತ್ಯದ ವಿದ್ಯಾಮಾನದಿಂದ ಪ್ರಭಾವಿತರಾಗಿ ತೀರ್ಪು ನೀಡುತ್ತಾ ಇರುತ್ತಾರೆ. ಆರಂಭದಿಂದಲೂ ಈ ಬಗ್ಗೆ ಹೋರಾಟವೆ ಇಲ್ಲದ್ದರಿಂದ ಅವರು ಕೂಡಾ ಇದರ ಬಗ್ಗೆ ಅಷ್ಟೆನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ ಹೋರಾಟಗಳು ಆಗುತ್ತಿದ್ದರೆ, ಅವರು ಕೂಡಾ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಒಟ್ಟಿನಲ್ಲಿ ಮೀಸಲಾತಿ ಏನಕ್ಕೆ ಬೇಕು ಎಂದು ಕೇಳುತ್ತಿದ್ದವರಿಗೆ ಮೀಸಲಾತಿ ಸಿಕ್ಕಿದೆ” ಎಂದು ಶ್ರೀಪಾದ ಭಟ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

“10% ಮೀಸಲಾತಿ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗಿಲ್ಲ. ಸಾಮಾಜಿಕ ಸಂಘಟನೆಗಳು ಕೂಡಾ ಇವುಗಳನ್ನು ಹಿಡಿದು ಹೋರಾಟ ರೂಪಿಸಿಲ್ಲ. ಸಂಸತ್ತಿನಲ್ಲಿ ಕೂಡಾ ಯಾವ ಚರ್ಚೆಯೂ ಆಗದೆ ಇವುಗಳನ್ನು ಪಾಸ್ ಮಾಡಲಾಗಿತ್ತು. ನ್ಯಾಯಾಂಗವು ಸಂವಿಧಾನಕ್ಕಿಂತ ದೊಡ್ಡದಲ್ಲ. ನ್ಯಾಯಾಂಗದಲ್ಲಿ ಇರುವ ಕಾನೂನು ಪರಿಣಿತರು, ಸಾಮಾಜಿಕ ಸಂಘಟನೆಗಳು, ಹೋರಾಟಗಾರರು ಸೇರಿಕೊಂಡು ಒಂದು ತಂಡ ರಚನೆಯಾಗಿ ಇವುಗಳ ಬಗ್ಗೆ ಚರ್ಚೆ ಮಾಡಬೇಕು. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿರುವುದರಿಂದ ಇದನ್ನು ಮೀರಿ ಹೇಗೆ ಹೋರಾಟ ರೂಪಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಬೇಕು” ಎಂದು ಶ್ರೀಪಾದ ಭಟ್ ಹೇಳಿದರು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...