HomeಮುಖಪುಟEWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

EWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

- Advertisement -
- Advertisement -

ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯೂಎಸ್‌) ಗಳಿಗೆ ಒಕ್ಕೂಟ ಸರ್ಕಾರ ನೀಡಿರುವ 10% ಮೀಸಲಾತಿಯನ್ನು ಸುಪ್ರಿಂಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ. ಇದನ್ನು ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಇಂದಿನ ತೀರ್ಪು ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಸರ್ಕಾರ ಕೂಡಾ ಇಡಬ್ಲ್ಯೂಎಸ್‌‌ಗಳಿಗೆ 10% ಮೀಸಲಾತಿ ವಿರೋಧಿಸಿ ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್‌ ತಮಿಳುನಾಡು ಸೇರಿದಂತೆ ದೇಶದಾದ್ಯಂತ ದಾಖಲಿಸಲಾದ ಒಟ್ಟು 40 ಅರ್ಜಿಗಳನ್ನು ಆಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್‌, “ಇಡಬ್ಲ್ಯೂಎಸ್‌‌ 10% ಮೀಸಲಾತಿ ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. 50% ಸೀಲಿಂಗ್ ಮಿತಿಯ ನಿಯಮವನ್ನು ಉಲ್ಲಂಘಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್‌‌ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್‌‌ ಹೇಳಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು ವಿರೋಧಿಸಿ ಆರಂಭದಿಂದಲೂ ಹೋರಾಟ ನಡೆಸುತ್ತಲೆ ಬಂದಿರುವ ಚಿಂತಕ ಶ್ರೀಪಾದ ಭಟ್‌‌ ಅವರು, ಸುಪ್ರಿಂಕೋರ್ಟ್‌ನ ತೀರ್ಪು ನಿರಾಶೆದಾಯಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ವಿಚಾರವನ್ನು ಆರಂಭದಿಂದಲೂ ಗಂಭೀರವಾಗಿ ತೆಗೆದುಕೊಂಡು ಹೋರಾಟ ರೂಪಿಸದ ಸಾಮಾಜಿಕ ಸಂಘಟನೆಗಳ ಬಗ್ಗೆಯೂ ನನಗೆ ನಿರಾಸೆಯಿದೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಅವರು, “ಬಹಳ ಮುಖ್ಯವಾಗಿ ನ್ಯಾಯಾಂಗದಲ್ಲಿ ಪ್ರಾತಿನಿಧ್ಯವಿಲ್ಲದಿರುವುದು ಕೂಡಾ ಇಂತಹ ತೀರ್ಪಿಗೆ ಕಾರಣವಾಗುತ್ತದೆ. ಮುಸ್ಲಿಮರ ಪ್ರಾತಿನಿಧ್ಯವಿಲ್ಲ ಎಂದರೆ ಅವರ ಪರವಾಗಿ ತೀರ್ಪು ಬರುವುದಿಲ್ಲ. ದಲಿತರ ಪ್ರಾತಿನಿಧ್ಯವಿಲ್ಲ ಎಂದರೆ ದಲಿತರ ಪರವಾಗಿ ತೀರ್ಪು ಬರುವುದಿಲ್ಲ. ಹಾಗೆಂದ ಮಾತ್ರಕ್ಕೆ ಪ್ರಾತಿನಿಧ್ಯ ಇದ್ದ ಮಾತ್ರಕ್ಕೆ ಆಯಾ ಸಮುದಾಯದ ಪರವಾಗಿ ತೀರ್ಪು ನೀಡುತ್ತಾರೆ ಎಂದೇನೂ ಇಲ್ಲ. ಆದರೆ ಆಯಾ ಸಮುದಾಯದ ಪ್ರಾತಿನಿಧ್ಯ ಎಂಬುವುದು ಮೂಲಭೂತವಾದ ವಿಚಾರವಾಗಿದೆ” ಎಂದು ಶ್ರೀಪಾದ ಭಟ್ ಅವರು ಹೇಳುತ್ತಾರೆ.

“ನ್ಯಾಯಾಲಯದಲ್ಲಿ ಕೂತಿರುವ ನ್ಯಾಯಮೂರ್ತಿಗಳು ಕೂಡಾ ನಮ್ಮ ತರ ಮನುಷ್ಯರೆ ಆಗಿದ್ದಾರೆ. ಅವರು ದಿನನಿತ್ಯದ ವಿದ್ಯಾಮಾನದಿಂದ ಪ್ರಭಾವಿತರಾಗಿ ತೀರ್ಪು ನೀಡುತ್ತಾ ಇರುತ್ತಾರೆ. ಆರಂಭದಿಂದಲೂ ಈ ಬಗ್ಗೆ ಹೋರಾಟವೆ ಇಲ್ಲದ್ದರಿಂದ ಅವರು ಕೂಡಾ ಇದರ ಬಗ್ಗೆ ಅಷ್ಟೆನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ ಹೋರಾಟಗಳು ಆಗುತ್ತಿದ್ದರೆ, ಅವರು ಕೂಡಾ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಒಟ್ಟಿನಲ್ಲಿ ಮೀಸಲಾತಿ ಏನಕ್ಕೆ ಬೇಕು ಎಂದು ಕೇಳುತ್ತಿದ್ದವರಿಗೆ ಮೀಸಲಾತಿ ಸಿಕ್ಕಿದೆ” ಎಂದು ಶ್ರೀಪಾದ ಭಟ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

“10% ಮೀಸಲಾತಿ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗಿಲ್ಲ. ಸಾಮಾಜಿಕ ಸಂಘಟನೆಗಳು ಕೂಡಾ ಇವುಗಳನ್ನು ಹಿಡಿದು ಹೋರಾಟ ರೂಪಿಸಿಲ್ಲ. ಸಂಸತ್ತಿನಲ್ಲಿ ಕೂಡಾ ಯಾವ ಚರ್ಚೆಯೂ ಆಗದೆ ಇವುಗಳನ್ನು ಪಾಸ್ ಮಾಡಲಾಗಿತ್ತು. ನ್ಯಾಯಾಂಗವು ಸಂವಿಧಾನಕ್ಕಿಂತ ದೊಡ್ಡದಲ್ಲ. ನ್ಯಾಯಾಂಗದಲ್ಲಿ ಇರುವ ಕಾನೂನು ಪರಿಣಿತರು, ಸಾಮಾಜಿಕ ಸಂಘಟನೆಗಳು, ಹೋರಾಟಗಾರರು ಸೇರಿಕೊಂಡು ಒಂದು ತಂಡ ರಚನೆಯಾಗಿ ಇವುಗಳ ಬಗ್ಗೆ ಚರ್ಚೆ ಮಾಡಬೇಕು. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿರುವುದರಿಂದ ಇದನ್ನು ಮೀರಿ ಹೇಗೆ ಹೋರಾಟ ರೂಪಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಬೇಕು” ಎಂದು ಶ್ರೀಪಾದ ಭಟ್ ಹೇಳಿದರು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...