HomeಮುಖಪುಟEWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

EWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

- Advertisement -
- Advertisement -

ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯೂಎಸ್‌) ಗಳಿಗೆ ಒಕ್ಕೂಟ ಸರ್ಕಾರ ನೀಡಿರುವ 10% ಮೀಸಲಾತಿಯನ್ನು ಸುಪ್ರಿಂಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ. ಇದನ್ನು ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಇಂದಿನ ತೀರ್ಪು ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಸರ್ಕಾರ ಕೂಡಾ ಇಡಬ್ಲ್ಯೂಎಸ್‌‌ಗಳಿಗೆ 10% ಮೀಸಲಾತಿ ವಿರೋಧಿಸಿ ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್‌ ತಮಿಳುನಾಡು ಸೇರಿದಂತೆ ದೇಶದಾದ್ಯಂತ ದಾಖಲಿಸಲಾದ ಒಟ್ಟು 40 ಅರ್ಜಿಗಳನ್ನು ಆಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್‌, “ಇಡಬ್ಲ್ಯೂಎಸ್‌‌ 10% ಮೀಸಲಾತಿ ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. 50% ಸೀಲಿಂಗ್ ಮಿತಿಯ ನಿಯಮವನ್ನು ಉಲ್ಲಂಘಿಸುವುದಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಐವರು ನ್ಯಾಯಮೂರ್ತಿಗಳಲ್ಲಿ ನಾಳೆ ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್‌‌ ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಆರ್ಥಿಕ ದುರ್ಬಲತೆ, ಆರ್ಥಿಕ ಹಿಂದುಳಿದಿರುವಿಕೆ ಸಂವಿಧಾನ ಈ ತಿದ್ದುಪಡಿಯ ಬೆನ್ನೆಲುಬಾಗಿದೆ. ಆದರೆ ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ. ಜೊತೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಯಂತಹ ವರ್ಗಗಳನ್ನು ಈ ಮೀಸಲಾತಿಯಿಂದ ಹೊರತುಪಡಿಸಿರುವುದು ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ” ಎಂದು ರವೀಂದ್ರ ಭಟ್‌‌ ಹೇಳಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು ವಿರೋಧಿಸಿ ಆರಂಭದಿಂದಲೂ ಹೋರಾಟ ನಡೆಸುತ್ತಲೆ ಬಂದಿರುವ ಚಿಂತಕ ಶ್ರೀಪಾದ ಭಟ್‌‌ ಅವರು, ಸುಪ್ರಿಂಕೋರ್ಟ್‌ನ ತೀರ್ಪು ನಿರಾಶೆದಾಯಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ವಿಚಾರವನ್ನು ಆರಂಭದಿಂದಲೂ ಗಂಭೀರವಾಗಿ ತೆಗೆದುಕೊಂಡು ಹೋರಾಟ ರೂಪಿಸದ ಸಾಮಾಜಿಕ ಸಂಘಟನೆಗಳ ಬಗ್ಗೆಯೂ ನನಗೆ ನಿರಾಸೆಯಿದೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಅವರು, “ಬಹಳ ಮುಖ್ಯವಾಗಿ ನ್ಯಾಯಾಂಗದಲ್ಲಿ ಪ್ರಾತಿನಿಧ್ಯವಿಲ್ಲದಿರುವುದು ಕೂಡಾ ಇಂತಹ ತೀರ್ಪಿಗೆ ಕಾರಣವಾಗುತ್ತದೆ. ಮುಸ್ಲಿಮರ ಪ್ರಾತಿನಿಧ್ಯವಿಲ್ಲ ಎಂದರೆ ಅವರ ಪರವಾಗಿ ತೀರ್ಪು ಬರುವುದಿಲ್ಲ. ದಲಿತರ ಪ್ರಾತಿನಿಧ್ಯವಿಲ್ಲ ಎಂದರೆ ದಲಿತರ ಪರವಾಗಿ ತೀರ್ಪು ಬರುವುದಿಲ್ಲ. ಹಾಗೆಂದ ಮಾತ್ರಕ್ಕೆ ಪ್ರಾತಿನಿಧ್ಯ ಇದ್ದ ಮಾತ್ರಕ್ಕೆ ಆಯಾ ಸಮುದಾಯದ ಪರವಾಗಿ ತೀರ್ಪು ನೀಡುತ್ತಾರೆ ಎಂದೇನೂ ಇಲ್ಲ. ಆದರೆ ಆಯಾ ಸಮುದಾಯದ ಪ್ರಾತಿನಿಧ್ಯ ಎಂಬುವುದು ಮೂಲಭೂತವಾದ ವಿಚಾರವಾಗಿದೆ” ಎಂದು ಶ್ರೀಪಾದ ಭಟ್ ಅವರು ಹೇಳುತ್ತಾರೆ.

“ನ್ಯಾಯಾಲಯದಲ್ಲಿ ಕೂತಿರುವ ನ್ಯಾಯಮೂರ್ತಿಗಳು ಕೂಡಾ ನಮ್ಮ ತರ ಮನುಷ್ಯರೆ ಆಗಿದ್ದಾರೆ. ಅವರು ದಿನನಿತ್ಯದ ವಿದ್ಯಾಮಾನದಿಂದ ಪ್ರಭಾವಿತರಾಗಿ ತೀರ್ಪು ನೀಡುತ್ತಾ ಇರುತ್ತಾರೆ. ಆರಂಭದಿಂದಲೂ ಈ ಬಗ್ಗೆ ಹೋರಾಟವೆ ಇಲ್ಲದ್ದರಿಂದ ಅವರು ಕೂಡಾ ಇದರ ಬಗ್ಗೆ ಅಷ್ಟೆನೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಒಂದು ವೇಳೆ ಹೋರಾಟಗಳು ಆಗುತ್ತಿದ್ದರೆ, ಅವರು ಕೂಡಾ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಒಟ್ಟಿನಲ್ಲಿ ಮೀಸಲಾತಿ ಏನಕ್ಕೆ ಬೇಕು ಎಂದು ಕೇಳುತ್ತಿದ್ದವರಿಗೆ ಮೀಸಲಾತಿ ಸಿಕ್ಕಿದೆ” ಎಂದು ಶ್ರೀಪಾದ ಭಟ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

“10% ಮೀಸಲಾತಿ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗಿಲ್ಲ. ಸಾಮಾಜಿಕ ಸಂಘಟನೆಗಳು ಕೂಡಾ ಇವುಗಳನ್ನು ಹಿಡಿದು ಹೋರಾಟ ರೂಪಿಸಿಲ್ಲ. ಸಂಸತ್ತಿನಲ್ಲಿ ಕೂಡಾ ಯಾವ ಚರ್ಚೆಯೂ ಆಗದೆ ಇವುಗಳನ್ನು ಪಾಸ್ ಮಾಡಲಾಗಿತ್ತು. ನ್ಯಾಯಾಂಗವು ಸಂವಿಧಾನಕ್ಕಿಂತ ದೊಡ್ಡದಲ್ಲ. ನ್ಯಾಯಾಂಗದಲ್ಲಿ ಇರುವ ಕಾನೂನು ಪರಿಣಿತರು, ಸಾಮಾಜಿಕ ಸಂಘಟನೆಗಳು, ಹೋರಾಟಗಾರರು ಸೇರಿಕೊಂಡು ಒಂದು ತಂಡ ರಚನೆಯಾಗಿ ಇವುಗಳ ಬಗ್ಗೆ ಚರ್ಚೆ ಮಾಡಬೇಕು. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿರುವುದರಿಂದ ಇದನ್ನು ಮೀರಿ ಹೇಗೆ ಹೋರಾಟ ರೂಪಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಬೇಕು” ಎಂದು ಶ್ರೀಪಾದ ಭಟ್ ಹೇಳಿದರು.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಈ ಪ್ರಕರಣವನ್ನು ಮೊದಲು ಮೂವರು ನ್ಯಾಯಾಧೀಶರ ಮುಂದೆ ತರಲಾಗಿತ್ತು. ಆದರೆ ಅವರು ಅದನ್ನು 2019 ರಲ್ಲಿ ಐದು ನ್ಯಾಯಾಧೀಶರ ದೊಡ್ಡ ಪೀಠಕ್ಕೆ ವರ್ಗಾಯಿಸಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ನಿರಂತರವಾಗಿ ಆರೂವರೆ ದಿನಗಳ ವಿಚಾರಣೆಯನ್ನು ನಡೆಸಿತು ಮತ್ತು ಅದರ ತೀರ್ಪನ್ನು ಕಾಯ್ದಿರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...