Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

ಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

- Advertisement -
- Advertisement -

ಎಸ್‌ಸಿ, ಎಸ್‌ಟಿ, ಒಬಿಸಿ ಪಟ್ಟಿಗೆ ಸೇರದ, ಎಂಟು ಲಕ್ಷ ರೂ. ಆದಾಯ ಮಿತಿಯೊಳಗಿನ ಜಾತಿಗಳಿಗೆ ‘ಆರ್ಥಿಕವಾಗಿ ಹಿಂದುಳಿದ ವರ್ಗ’ದ (ಇಡಬ್ಲ್ಯೂಎಸ್‌) ಮೀಸಲಾತಿ ನೀಡಿರುವುದನ್ನು ಸ್ವಾಗತಿಸಿದ್ದ ಕಾಂಗ್ರೆಸ್‌, ಈಗ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು 2019ರಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದಾಗ ಕಾಂಗ್ರೆಸ್‌ ಸ್ವಾಗತಿಸಿತ್ತು. ಅಲ್ಲದೆ ಇತ್ತೀಚೆಗೆ ಸುಪ್ರೀಂಕೋರ್ಟ್ ಇಡಬ್ಲ್ಯೂಎಸ್ ಪರ ತೀರ್ಪು ನೀಡಿದಾಗಲೂ ಕಾಂಗ್ರೆಸ್‌ ವರಿಷ್ಠರು ಸ್ವಾಗತಿಸಿದ್ದರು. ಆದರೆ ಕಾಂಗ್ರೆಸ್‌ ನಿಲುವಿಗೆ ಆಕ್ಷೇಪಗಳೂ ವ್ಯಕ್ತವಾಗಿದ್ದವು. ಕಾಂಗ್ರೆಸ್‌ ಮತ್ತು ಬಿಜೆಪಿಯ ನಡುವೆ ಅಂತಹ ವ್ಯತ್ಯಾಸಗಳೇನೂ ಇಲ್ಲ ಎಂಬ ಟೀಕೆಗಳು ಬಂದಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಡಬ್ಲ್ಯೂಎಸ್‌ ಮೀಸಲಾತಿಗಾಗಿ ಮಾಡಲಾದ ಸಂವಿಧಾನದ 103ನೇ ತಿದ್ದುಪಡಿಯು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ವಿಶ್ಲೇಷಣೆಗಳು ಬರುತ್ತಿವೆ. ಹಿಂದುಳಿದ ವರ್ಗದಲ್ಲಿನ ಸಮುದಾಯಗಳಿಗೆ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ನೀಡಲಾಗಿಲ್ಲ. ಆದರೆ ಬೆರಳೆಣಿಕೆಯಷ್ಟು ಇರುವ ಮೇಲ್ಜಾತಿಗಳಿಗೆ ಶೇ. 10ರಷ್ಟು ಮೀಸಲಾತಿಯನ್ನು ನೀಡಿರುವುದು ಟೀಕೆಗೆ ಗುರಿಯಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯು ಸಾಮಾಜಿಕ ನ್ಯಾಯದ ವಿರೋಧಿಯಷ್ಟೇ ಅಲ್ಲ, ಒಬಿಸಿ ವರ್ಗದ ವಿರೋಧಿಯೂ ಹೌದು ಎಂದು ರಾಜಕೀಯ ಚಿಂತಕರು ಹೇಳಲಾರಂಭಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ತನ್ನ ನಿಲುವನ್ನು ಮರುಪರಿಶೀಲನೆಗೆ ಒಳಪಡಿಸಲು ಮುಂದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಂಗ್ರೆಸ್‌ ಮಿತ್ರಪಕ್ಷಗಳಾದ ಡಿಎಂಕೆ ಮತ್ತು ಆರ್‌ಜೆಡಿ ತೀರ್ಪನ್ನು ವಿರೋಧಿಸಿವೆ. ಅದರಂತೆಯೇ ಕಾಂಗ್ರೆಸ್‌ ಸಹ ತನ್ನ ನಿರ್ಧಾರ ಬದಲಿಸಲು ಚಿಂತಿಸಿದೆ.

ಡಿಎಂಕೆ ನೇತೃತ್ವದಲ್ಲಿ ಶನಿವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡಿತ್ತು. “ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸರ್ವಪಕ್ಷ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

‘ಸಾಮಾಜಿಕ ನ್ಯಾಯದ ಕುರಿತ ಭಾರತದ ಸುದೀರ್ಘ ಹೋರಾಟಕ್ಕೆ ಈ ತೀರ್ಪಿನಿಂದ ಹಿನ್ನೆಡೆಯಾಗಲಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಹೇಳಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ತಮಿಳುನಾಡು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈ ತೀರ್ಪಿನ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು, ಈ ತೀರ್ಪಿನಿಂದಾಗುವ ‘ಸಾಮಾಜಿಕ ಮತ್ತು ರಾಜಕೀಯ ಪರಿಣಾಮ’ದ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ಜೊತೆಗೆ, ತೀರ್ಪಿನ ಕಾನೂನು ಆಯಾಮದ ಕುರಿತು ಪಿ. ಚಿದಂಬಂರಂ ಮತ್ತು ಅಭಿಷೇಕ್ ಮನು ಸಿಂಘ್ವಿ ಅಧ್ಯಯನ ನಡೆಸುತ್ತಿದ್ದಾರೆ ಎಂದು ಶನಿವಾರ ಪಕ್ಷದ ಮೂಲಗಳು ತಿಳಿಸಿವೆ.

‘ರಾಜಕೀಯ ಪರಿಣಾಮವನ್ನು ಗಮನಿಸದೆಯೇ ಪಕ್ಷವು ಆತುರಾತುರವಾಗಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿತು’ ಎಂದು ಪಕ್ಷದ ಮುಖಂಡರೊಬ್ಬರು ಅಭಿಪ್ರಾಯಪಟ್ಟಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಜ್ಯ ಸರ್ಕಾರಗಳು ಭಾರತದಲ್ಲಿರುವ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಈಗಿರುವ 60% ಪ್ರತಿಶತ ಮಿಸಲಾತಿಯನ್ನು ರದ್ದು ಮಾಡಿ 100% ರಷ್ಟು ಮಿಸಲಾತಿಯನ್ನು ಎಕಕಾಲಕ್ಕೆ ಹಂಚಿಕೆ ಮಾಡಿ ಬಿಡಲಿ. ಪ್ರತಿಯೊಂದು ಜಾತಿಯವರಿಗೂ ಪ್ರಾತಿನಿಧ್ಯ ದೊರೆಯಲಿ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...