Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

ಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

- Advertisement -
- Advertisement -

ಎಸ್‌ಸಿ, ಎಸ್‌ಟಿ, ಒಬಿಸಿ ಪಟ್ಟಿಗೆ ಸೇರದ, ಎಂಟು ಲಕ್ಷ ರೂ. ಆದಾಯ ಮಿತಿಯೊಳಗಿನ ಜಾತಿಗಳಿಗೆ ‘ಆರ್ಥಿಕವಾಗಿ ಹಿಂದುಳಿದ ವರ್ಗ’ದ (ಇಡಬ್ಲ್ಯೂಎಸ್‌) ಮೀಸಲಾತಿ ನೀಡಿರುವುದನ್ನು ಸ್ವಾಗತಿಸಿದ್ದ ಕಾಂಗ್ರೆಸ್‌, ಈಗ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು 2019ರಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದಾಗ ಕಾಂಗ್ರೆಸ್‌ ಸ್ವಾಗತಿಸಿತ್ತು. ಅಲ್ಲದೆ ಇತ್ತೀಚೆಗೆ ಸುಪ್ರೀಂಕೋರ್ಟ್ ಇಡಬ್ಲ್ಯೂಎಸ್ ಪರ ತೀರ್ಪು ನೀಡಿದಾಗಲೂ ಕಾಂಗ್ರೆಸ್‌ ವರಿಷ್ಠರು ಸ್ವಾಗತಿಸಿದ್ದರು. ಆದರೆ ಕಾಂಗ್ರೆಸ್‌ ನಿಲುವಿಗೆ ಆಕ್ಷೇಪಗಳೂ ವ್ಯಕ್ತವಾಗಿದ್ದವು. ಕಾಂಗ್ರೆಸ್‌ ಮತ್ತು ಬಿಜೆಪಿಯ ನಡುವೆ ಅಂತಹ ವ್ಯತ್ಯಾಸಗಳೇನೂ ಇಲ್ಲ ಎಂಬ ಟೀಕೆಗಳು ಬಂದಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಡಬ್ಲ್ಯೂಎಸ್‌ ಮೀಸಲಾತಿಗಾಗಿ ಮಾಡಲಾದ ಸಂವಿಧಾನದ 103ನೇ ತಿದ್ದುಪಡಿಯು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ವಿಶ್ಲೇಷಣೆಗಳು ಬರುತ್ತಿವೆ. ಹಿಂದುಳಿದ ವರ್ಗದಲ್ಲಿನ ಸಮುದಾಯಗಳಿಗೆ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ನೀಡಲಾಗಿಲ್ಲ. ಆದರೆ ಬೆರಳೆಣಿಕೆಯಷ್ಟು ಇರುವ ಮೇಲ್ಜಾತಿಗಳಿಗೆ ಶೇ. 10ರಷ್ಟು ಮೀಸಲಾತಿಯನ್ನು ನೀಡಿರುವುದು ಟೀಕೆಗೆ ಗುರಿಯಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯು ಸಾಮಾಜಿಕ ನ್ಯಾಯದ ವಿರೋಧಿಯಷ್ಟೇ ಅಲ್ಲ, ಒಬಿಸಿ ವರ್ಗದ ವಿರೋಧಿಯೂ ಹೌದು ಎಂದು ರಾಜಕೀಯ ಚಿಂತಕರು ಹೇಳಲಾರಂಭಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ತನ್ನ ನಿಲುವನ್ನು ಮರುಪರಿಶೀಲನೆಗೆ ಒಳಪಡಿಸಲು ಮುಂದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಂಗ್ರೆಸ್‌ ಮಿತ್ರಪಕ್ಷಗಳಾದ ಡಿಎಂಕೆ ಮತ್ತು ಆರ್‌ಜೆಡಿ ತೀರ್ಪನ್ನು ವಿರೋಧಿಸಿವೆ. ಅದರಂತೆಯೇ ಕಾಂಗ್ರೆಸ್‌ ಸಹ ತನ್ನ ನಿರ್ಧಾರ ಬದಲಿಸಲು ಚಿಂತಿಸಿದೆ.

ಡಿಎಂಕೆ ನೇತೃತ್ವದಲ್ಲಿ ಶನಿವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡಿತ್ತು. “ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸರ್ವಪಕ್ಷ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

‘ಸಾಮಾಜಿಕ ನ್ಯಾಯದ ಕುರಿತ ಭಾರತದ ಸುದೀರ್ಘ ಹೋರಾಟಕ್ಕೆ ಈ ತೀರ್ಪಿನಿಂದ ಹಿನ್ನೆಡೆಯಾಗಲಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಹೇಳಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ತಮಿಳುನಾಡು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈ ತೀರ್ಪಿನ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು, ಈ ತೀರ್ಪಿನಿಂದಾಗುವ ‘ಸಾಮಾಜಿಕ ಮತ್ತು ರಾಜಕೀಯ ಪರಿಣಾಮ’ದ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ಜೊತೆಗೆ, ತೀರ್ಪಿನ ಕಾನೂನು ಆಯಾಮದ ಕುರಿತು ಪಿ. ಚಿದಂಬಂರಂ ಮತ್ತು ಅಭಿಷೇಕ್ ಮನು ಸಿಂಘ್ವಿ ಅಧ್ಯಯನ ನಡೆಸುತ್ತಿದ್ದಾರೆ ಎಂದು ಶನಿವಾರ ಪಕ್ಷದ ಮೂಲಗಳು ತಿಳಿಸಿವೆ.

‘ರಾಜಕೀಯ ಪರಿಣಾಮವನ್ನು ಗಮನಿಸದೆಯೇ ಪಕ್ಷವು ಆತುರಾತುರವಾಗಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿತು’ ಎಂದು ಪಕ್ಷದ ಮುಖಂಡರೊಬ್ಬರು ಅಭಿಪ್ರಾಯಪಟ್ಟಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಜ್ಯ ಸರ್ಕಾರಗಳು ಭಾರತದಲ್ಲಿರುವ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಈಗಿರುವ 60% ಪ್ರತಿಶತ ಮಿಸಲಾತಿಯನ್ನು ರದ್ದು ಮಾಡಿ 100% ರಷ್ಟು ಮಿಸಲಾತಿಯನ್ನು ಎಕಕಾಲಕ್ಕೆ ಹಂಚಿಕೆ ಮಾಡಿ ಬಿಡಲಿ. ಪ್ರತಿಯೊಂದು ಜಾತಿಯವರಿಗೂ ಪ್ರಾತಿನಿಧ್ಯ ದೊರೆಯಲಿ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...