Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

ಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

- Advertisement -
- Advertisement -

ಎಸ್‌ಸಿ, ಎಸ್‌ಟಿ, ಒಬಿಸಿ ಪಟ್ಟಿಗೆ ಸೇರದ, ಎಂಟು ಲಕ್ಷ ರೂ. ಆದಾಯ ಮಿತಿಯೊಳಗಿನ ಜಾತಿಗಳಿಗೆ ‘ಆರ್ಥಿಕವಾಗಿ ಹಿಂದುಳಿದ ವರ್ಗ’ದ (ಇಡಬ್ಲ್ಯೂಎಸ್‌) ಮೀಸಲಾತಿ ನೀಡಿರುವುದನ್ನು ಸ್ವಾಗತಿಸಿದ್ದ ಕಾಂಗ್ರೆಸ್‌, ಈಗ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು 2019ರಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದಾಗ ಕಾಂಗ್ರೆಸ್‌ ಸ್ವಾಗತಿಸಿತ್ತು. ಅಲ್ಲದೆ ಇತ್ತೀಚೆಗೆ ಸುಪ್ರೀಂಕೋರ್ಟ್ ಇಡಬ್ಲ್ಯೂಎಸ್ ಪರ ತೀರ್ಪು ನೀಡಿದಾಗಲೂ ಕಾಂಗ್ರೆಸ್‌ ವರಿಷ್ಠರು ಸ್ವಾಗತಿಸಿದ್ದರು. ಆದರೆ ಕಾಂಗ್ರೆಸ್‌ ನಿಲುವಿಗೆ ಆಕ್ಷೇಪಗಳೂ ವ್ಯಕ್ತವಾಗಿದ್ದವು. ಕಾಂಗ್ರೆಸ್‌ ಮತ್ತು ಬಿಜೆಪಿಯ ನಡುವೆ ಅಂತಹ ವ್ಯತ್ಯಾಸಗಳೇನೂ ಇಲ್ಲ ಎಂಬ ಟೀಕೆಗಳು ಬಂದಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಡಬ್ಲ್ಯೂಎಸ್‌ ಮೀಸಲಾತಿಗಾಗಿ ಮಾಡಲಾದ ಸಂವಿಧಾನದ 103ನೇ ತಿದ್ದುಪಡಿಯು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ವಿಶ್ಲೇಷಣೆಗಳು ಬರುತ್ತಿವೆ. ಹಿಂದುಳಿದ ವರ್ಗದಲ್ಲಿನ ಸಮುದಾಯಗಳಿಗೆ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ನೀಡಲಾಗಿಲ್ಲ. ಆದರೆ ಬೆರಳೆಣಿಕೆಯಷ್ಟು ಇರುವ ಮೇಲ್ಜಾತಿಗಳಿಗೆ ಶೇ. 10ರಷ್ಟು ಮೀಸಲಾತಿಯನ್ನು ನೀಡಿರುವುದು ಟೀಕೆಗೆ ಗುರಿಯಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯು ಸಾಮಾಜಿಕ ನ್ಯಾಯದ ವಿರೋಧಿಯಷ್ಟೇ ಅಲ್ಲ, ಒಬಿಸಿ ವರ್ಗದ ವಿರೋಧಿಯೂ ಹೌದು ಎಂದು ರಾಜಕೀಯ ಚಿಂತಕರು ಹೇಳಲಾರಂಭಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ತನ್ನ ನಿಲುವನ್ನು ಮರುಪರಿಶೀಲನೆಗೆ ಒಳಪಡಿಸಲು ಮುಂದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಂಗ್ರೆಸ್‌ ಮಿತ್ರಪಕ್ಷಗಳಾದ ಡಿಎಂಕೆ ಮತ್ತು ಆರ್‌ಜೆಡಿ ತೀರ್ಪನ್ನು ವಿರೋಧಿಸಿವೆ. ಅದರಂತೆಯೇ ಕಾಂಗ್ರೆಸ್‌ ಸಹ ತನ್ನ ನಿರ್ಧಾರ ಬದಲಿಸಲು ಚಿಂತಿಸಿದೆ.

ಡಿಎಂಕೆ ನೇತೃತ್ವದಲ್ಲಿ ಶನಿವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡಿತ್ತು. “ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸರ್ವಪಕ್ಷ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

‘ಸಾಮಾಜಿಕ ನ್ಯಾಯದ ಕುರಿತ ಭಾರತದ ಸುದೀರ್ಘ ಹೋರಾಟಕ್ಕೆ ಈ ತೀರ್ಪಿನಿಂದ ಹಿನ್ನೆಡೆಯಾಗಲಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಹೇಳಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ತಮಿಳುನಾಡು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈ ತೀರ್ಪಿನ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು, ಈ ತೀರ್ಪಿನಿಂದಾಗುವ ‘ಸಾಮಾಜಿಕ ಮತ್ತು ರಾಜಕೀಯ ಪರಿಣಾಮ’ದ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ಜೊತೆಗೆ, ತೀರ್ಪಿನ ಕಾನೂನು ಆಯಾಮದ ಕುರಿತು ಪಿ. ಚಿದಂಬಂರಂ ಮತ್ತು ಅಭಿಷೇಕ್ ಮನು ಸಿಂಘ್ವಿ ಅಧ್ಯಯನ ನಡೆಸುತ್ತಿದ್ದಾರೆ ಎಂದು ಶನಿವಾರ ಪಕ್ಷದ ಮೂಲಗಳು ತಿಳಿಸಿವೆ.

‘ರಾಜಕೀಯ ಪರಿಣಾಮವನ್ನು ಗಮನಿಸದೆಯೇ ಪಕ್ಷವು ಆತುರಾತುರವಾಗಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿತು’ ಎಂದು ಪಕ್ಷದ ಮುಖಂಡರೊಬ್ಬರು ಅಭಿಪ್ರಾಯಪಟ್ಟಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಜ್ಯ ಸರ್ಕಾರಗಳು ಭಾರತದಲ್ಲಿರುವ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಈಗಿರುವ 60% ಪ್ರತಿಶತ ಮಿಸಲಾತಿಯನ್ನು ರದ್ದು ಮಾಡಿ 100% ರಷ್ಟು ಮಿಸಲಾತಿಯನ್ನು ಎಕಕಾಲಕ್ಕೆ ಹಂಚಿಕೆ ಮಾಡಿ ಬಿಡಲಿ. ಪ್ರತಿಯೊಂದು ಜಾತಿಯವರಿಗೂ ಪ್ರಾತಿನಿಧ್ಯ ದೊರೆಯಲಿ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...