Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

ಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

- Advertisement -
- Advertisement -

ಎಸ್‌ಸಿ, ಎಸ್‌ಟಿ, ಒಬಿಸಿ ಪಟ್ಟಿಗೆ ಸೇರದ, ಎಂಟು ಲಕ್ಷ ರೂ. ಆದಾಯ ಮಿತಿಯೊಳಗಿನ ಜಾತಿಗಳಿಗೆ ‘ಆರ್ಥಿಕವಾಗಿ ಹಿಂದುಳಿದ ವರ್ಗ’ದ (ಇಡಬ್ಲ್ಯೂಎಸ್‌) ಮೀಸಲಾತಿ ನೀಡಿರುವುದನ್ನು ಸ್ವಾಗತಿಸಿದ್ದ ಕಾಂಗ್ರೆಸ್‌, ಈಗ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು 2019ರಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದಾಗ ಕಾಂಗ್ರೆಸ್‌ ಸ್ವಾಗತಿಸಿತ್ತು. ಅಲ್ಲದೆ ಇತ್ತೀಚೆಗೆ ಸುಪ್ರೀಂಕೋರ್ಟ್ ಇಡಬ್ಲ್ಯೂಎಸ್ ಪರ ತೀರ್ಪು ನೀಡಿದಾಗಲೂ ಕಾಂಗ್ರೆಸ್‌ ವರಿಷ್ಠರು ಸ್ವಾಗತಿಸಿದ್ದರು. ಆದರೆ ಕಾಂಗ್ರೆಸ್‌ ನಿಲುವಿಗೆ ಆಕ್ಷೇಪಗಳೂ ವ್ಯಕ್ತವಾಗಿದ್ದವು. ಕಾಂಗ್ರೆಸ್‌ ಮತ್ತು ಬಿಜೆಪಿಯ ನಡುವೆ ಅಂತಹ ವ್ಯತ್ಯಾಸಗಳೇನೂ ಇಲ್ಲ ಎಂಬ ಟೀಕೆಗಳು ಬಂದಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಡಬ್ಲ್ಯೂಎಸ್‌ ಮೀಸಲಾತಿಗಾಗಿ ಮಾಡಲಾದ ಸಂವಿಧಾನದ 103ನೇ ತಿದ್ದುಪಡಿಯು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ವಿಶ್ಲೇಷಣೆಗಳು ಬರುತ್ತಿವೆ. ಹಿಂದುಳಿದ ವರ್ಗದಲ್ಲಿನ ಸಮುದಾಯಗಳಿಗೆ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ನೀಡಲಾಗಿಲ್ಲ. ಆದರೆ ಬೆರಳೆಣಿಕೆಯಷ್ಟು ಇರುವ ಮೇಲ್ಜಾತಿಗಳಿಗೆ ಶೇ. 10ರಷ್ಟು ಮೀಸಲಾತಿಯನ್ನು ನೀಡಿರುವುದು ಟೀಕೆಗೆ ಗುರಿಯಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯು ಸಾಮಾಜಿಕ ನ್ಯಾಯದ ವಿರೋಧಿಯಷ್ಟೇ ಅಲ್ಲ, ಒಬಿಸಿ ವರ್ಗದ ವಿರೋಧಿಯೂ ಹೌದು ಎಂದು ರಾಜಕೀಯ ಚಿಂತಕರು ಹೇಳಲಾರಂಭಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ತನ್ನ ನಿಲುವನ್ನು ಮರುಪರಿಶೀಲನೆಗೆ ಒಳಪಡಿಸಲು ಮುಂದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಂಗ್ರೆಸ್‌ ಮಿತ್ರಪಕ್ಷಗಳಾದ ಡಿಎಂಕೆ ಮತ್ತು ಆರ್‌ಜೆಡಿ ತೀರ್ಪನ್ನು ವಿರೋಧಿಸಿವೆ. ಅದರಂತೆಯೇ ಕಾಂಗ್ರೆಸ್‌ ಸಹ ತನ್ನ ನಿರ್ಧಾರ ಬದಲಿಸಲು ಚಿಂತಿಸಿದೆ.

ಡಿಎಂಕೆ ನೇತೃತ್ವದಲ್ಲಿ ಶನಿವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡಿತ್ತು. “ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸರ್ವಪಕ್ಷ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

‘ಸಾಮಾಜಿಕ ನ್ಯಾಯದ ಕುರಿತ ಭಾರತದ ಸುದೀರ್ಘ ಹೋರಾಟಕ್ಕೆ ಈ ತೀರ್ಪಿನಿಂದ ಹಿನ್ನೆಡೆಯಾಗಲಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಹೇಳಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ತಮಿಳುನಾಡು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈ ತೀರ್ಪಿನ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು, ಈ ತೀರ್ಪಿನಿಂದಾಗುವ ‘ಸಾಮಾಜಿಕ ಮತ್ತು ರಾಜಕೀಯ ಪರಿಣಾಮ’ದ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ಜೊತೆಗೆ, ತೀರ್ಪಿನ ಕಾನೂನು ಆಯಾಮದ ಕುರಿತು ಪಿ. ಚಿದಂಬಂರಂ ಮತ್ತು ಅಭಿಷೇಕ್ ಮನು ಸಿಂಘ್ವಿ ಅಧ್ಯಯನ ನಡೆಸುತ್ತಿದ್ದಾರೆ ಎಂದು ಶನಿವಾರ ಪಕ್ಷದ ಮೂಲಗಳು ತಿಳಿಸಿವೆ.

‘ರಾಜಕೀಯ ಪರಿಣಾಮವನ್ನು ಗಮನಿಸದೆಯೇ ಪಕ್ಷವು ಆತುರಾತುರವಾಗಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿತು’ ಎಂದು ಪಕ್ಷದ ಮುಖಂಡರೊಬ್ಬರು ಅಭಿಪ್ರಾಯಪಟ್ಟಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಜ್ಯ ಸರ್ಕಾರಗಳು ಭಾರತದಲ್ಲಿರುವ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಈಗಿರುವ 60% ಪ್ರತಿಶತ ಮಿಸಲಾತಿಯನ್ನು ರದ್ದು ಮಾಡಿ 100% ರಷ್ಟು ಮಿಸಲಾತಿಯನ್ನು ಎಕಕಾಲಕ್ಕೆ ಹಂಚಿಕೆ ಮಾಡಿ ಬಿಡಲಿ. ಪ್ರತಿಯೊಂದು ಜಾತಿಯವರಿಗೂ ಪ್ರಾತಿನಿಧ್ಯ ದೊರೆಯಲಿ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...