Homeಮುಖಪುಟಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

ಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

- Advertisement -
- Advertisement -

ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಇಡಬ್ಲ್ಯೂಎಸ್‌‌ (ಆರ್ಥಿಕವಾಗಿ ದುರ್ಬಲ ವಿಭಾಗ) ಮೀಸಲಾತಿ ಫಲಾನುಭವಿಗಳನ್ನು ಗುರುತಿಸಲು ಈಗ ಅಸ್ತಿತ್ವದಲ್ಲಿರುವ ಮಾನದಂಡಗಳನ್ನು ಈ ಶೈಕ್ಷಣಿಕ ವರ್ಷಕ್ಕೆ ಉಳಿಸಿಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಸರ್ಕಾರ, ನೀಟ್‌‌ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್) ಬರೆದ ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ಕಾಲೇಜುಗಳ ಹಂಚಿಕೆ ನಡೆಯುತ್ತಿರುವ ಈ ಸಮಯದಲ್ಲಿ ನಿಯಮಗಳ ಬದಲಾವಣೆಯು ತೊಡಕುಗಳಿಗೆ ಕಾರಣವಾಗುತ್ತದೆ” ಎಂದು ಪ್ರತಿಕ್ರಿಯಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಇಡಬ್ಲ್ಯೂಎಸ್‌‌ ನಿಯಮಗಳ ಪರಿಷ್ಕರಣೆಗಳನ್ನು ಅನ್ವಯಿಸಬಹುದು ಎಂದು ಸರ್ಕಾರ ತಿಳಿಸಿದೆ.

ಪರಿಷ್ಕೃತ EWS ಮಾನದಂಡವು ವಿವಾದಾತ್ಮಕವಾಗಿದ್ದು ₹ 8 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು ಉಳಿಸಿಕೊಂಡಿದೆ. ಆದರೆ ಆದಾಯವನ್ನು ಲೆಕ್ಕಿಸದೆ ಐದು ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರುವ ಕುಟುಂಬಗಳನ್ನು ಹೊರತುಪಡಿಸುತ್ತದೆ.

₹ 8 ಲಕ್ಷ ವಾರ್ಷಿಕ ಆದಾಯದ ಮಾನದಂಡವು ಸಂವಿಧಾನದ 14, 15 ಮತ್ತು 16 ನೇ ವಿಧಿಗಳಿಗೆ ಅನುಗುಣವಾಗಿದೆ ಎಂದು ಸರ್ಕಾರ ಈ ಹಿಂದೆ ವಾದಿಸಿತ್ತು.

ನವೆಂಬರ್‌ನಲ್ಲಿ ನಡೆದ ಕೊನೆಯ ವಿಚಾರಣೆಯಲ್ಲಿ, ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಪ್ರಸ್ತುತ ಆದಾಯ ಮಾನದಂಡಗಳನ್ನು ಮರುಪರಿಶೀಲಿಸಲಾಗುವುದು ಮತ್ತು ನಾಲ್ಕು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದರು.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸರ್ಕಾರದ ವಾದ ಅಷ್ಟಾಗಿ ಒಪ್ಪಿಗೆಯಾಗಲಿಲ್ಲ. “ನೀವು ಕೆಲವು ಜನಸಂಖ್ಯಾ ಅಥವಾ ಸಾಮಾಜಿಕ-ಆರ್ಥಿಕ ಅಂಕಿ-ಅಂಶವನ್ನು ಹೊಂದಿರಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

₹ 8 ಲಕ್ಷ ಮಿತಿಗೆ ಯಾವುದೇ ಆಧಾರವಿದೆಯೇ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಸರ್ಕಾರವನ್ನು ಪ್ರಶ್ನಿಸಿತ್ತು. ವಾರ್ಷಿಕ ₹ 8 ಲಕ್ಷಕ್ಕಿಂತ ಕಡಿಮೆ ಆದಾಯದ ಗುಂಪಿನಲ್ಲಿರುವ ಇತರ ಹಿಂದುಳಿದ ವರ್ಗಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಸೂಚಿಸುವ ಯಾವುದೇ ಸಾಮಾಜಿಕ, ಪ್ರಾದೇಶಿಕ ಅಥವಾ ಇತರ ಯಾವುದೇ ಸಮೀಕ್ಷೆ, ಡೇಟಾ ಇದೆಯೇ ಎಂದು ನ್ಯಾಯಾಲಯ ಕೇಳಿತ್ತು.

ಕಳೆದ ವಾರ ದೆಹಲಿಯಲ್ಲಿ ಕಿರಿಯ ವೈದ್ಯರು NEET ಕೌನ್ಸೆಲಿಂಗ್ ಮತ್ತು ಪ್ರವೇಶದ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಭಾರತದಾದ್ಯಂತ ಮಾನದಂಡಗಳನ್ನು ಹೇಗೆ ಅನ್ವಯಿಸಬಹುದು ಎಂಬುದನ್ನು ನ್ಯಾಯಾಲಯವು ತಿಳಿದುಕೊಳ್ಳಲು ಬಯಸಿದೆ. “ಒಂದು ಸಣ್ಣ ಪಟ್ಟಣ ಅಥವಾ ಹಳ್ಳಿಯಲ್ಲಿರುವ ಒಬ್ಬ ವ್ಯಕ್ತಿಯ ಗಳಿಕೆಯನ್ನು ಮೆಟ್ರೋ ನಗರಗಳಲ್ಲಿ ಅದೇ ರೀತಿ ಗಳಿಸುವವರಿಗೆ ಹೇಗೆ ಸಮೀಕರಿಸಬಹುದು?” ಎಂದು ಕೇಳಿದೆ.

EWS ಕೋಟಾ ಸಮಸ್ಯೆಯು NEET ಪ್ರವೇಶದ ಮೇಲೆ ಪರಿಣಾಮ ಬೀರಿದೆ, ಇದರಿಂದಾಗಿ ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಕಿರಿಯ ವೈದ್ಯರು ನೇಮಕಾತಿ ವಿಳಂಬದ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿದರು.

ಸರ್ಕಾರದ ವಿಳಂಬ ನೀತಿಯನ್ನು ವೈದ್ಯರು ಪ್ರಶ್ನಿಸುತ್ತಿದ್ದಾರೆ. ದೇಶದ ಆರೋಗ್ಯ ರಕ್ಷಣೆಗೆ, ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿನ ಒತ್ತಡ ಹಾಗೂ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ತಜ್ಞರ ಸಮಿತಿಯು ಇಡಬ್ಲ್ಯೂಎಸ್ ನಿಯಮಗಳ ಪರಿಷ್ಕರಣೆ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಒಪ್ಪಿದ ನಂತರ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಯಿತು.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...