Homeಮುಖಪುಟಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

ಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

- Advertisement -
- Advertisement -

ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಇಡಬ್ಲ್ಯೂಎಸ್‌‌ (ಆರ್ಥಿಕವಾಗಿ ದುರ್ಬಲ ವಿಭಾಗ) ಮೀಸಲಾತಿ ಫಲಾನುಭವಿಗಳನ್ನು ಗುರುತಿಸಲು ಈಗ ಅಸ್ತಿತ್ವದಲ್ಲಿರುವ ಮಾನದಂಡಗಳನ್ನು ಈ ಶೈಕ್ಷಣಿಕ ವರ್ಷಕ್ಕೆ ಉಳಿಸಿಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಸರ್ಕಾರ, ನೀಟ್‌‌ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್) ಬರೆದ ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ಕಾಲೇಜುಗಳ ಹಂಚಿಕೆ ನಡೆಯುತ್ತಿರುವ ಈ ಸಮಯದಲ್ಲಿ ನಿಯಮಗಳ ಬದಲಾವಣೆಯು ತೊಡಕುಗಳಿಗೆ ಕಾರಣವಾಗುತ್ತದೆ” ಎಂದು ಪ್ರತಿಕ್ರಿಯಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಇಡಬ್ಲ್ಯೂಎಸ್‌‌ ನಿಯಮಗಳ ಪರಿಷ್ಕರಣೆಗಳನ್ನು ಅನ್ವಯಿಸಬಹುದು ಎಂದು ಸರ್ಕಾರ ತಿಳಿಸಿದೆ.

ಪರಿಷ್ಕೃತ EWS ಮಾನದಂಡವು ವಿವಾದಾತ್ಮಕವಾಗಿದ್ದು ₹ 8 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು ಉಳಿಸಿಕೊಂಡಿದೆ. ಆದರೆ ಆದಾಯವನ್ನು ಲೆಕ್ಕಿಸದೆ ಐದು ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರುವ ಕುಟುಂಬಗಳನ್ನು ಹೊರತುಪಡಿಸುತ್ತದೆ.

₹ 8 ಲಕ್ಷ ವಾರ್ಷಿಕ ಆದಾಯದ ಮಾನದಂಡವು ಸಂವಿಧಾನದ 14, 15 ಮತ್ತು 16 ನೇ ವಿಧಿಗಳಿಗೆ ಅನುಗುಣವಾಗಿದೆ ಎಂದು ಸರ್ಕಾರ ಈ ಹಿಂದೆ ವಾದಿಸಿತ್ತು.

ನವೆಂಬರ್‌ನಲ್ಲಿ ನಡೆದ ಕೊನೆಯ ವಿಚಾರಣೆಯಲ್ಲಿ, ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಪ್ರಸ್ತುತ ಆದಾಯ ಮಾನದಂಡಗಳನ್ನು ಮರುಪರಿಶೀಲಿಸಲಾಗುವುದು ಮತ್ತು ನಾಲ್ಕು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದರು.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸರ್ಕಾರದ ವಾದ ಅಷ್ಟಾಗಿ ಒಪ್ಪಿಗೆಯಾಗಲಿಲ್ಲ. “ನೀವು ಕೆಲವು ಜನಸಂಖ್ಯಾ ಅಥವಾ ಸಾಮಾಜಿಕ-ಆರ್ಥಿಕ ಅಂಕಿ-ಅಂಶವನ್ನು ಹೊಂದಿರಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

₹ 8 ಲಕ್ಷ ಮಿತಿಗೆ ಯಾವುದೇ ಆಧಾರವಿದೆಯೇ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಸರ್ಕಾರವನ್ನು ಪ್ರಶ್ನಿಸಿತ್ತು. ವಾರ್ಷಿಕ ₹ 8 ಲಕ್ಷಕ್ಕಿಂತ ಕಡಿಮೆ ಆದಾಯದ ಗುಂಪಿನಲ್ಲಿರುವ ಇತರ ಹಿಂದುಳಿದ ವರ್ಗಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಸೂಚಿಸುವ ಯಾವುದೇ ಸಾಮಾಜಿಕ, ಪ್ರಾದೇಶಿಕ ಅಥವಾ ಇತರ ಯಾವುದೇ ಸಮೀಕ್ಷೆ, ಡೇಟಾ ಇದೆಯೇ ಎಂದು ನ್ಯಾಯಾಲಯ ಕೇಳಿತ್ತು.

ಕಳೆದ ವಾರ ದೆಹಲಿಯಲ್ಲಿ ಕಿರಿಯ ವೈದ್ಯರು NEET ಕೌನ್ಸೆಲಿಂಗ್ ಮತ್ತು ಪ್ರವೇಶದ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಭಾರತದಾದ್ಯಂತ ಮಾನದಂಡಗಳನ್ನು ಹೇಗೆ ಅನ್ವಯಿಸಬಹುದು ಎಂಬುದನ್ನು ನ್ಯಾಯಾಲಯವು ತಿಳಿದುಕೊಳ್ಳಲು ಬಯಸಿದೆ. “ಒಂದು ಸಣ್ಣ ಪಟ್ಟಣ ಅಥವಾ ಹಳ್ಳಿಯಲ್ಲಿರುವ ಒಬ್ಬ ವ್ಯಕ್ತಿಯ ಗಳಿಕೆಯನ್ನು ಮೆಟ್ರೋ ನಗರಗಳಲ್ಲಿ ಅದೇ ರೀತಿ ಗಳಿಸುವವರಿಗೆ ಹೇಗೆ ಸಮೀಕರಿಸಬಹುದು?” ಎಂದು ಕೇಳಿದೆ.

EWS ಕೋಟಾ ಸಮಸ್ಯೆಯು NEET ಪ್ರವೇಶದ ಮೇಲೆ ಪರಿಣಾಮ ಬೀರಿದೆ, ಇದರಿಂದಾಗಿ ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಕಿರಿಯ ವೈದ್ಯರು ನೇಮಕಾತಿ ವಿಳಂಬದ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿದರು.

ಸರ್ಕಾರದ ವಿಳಂಬ ನೀತಿಯನ್ನು ವೈದ್ಯರು ಪ್ರಶ್ನಿಸುತ್ತಿದ್ದಾರೆ. ದೇಶದ ಆರೋಗ್ಯ ರಕ್ಷಣೆಗೆ, ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿನ ಒತ್ತಡ ಹಾಗೂ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ತಜ್ಞರ ಸಮಿತಿಯು ಇಡಬ್ಲ್ಯೂಎಸ್ ನಿಯಮಗಳ ಪರಿಷ್ಕರಣೆ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಒಪ್ಪಿದ ನಂತರ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಯಿತು.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...