Homeಕರ್ನಾಟಕಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ನ್ಯಾಯಾಂಗ ಕಾಲಕಾಲಕ್ಕೆ ತನ್ನ ತಪ್ಪುಗಳನ್ನು ತಿದ್ದುಕೊಂಡ ಉದಾಹರಣೆಗಳಿವೆ ಎಂದು ಆಶಾವಾದ ವ್ಯಕ್ತಪಡಿಸುತ್ತಾರೆ ಜಸ್ಟೀಸ್‌ ಎಚ್‌.ಎನ್.ನಾಗಮೋಹನ ದಾಸ್.

- Advertisement -
- Advertisement -

“ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬ್ಲ್ಯೂಎಸ್‌) ಮೀಸಲಾತಿ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಕಾಲಕಾಲಕ್ಕೆ ನ್ಯಾಯಾಂಗ ತನ್ನ ತೀರ್ಪುಗಳನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಉದಾಹರಣೆಗೆ ತುರ್ತುಪರಿಸ್ಥಿತಿಯನ್ನು ಐದು ಜನರ ನ್ಯಾಯಮೂರ್ತಿಗಳ ಪೀಠ ಒಪ್ಪಿಕೊಂಡಿತ್ತು. ಐದು ಜನರಲ್ಲಿ ನಾಲ್ಕು ನ್ಯಾಯಾಧೀಶರು ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದರು. ಆನಂತರದ ತೀರ್ಪುಗಳಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಈಗ ಕೊಟ್ಟಿರುವ ತೀರ್ಪು ಅಂತಿಮವಲ್ಲ” ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಡಬ್ಲ್ಯೂಎಸ್‌ಗೆ ಸಂಬಂಧಿಸಿದಂತೆ ಐದು ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ. ಸಂವಿಧಾನ 103ನೇ ತಿದ್ದುಪಡಿ ಸರಿ ಇದೆ ಎಂದು ಮೂವರು ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದರೆ, ಇನ್ನಿಬ್ಬರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ನ್ಯಾಯಾಂಗದ ತೀರ್ಪಿಗೆ ಬದ್ಧರಾಗಿರಬೇಕು. ಆದರೆ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಾಂಗದ ತೀರ್ಪುಗಳನ್ನು ವಿಮರ್ಶೆ ಮಾಡುವ ಹಕ್ಕಿದೆ. ಈ ವಿಮರ್ಶೆಗಳು ರಚನಾತ್ಮಕವಾಗಿರಬೇಕು, ಆರೋಗ್ಯಕರವಾಗಿರಬೇಕು. ಜನಸಾಮಾನ್ಯರು ನ್ಯಾಯಾಂಗದ ಮೇಲೆ ಇಟ್ಟಿರುವ  ನಂಬಿಕೆಯನ್ನು ಹಾಳುಗೆಡುವಂತೆ ವಿಮರ್ಶೆಗಳು ಇರಬಾರದು. ನ್ಯಾಯಮೂರ್ತಿಗಳನ್ನು ವೈಯಕ್ತಿಕವಾಗಿ ಅವಹೇಳನ ಮಾಡಬಾರದು” ಎಂದು ಎಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ನಮ್ಮ ಸಂವಿಧಾನ ಹೇಳುತ್ತದೆ. ಆರ್ಥಿಕ ಮಾನದಂಡ ಮುಖ್ಯವಾಗಿರಲಿಲ್ಲ. ಈ ಹಿಂದೆ ನೀಡಿದ ತೀರ್ಪುಗಳು ಕೂಡ ಸಂವಿಧಾನದ ಚೌಕಟ್ಟಿನಲ್ಲಿಯೇ ಬಂದಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಎಂಬುದು ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಹೇಳಿದಂತೆ ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ. ಈ ಆಯಾಮ ಎಲ್ಲೋ ಹಳಿ ತಪ್ಪಿದಂತೆ ಕಾಣುತ್ತಿದೆ.  ಹೀಗಾಗಿ ಈ ತೀರ್ಪಿನ ಕುರಿತು ರಚನಾತ್ಮಕ ಹಾಗೂ ಆರೋಗ್ಯಕರ ವಿಮರ್ಶೆ ಅಗತ್ಯವಿದೆ ಎಂದರು.

ಈ ರೀತಿಯ ಸಮಸ್ಯೆಗಳು ಈ ಹಿಂದೆ ಬಂದಾಗ ನ್ಯಾಯಾಂಗ ತಿದ್ದುಕೊಂಡು ಹೋದ ಉದಾಹರಣೆಗಳಿವೆ. ನ್ಯಾಯಾಂಗ ತಪ್ಪು ಮಾಡಿಲ್ಲವೆಂದು ಹೇಳಲಾಗದು. 1948ರಲ್ಲಿ ಮದ್ರಾಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತರಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ಒದಗಿಸಿತ್ತು. ಚಂಪಕಂ ದೊರೈರಾಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆ ಮೀಸಲಾತಿಯನ್ನು ತೆಗೆದುಹಾಕಿತು. ಆನಂತರ ಸಂವಿಧಾನಕ್ಕೆ ತಿದ್ದುಪಡಿ ತಂದು, ರಾಜ್ಯ ಸರ್ಕಾರಗಳಿಗೆ ಈ ರೀತಿ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸ್ಮರಿಸಿದರು.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಂದಿರಾ ಸಹಾನಿ ಪ್ರಕರಣ ನೋಡುವುದಾದರೆ, ‘ಪ್ರವೇಶಾತಿಯಲ್ಲಿ ಮೀಸಲಾತಿ ಇರಬೇಕು, ಬಡ್ತಿಯಲ್ಲಿ ಮೀಸಲಾತಿ ಇರಬಾರದು’ ಎಂದು ಹೇಳಲಾಯಿತು. ಸಂವಿಧಾನದಲ್ಲಿ ಮೀಸಲಾತಿ ತಂದು ಬಡ್ತಿಯಲ್ಲೂ ಮೀಸಲಾತಿ ನೀಡಬಹುದು ಎನ್ನಲಾಯಿತು. ಒಳಮೀಸಲಾತಿ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಪರಿಶಿಷ್ಟರ ಆಗ್ರಹವನ್ನು ಒಪ್ಪಿತು. ಒಳಮೀಸಲಾತಿ ಜಾರಿಗೊಳಿಸಿತು. ಚಿನ್ನಯ್ಯ ಪ್ರಕರಣದಲ್ಲಿ ಇದನ್ನು ಸುಪ್ರೀಂಕೋರ್ಟ್ ತೆಗೆದುಹಾಕಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ತೀರ್ಪಿನಲ್ಲಿ, “ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರ‌ಗಳಿಗೆ ಇದೆ” ಎಂದು ಹೇಳಲಾಗಿದೆ. ಈ ರೀತಿಯ ವೈರುಧ್ಯಗಳನ್ನು ನೋಡಿದ್ದೇವೆ. ಈಗಲೂ ಕೂಡ ದೇಶದ ಜನ ತೀರ್ಪನ್ನು ಚರ್ಚೆಗೆ ಒಳಪಡಿಸಿ, ಜನಾಭಿಪ್ರಾಯ ರೂಪಿಸಿ ಒಂದು ದಾರಿಯನ್ನು ಕಂಡುಕೊಳ್ಳಬೇಕು ಎಂದು ಆಶಿಸಿದರು.

“ಮೀಸಲಾತಿ ಬೇರೆ, ಹಂಚಿಕೆ ಬೇರೆ. ಇದು ಹಂಚಿಕೆಯಾಗಬಾರದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಈ ಅವಕಾಶ ನೀಡಬೇಕು. ಇದು ಕೊನೆಯಿರದ ಸಮಸ್ಯೆಯಾಗಬಾರದು. ನಾವು ಆದಷ್ಟು ಬೇಗ ಈ ಅಸಮಾನತೆಯನ್ನು ತೊಲಗಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಆನಂತರದಲ್ಲಿ ಮೀಸಲಾತಿ ಎಂಬುದೇ ಇರಬಾರದು ಎನ್ನುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...