Homeಕರ್ನಾಟಕಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ನ್ಯಾಯಾಂಗ ಕಾಲಕಾಲಕ್ಕೆ ತನ್ನ ತಪ್ಪುಗಳನ್ನು ತಿದ್ದುಕೊಂಡ ಉದಾಹರಣೆಗಳಿವೆ ಎಂದು ಆಶಾವಾದ ವ್ಯಕ್ತಪಡಿಸುತ್ತಾರೆ ಜಸ್ಟೀಸ್‌ ಎಚ್‌.ಎನ್.ನಾಗಮೋಹನ ದಾಸ್.

- Advertisement -
- Advertisement -

“ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬ್ಲ್ಯೂಎಸ್‌) ಮೀಸಲಾತಿ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಕಾಲಕಾಲಕ್ಕೆ ನ್ಯಾಯಾಂಗ ತನ್ನ ತೀರ್ಪುಗಳನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಉದಾಹರಣೆಗೆ ತುರ್ತುಪರಿಸ್ಥಿತಿಯನ್ನು ಐದು ಜನರ ನ್ಯಾಯಮೂರ್ತಿಗಳ ಪೀಠ ಒಪ್ಪಿಕೊಂಡಿತ್ತು. ಐದು ಜನರಲ್ಲಿ ನಾಲ್ಕು ನ್ಯಾಯಾಧೀಶರು ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದರು. ಆನಂತರದ ತೀರ್ಪುಗಳಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಈಗ ಕೊಟ್ಟಿರುವ ತೀರ್ಪು ಅಂತಿಮವಲ್ಲ” ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಡಬ್ಲ್ಯೂಎಸ್‌ಗೆ ಸಂಬಂಧಿಸಿದಂತೆ ಐದು ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ. ಸಂವಿಧಾನ 103ನೇ ತಿದ್ದುಪಡಿ ಸರಿ ಇದೆ ಎಂದು ಮೂವರು ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದರೆ, ಇನ್ನಿಬ್ಬರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ನ್ಯಾಯಾಂಗದ ತೀರ್ಪಿಗೆ ಬದ್ಧರಾಗಿರಬೇಕು. ಆದರೆ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಾಂಗದ ತೀರ್ಪುಗಳನ್ನು ವಿಮರ್ಶೆ ಮಾಡುವ ಹಕ್ಕಿದೆ. ಈ ವಿಮರ್ಶೆಗಳು ರಚನಾತ್ಮಕವಾಗಿರಬೇಕು, ಆರೋಗ್ಯಕರವಾಗಿರಬೇಕು. ಜನಸಾಮಾನ್ಯರು ನ್ಯಾಯಾಂಗದ ಮೇಲೆ ಇಟ್ಟಿರುವ  ನಂಬಿಕೆಯನ್ನು ಹಾಳುಗೆಡುವಂತೆ ವಿಮರ್ಶೆಗಳು ಇರಬಾರದು. ನ್ಯಾಯಮೂರ್ತಿಗಳನ್ನು ವೈಯಕ್ತಿಕವಾಗಿ ಅವಹೇಳನ ಮಾಡಬಾರದು” ಎಂದು ಎಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ನಮ್ಮ ಸಂವಿಧಾನ ಹೇಳುತ್ತದೆ. ಆರ್ಥಿಕ ಮಾನದಂಡ ಮುಖ್ಯವಾಗಿರಲಿಲ್ಲ. ಈ ಹಿಂದೆ ನೀಡಿದ ತೀರ್ಪುಗಳು ಕೂಡ ಸಂವಿಧಾನದ ಚೌಕಟ್ಟಿನಲ್ಲಿಯೇ ಬಂದಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಎಂಬುದು ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಹೇಳಿದಂತೆ ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ. ಈ ಆಯಾಮ ಎಲ್ಲೋ ಹಳಿ ತಪ್ಪಿದಂತೆ ಕಾಣುತ್ತಿದೆ.  ಹೀಗಾಗಿ ಈ ತೀರ್ಪಿನ ಕುರಿತು ರಚನಾತ್ಮಕ ಹಾಗೂ ಆರೋಗ್ಯಕರ ವಿಮರ್ಶೆ ಅಗತ್ಯವಿದೆ ಎಂದರು.

ಈ ರೀತಿಯ ಸಮಸ್ಯೆಗಳು ಈ ಹಿಂದೆ ಬಂದಾಗ ನ್ಯಾಯಾಂಗ ತಿದ್ದುಕೊಂಡು ಹೋದ ಉದಾಹರಣೆಗಳಿವೆ. ನ್ಯಾಯಾಂಗ ತಪ್ಪು ಮಾಡಿಲ್ಲವೆಂದು ಹೇಳಲಾಗದು. 1948ರಲ್ಲಿ ಮದ್ರಾಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತರಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ಒದಗಿಸಿತ್ತು. ಚಂಪಕಂ ದೊರೈರಾಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆ ಮೀಸಲಾತಿಯನ್ನು ತೆಗೆದುಹಾಕಿತು. ಆನಂತರ ಸಂವಿಧಾನಕ್ಕೆ ತಿದ್ದುಪಡಿ ತಂದು, ರಾಜ್ಯ ಸರ್ಕಾರಗಳಿಗೆ ಈ ರೀತಿ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸ್ಮರಿಸಿದರು.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಂದಿರಾ ಸಹಾನಿ ಪ್ರಕರಣ ನೋಡುವುದಾದರೆ, ‘ಪ್ರವೇಶಾತಿಯಲ್ಲಿ ಮೀಸಲಾತಿ ಇರಬೇಕು, ಬಡ್ತಿಯಲ್ಲಿ ಮೀಸಲಾತಿ ಇರಬಾರದು’ ಎಂದು ಹೇಳಲಾಯಿತು. ಸಂವಿಧಾನದಲ್ಲಿ ಮೀಸಲಾತಿ ತಂದು ಬಡ್ತಿಯಲ್ಲೂ ಮೀಸಲಾತಿ ನೀಡಬಹುದು ಎನ್ನಲಾಯಿತು. ಒಳಮೀಸಲಾತಿ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಪರಿಶಿಷ್ಟರ ಆಗ್ರಹವನ್ನು ಒಪ್ಪಿತು. ಒಳಮೀಸಲಾತಿ ಜಾರಿಗೊಳಿಸಿತು. ಚಿನ್ನಯ್ಯ ಪ್ರಕರಣದಲ್ಲಿ ಇದನ್ನು ಸುಪ್ರೀಂಕೋರ್ಟ್ ತೆಗೆದುಹಾಕಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ತೀರ್ಪಿನಲ್ಲಿ, “ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರ‌ಗಳಿಗೆ ಇದೆ” ಎಂದು ಹೇಳಲಾಗಿದೆ. ಈ ರೀತಿಯ ವೈರುಧ್ಯಗಳನ್ನು ನೋಡಿದ್ದೇವೆ. ಈಗಲೂ ಕೂಡ ದೇಶದ ಜನ ತೀರ್ಪನ್ನು ಚರ್ಚೆಗೆ ಒಳಪಡಿಸಿ, ಜನಾಭಿಪ್ರಾಯ ರೂಪಿಸಿ ಒಂದು ದಾರಿಯನ್ನು ಕಂಡುಕೊಳ್ಳಬೇಕು ಎಂದು ಆಶಿಸಿದರು.

“ಮೀಸಲಾತಿ ಬೇರೆ, ಹಂಚಿಕೆ ಬೇರೆ. ಇದು ಹಂಚಿಕೆಯಾಗಬಾರದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಈ ಅವಕಾಶ ನೀಡಬೇಕು. ಇದು ಕೊನೆಯಿರದ ಸಮಸ್ಯೆಯಾಗಬಾರದು. ನಾವು ಆದಷ್ಟು ಬೇಗ ಈ ಅಸಮಾನತೆಯನ್ನು ತೊಲಗಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಆನಂತರದಲ್ಲಿ ಮೀಸಲಾತಿ ಎಂಬುದೇ ಇರಬಾರದು ಎನ್ನುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...