Homeಕರ್ನಾಟಕಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ನ್ಯಾಯಾಂಗ ಕಾಲಕಾಲಕ್ಕೆ ತನ್ನ ತಪ್ಪುಗಳನ್ನು ತಿದ್ದುಕೊಂಡ ಉದಾಹರಣೆಗಳಿವೆ ಎಂದು ಆಶಾವಾದ ವ್ಯಕ್ತಪಡಿಸುತ್ತಾರೆ ಜಸ್ಟೀಸ್‌ ಎಚ್‌.ಎನ್.ನಾಗಮೋಹನ ದಾಸ್.

- Advertisement -
- Advertisement -

“ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬ್ಲ್ಯೂಎಸ್‌) ಮೀಸಲಾತಿ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಕಾಲಕಾಲಕ್ಕೆ ನ್ಯಾಯಾಂಗ ತನ್ನ ತೀರ್ಪುಗಳನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಉದಾಹರಣೆಗೆ ತುರ್ತುಪರಿಸ್ಥಿತಿಯನ್ನು ಐದು ಜನರ ನ್ಯಾಯಮೂರ್ತಿಗಳ ಪೀಠ ಒಪ್ಪಿಕೊಂಡಿತ್ತು. ಐದು ಜನರಲ್ಲಿ ನಾಲ್ಕು ನ್ಯಾಯಾಧೀಶರು ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದರು. ಆನಂತರದ ತೀರ್ಪುಗಳಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಈಗ ಕೊಟ್ಟಿರುವ ತೀರ್ಪು ಅಂತಿಮವಲ್ಲ” ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಡಬ್ಲ್ಯೂಎಸ್‌ಗೆ ಸಂಬಂಧಿಸಿದಂತೆ ಐದು ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ. ಸಂವಿಧಾನ 103ನೇ ತಿದ್ದುಪಡಿ ಸರಿ ಇದೆ ಎಂದು ಮೂವರು ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದರೆ, ಇನ್ನಿಬ್ಬರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ನ್ಯಾಯಾಂಗದ ತೀರ್ಪಿಗೆ ಬದ್ಧರಾಗಿರಬೇಕು. ಆದರೆ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಾಂಗದ ತೀರ್ಪುಗಳನ್ನು ವಿಮರ್ಶೆ ಮಾಡುವ ಹಕ್ಕಿದೆ. ಈ ವಿಮರ್ಶೆಗಳು ರಚನಾತ್ಮಕವಾಗಿರಬೇಕು, ಆರೋಗ್ಯಕರವಾಗಿರಬೇಕು. ಜನಸಾಮಾನ್ಯರು ನ್ಯಾಯಾಂಗದ ಮೇಲೆ ಇಟ್ಟಿರುವ  ನಂಬಿಕೆಯನ್ನು ಹಾಳುಗೆಡುವಂತೆ ವಿಮರ್ಶೆಗಳು ಇರಬಾರದು. ನ್ಯಾಯಮೂರ್ತಿಗಳನ್ನು ವೈಯಕ್ತಿಕವಾಗಿ ಅವಹೇಳನ ಮಾಡಬಾರದು” ಎಂದು ಎಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ನಮ್ಮ ಸಂವಿಧಾನ ಹೇಳುತ್ತದೆ. ಆರ್ಥಿಕ ಮಾನದಂಡ ಮುಖ್ಯವಾಗಿರಲಿಲ್ಲ. ಈ ಹಿಂದೆ ನೀಡಿದ ತೀರ್ಪುಗಳು ಕೂಡ ಸಂವಿಧಾನದ ಚೌಕಟ್ಟಿನಲ್ಲಿಯೇ ಬಂದಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಎಂಬುದು ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಹೇಳಿದಂತೆ ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ. ಈ ಆಯಾಮ ಎಲ್ಲೋ ಹಳಿ ತಪ್ಪಿದಂತೆ ಕಾಣುತ್ತಿದೆ.  ಹೀಗಾಗಿ ಈ ತೀರ್ಪಿನ ಕುರಿತು ರಚನಾತ್ಮಕ ಹಾಗೂ ಆರೋಗ್ಯಕರ ವಿಮರ್ಶೆ ಅಗತ್ಯವಿದೆ ಎಂದರು.

ಈ ರೀತಿಯ ಸಮಸ್ಯೆಗಳು ಈ ಹಿಂದೆ ಬಂದಾಗ ನ್ಯಾಯಾಂಗ ತಿದ್ದುಕೊಂಡು ಹೋದ ಉದಾಹರಣೆಗಳಿವೆ. ನ್ಯಾಯಾಂಗ ತಪ್ಪು ಮಾಡಿಲ್ಲವೆಂದು ಹೇಳಲಾಗದು. 1948ರಲ್ಲಿ ಮದ್ರಾಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತರಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ಒದಗಿಸಿತ್ತು. ಚಂಪಕಂ ದೊರೈರಾಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆ ಮೀಸಲಾತಿಯನ್ನು ತೆಗೆದುಹಾಕಿತು. ಆನಂತರ ಸಂವಿಧಾನಕ್ಕೆ ತಿದ್ದುಪಡಿ ತಂದು, ರಾಜ್ಯ ಸರ್ಕಾರಗಳಿಗೆ ಈ ರೀತಿ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸ್ಮರಿಸಿದರು.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಂದಿರಾ ಸಹಾನಿ ಪ್ರಕರಣ ನೋಡುವುದಾದರೆ, ‘ಪ್ರವೇಶಾತಿಯಲ್ಲಿ ಮೀಸಲಾತಿ ಇರಬೇಕು, ಬಡ್ತಿಯಲ್ಲಿ ಮೀಸಲಾತಿ ಇರಬಾರದು’ ಎಂದು ಹೇಳಲಾಯಿತು. ಸಂವಿಧಾನದಲ್ಲಿ ಮೀಸಲಾತಿ ತಂದು ಬಡ್ತಿಯಲ್ಲೂ ಮೀಸಲಾತಿ ನೀಡಬಹುದು ಎನ್ನಲಾಯಿತು. ಒಳಮೀಸಲಾತಿ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಪರಿಶಿಷ್ಟರ ಆಗ್ರಹವನ್ನು ಒಪ್ಪಿತು. ಒಳಮೀಸಲಾತಿ ಜಾರಿಗೊಳಿಸಿತು. ಚಿನ್ನಯ್ಯ ಪ್ರಕರಣದಲ್ಲಿ ಇದನ್ನು ಸುಪ್ರೀಂಕೋರ್ಟ್ ತೆಗೆದುಹಾಕಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ತೀರ್ಪಿನಲ್ಲಿ, “ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರ‌ಗಳಿಗೆ ಇದೆ” ಎಂದು ಹೇಳಲಾಗಿದೆ. ಈ ರೀತಿಯ ವೈರುಧ್ಯಗಳನ್ನು ನೋಡಿದ್ದೇವೆ. ಈಗಲೂ ಕೂಡ ದೇಶದ ಜನ ತೀರ್ಪನ್ನು ಚರ್ಚೆಗೆ ಒಳಪಡಿಸಿ, ಜನಾಭಿಪ್ರಾಯ ರೂಪಿಸಿ ಒಂದು ದಾರಿಯನ್ನು ಕಂಡುಕೊಳ್ಳಬೇಕು ಎಂದು ಆಶಿಸಿದರು.

“ಮೀಸಲಾತಿ ಬೇರೆ, ಹಂಚಿಕೆ ಬೇರೆ. ಇದು ಹಂಚಿಕೆಯಾಗಬಾರದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಈ ಅವಕಾಶ ನೀಡಬೇಕು. ಇದು ಕೊನೆಯಿರದ ಸಮಸ್ಯೆಯಾಗಬಾರದು. ನಾವು ಆದಷ್ಟು ಬೇಗ ಈ ಅಸಮಾನತೆಯನ್ನು ತೊಲಗಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಆನಂತರದಲ್ಲಿ ಮೀಸಲಾತಿ ಎಂಬುದೇ ಇರಬಾರದು ಎನ್ನುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...