Homeಕರ್ನಾಟಕಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ನ್ಯಾಯಾಂಗ ಕಾಲಕಾಲಕ್ಕೆ ತನ್ನ ತಪ್ಪುಗಳನ್ನು ತಿದ್ದುಕೊಂಡ ಉದಾಹರಣೆಗಳಿವೆ ಎಂದು ಆಶಾವಾದ ವ್ಯಕ್ತಪಡಿಸುತ್ತಾರೆ ಜಸ್ಟೀಸ್‌ ಎಚ್‌.ಎನ್.ನಾಗಮೋಹನ ದಾಸ್.

- Advertisement -
- Advertisement -

“ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬ್ಲ್ಯೂಎಸ್‌) ಮೀಸಲಾತಿ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಕಾಲಕಾಲಕ್ಕೆ ನ್ಯಾಯಾಂಗ ತನ್ನ ತೀರ್ಪುಗಳನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಉದಾಹರಣೆಗೆ ತುರ್ತುಪರಿಸ್ಥಿತಿಯನ್ನು ಐದು ಜನರ ನ್ಯಾಯಮೂರ್ತಿಗಳ ಪೀಠ ಒಪ್ಪಿಕೊಂಡಿತ್ತು. ಐದು ಜನರಲ್ಲಿ ನಾಲ್ಕು ನ್ಯಾಯಾಧೀಶರು ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದರು. ಆನಂತರದ ತೀರ್ಪುಗಳಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಈಗ ಕೊಟ್ಟಿರುವ ತೀರ್ಪು ಅಂತಿಮವಲ್ಲ” ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಡಬ್ಲ್ಯೂಎಸ್‌ಗೆ ಸಂಬಂಧಿಸಿದಂತೆ ಐದು ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ. ಸಂವಿಧಾನ 103ನೇ ತಿದ್ದುಪಡಿ ಸರಿ ಇದೆ ಎಂದು ಮೂವರು ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದರೆ, ಇನ್ನಿಬ್ಬರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ನ್ಯಾಯಾಂಗದ ತೀರ್ಪಿಗೆ ಬದ್ಧರಾಗಿರಬೇಕು. ಆದರೆ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಾಂಗದ ತೀರ್ಪುಗಳನ್ನು ವಿಮರ್ಶೆ ಮಾಡುವ ಹಕ್ಕಿದೆ. ಈ ವಿಮರ್ಶೆಗಳು ರಚನಾತ್ಮಕವಾಗಿರಬೇಕು, ಆರೋಗ್ಯಕರವಾಗಿರಬೇಕು. ಜನಸಾಮಾನ್ಯರು ನ್ಯಾಯಾಂಗದ ಮೇಲೆ ಇಟ್ಟಿರುವ  ನಂಬಿಕೆಯನ್ನು ಹಾಳುಗೆಡುವಂತೆ ವಿಮರ್ಶೆಗಳು ಇರಬಾರದು. ನ್ಯಾಯಮೂರ್ತಿಗಳನ್ನು ವೈಯಕ್ತಿಕವಾಗಿ ಅವಹೇಳನ ಮಾಡಬಾರದು” ಎಂದು ಎಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ನಮ್ಮ ಸಂವಿಧಾನ ಹೇಳುತ್ತದೆ. ಆರ್ಥಿಕ ಮಾನದಂಡ ಮುಖ್ಯವಾಗಿರಲಿಲ್ಲ. ಈ ಹಿಂದೆ ನೀಡಿದ ತೀರ್ಪುಗಳು ಕೂಡ ಸಂವಿಧಾನದ ಚೌಕಟ್ಟಿನಲ್ಲಿಯೇ ಬಂದಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಎಂಬುದು ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಹೇಳಿದಂತೆ ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ. ಈ ಆಯಾಮ ಎಲ್ಲೋ ಹಳಿ ತಪ್ಪಿದಂತೆ ಕಾಣುತ್ತಿದೆ.  ಹೀಗಾಗಿ ಈ ತೀರ್ಪಿನ ಕುರಿತು ರಚನಾತ್ಮಕ ಹಾಗೂ ಆರೋಗ್ಯಕರ ವಿಮರ್ಶೆ ಅಗತ್ಯವಿದೆ ಎಂದರು.

ಈ ರೀತಿಯ ಸಮಸ್ಯೆಗಳು ಈ ಹಿಂದೆ ಬಂದಾಗ ನ್ಯಾಯಾಂಗ ತಿದ್ದುಕೊಂಡು ಹೋದ ಉದಾಹರಣೆಗಳಿವೆ. ನ್ಯಾಯಾಂಗ ತಪ್ಪು ಮಾಡಿಲ್ಲವೆಂದು ಹೇಳಲಾಗದು. 1948ರಲ್ಲಿ ಮದ್ರಾಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತರಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ಒದಗಿಸಿತ್ತು. ಚಂಪಕಂ ದೊರೈರಾಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆ ಮೀಸಲಾತಿಯನ್ನು ತೆಗೆದುಹಾಕಿತು. ಆನಂತರ ಸಂವಿಧಾನಕ್ಕೆ ತಿದ್ದುಪಡಿ ತಂದು, ರಾಜ್ಯ ಸರ್ಕಾರಗಳಿಗೆ ಈ ರೀತಿ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸ್ಮರಿಸಿದರು.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಂದಿರಾ ಸಹಾನಿ ಪ್ರಕರಣ ನೋಡುವುದಾದರೆ, ‘ಪ್ರವೇಶಾತಿಯಲ್ಲಿ ಮೀಸಲಾತಿ ಇರಬೇಕು, ಬಡ್ತಿಯಲ್ಲಿ ಮೀಸಲಾತಿ ಇರಬಾರದು’ ಎಂದು ಹೇಳಲಾಯಿತು. ಸಂವಿಧಾನದಲ್ಲಿ ಮೀಸಲಾತಿ ತಂದು ಬಡ್ತಿಯಲ್ಲೂ ಮೀಸಲಾತಿ ನೀಡಬಹುದು ಎನ್ನಲಾಯಿತು. ಒಳಮೀಸಲಾತಿ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಪರಿಶಿಷ್ಟರ ಆಗ್ರಹವನ್ನು ಒಪ್ಪಿತು. ಒಳಮೀಸಲಾತಿ ಜಾರಿಗೊಳಿಸಿತು. ಚಿನ್ನಯ್ಯ ಪ್ರಕರಣದಲ್ಲಿ ಇದನ್ನು ಸುಪ್ರೀಂಕೋರ್ಟ್ ತೆಗೆದುಹಾಕಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ತೀರ್ಪಿನಲ್ಲಿ, “ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರ‌ಗಳಿಗೆ ಇದೆ” ಎಂದು ಹೇಳಲಾಗಿದೆ. ಈ ರೀತಿಯ ವೈರುಧ್ಯಗಳನ್ನು ನೋಡಿದ್ದೇವೆ. ಈಗಲೂ ಕೂಡ ದೇಶದ ಜನ ತೀರ್ಪನ್ನು ಚರ್ಚೆಗೆ ಒಳಪಡಿಸಿ, ಜನಾಭಿಪ್ರಾಯ ರೂಪಿಸಿ ಒಂದು ದಾರಿಯನ್ನು ಕಂಡುಕೊಳ್ಳಬೇಕು ಎಂದು ಆಶಿಸಿದರು.

“ಮೀಸಲಾತಿ ಬೇರೆ, ಹಂಚಿಕೆ ಬೇರೆ. ಇದು ಹಂಚಿಕೆಯಾಗಬಾರದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಈ ಅವಕಾಶ ನೀಡಬೇಕು. ಇದು ಕೊನೆಯಿರದ ಸಮಸ್ಯೆಯಾಗಬಾರದು. ನಾವು ಆದಷ್ಟು ಬೇಗ ಈ ಅಸಮಾನತೆಯನ್ನು ತೊಲಗಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಆನಂತರದಲ್ಲಿ ಮೀಸಲಾತಿ ಎಂಬುದೇ ಇರಬಾರದು ಎನ್ನುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...