Homeಕರ್ನಾಟಕಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ನ್ಯಾಯಾಂಗ ಕಾಲಕಾಲಕ್ಕೆ ತನ್ನ ತಪ್ಪುಗಳನ್ನು ತಿದ್ದುಕೊಂಡ ಉದಾಹರಣೆಗಳಿವೆ ಎಂದು ಆಶಾವಾದ ವ್ಯಕ್ತಪಡಿಸುತ್ತಾರೆ ಜಸ್ಟೀಸ್‌ ಎಚ್‌.ಎನ್.ನಾಗಮೋಹನ ದಾಸ್.

- Advertisement -
- Advertisement -

“ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬ್ಲ್ಯೂಎಸ್‌) ಮೀಸಲಾತಿ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಕಾಲಕಾಲಕ್ಕೆ ನ್ಯಾಯಾಂಗ ತನ್ನ ತೀರ್ಪುಗಳನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಉದಾಹರಣೆಗೆ ತುರ್ತುಪರಿಸ್ಥಿತಿಯನ್ನು ಐದು ಜನರ ನ್ಯಾಯಮೂರ್ತಿಗಳ ಪೀಠ ಒಪ್ಪಿಕೊಂಡಿತ್ತು. ಐದು ಜನರಲ್ಲಿ ನಾಲ್ಕು ನ್ಯಾಯಾಧೀಶರು ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದರು. ಆನಂತರದ ತೀರ್ಪುಗಳಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಈಗ ಕೊಟ್ಟಿರುವ ತೀರ್ಪು ಅಂತಿಮವಲ್ಲ” ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಡಬ್ಲ್ಯೂಎಸ್‌ಗೆ ಸಂಬಂಧಿಸಿದಂತೆ ಐದು ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ. ಸಂವಿಧಾನ 103ನೇ ತಿದ್ದುಪಡಿ ಸರಿ ಇದೆ ಎಂದು ಮೂವರು ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದರೆ, ಇನ್ನಿಬ್ಬರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ನ್ಯಾಯಾಂಗದ ತೀರ್ಪಿಗೆ ಬದ್ಧರಾಗಿರಬೇಕು. ಆದರೆ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಾಂಗದ ತೀರ್ಪುಗಳನ್ನು ವಿಮರ್ಶೆ ಮಾಡುವ ಹಕ್ಕಿದೆ. ಈ ವಿಮರ್ಶೆಗಳು ರಚನಾತ್ಮಕವಾಗಿರಬೇಕು, ಆರೋಗ್ಯಕರವಾಗಿರಬೇಕು. ಜನಸಾಮಾನ್ಯರು ನ್ಯಾಯಾಂಗದ ಮೇಲೆ ಇಟ್ಟಿರುವ  ನಂಬಿಕೆಯನ್ನು ಹಾಳುಗೆಡುವಂತೆ ವಿಮರ್ಶೆಗಳು ಇರಬಾರದು. ನ್ಯಾಯಮೂರ್ತಿಗಳನ್ನು ವೈಯಕ್ತಿಕವಾಗಿ ಅವಹೇಳನ ಮಾಡಬಾರದು” ಎಂದು ಎಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ನಮ್ಮ ಸಂವಿಧಾನ ಹೇಳುತ್ತದೆ. ಆರ್ಥಿಕ ಮಾನದಂಡ ಮುಖ್ಯವಾಗಿರಲಿಲ್ಲ. ಈ ಹಿಂದೆ ನೀಡಿದ ತೀರ್ಪುಗಳು ಕೂಡ ಸಂವಿಧಾನದ ಚೌಕಟ್ಟಿನಲ್ಲಿಯೇ ಬಂದಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಎಂಬುದು ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಹೇಳಿದಂತೆ ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ. ಈ ಆಯಾಮ ಎಲ್ಲೋ ಹಳಿ ತಪ್ಪಿದಂತೆ ಕಾಣುತ್ತಿದೆ.  ಹೀಗಾಗಿ ಈ ತೀರ್ಪಿನ ಕುರಿತು ರಚನಾತ್ಮಕ ಹಾಗೂ ಆರೋಗ್ಯಕರ ವಿಮರ್ಶೆ ಅಗತ್ಯವಿದೆ ಎಂದರು.

ಈ ರೀತಿಯ ಸಮಸ್ಯೆಗಳು ಈ ಹಿಂದೆ ಬಂದಾಗ ನ್ಯಾಯಾಂಗ ತಿದ್ದುಕೊಂಡು ಹೋದ ಉದಾಹರಣೆಗಳಿವೆ. ನ್ಯಾಯಾಂಗ ತಪ್ಪು ಮಾಡಿಲ್ಲವೆಂದು ಹೇಳಲಾಗದು. 1948ರಲ್ಲಿ ಮದ್ರಾಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತರಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ಒದಗಿಸಿತ್ತು. ಚಂಪಕಂ ದೊರೈರಾಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆ ಮೀಸಲಾತಿಯನ್ನು ತೆಗೆದುಹಾಕಿತು. ಆನಂತರ ಸಂವಿಧಾನಕ್ಕೆ ತಿದ್ದುಪಡಿ ತಂದು, ರಾಜ್ಯ ಸರ್ಕಾರಗಳಿಗೆ ಈ ರೀತಿ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸ್ಮರಿಸಿದರು.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಂದಿರಾ ಸಹಾನಿ ಪ್ರಕರಣ ನೋಡುವುದಾದರೆ, ‘ಪ್ರವೇಶಾತಿಯಲ್ಲಿ ಮೀಸಲಾತಿ ಇರಬೇಕು, ಬಡ್ತಿಯಲ್ಲಿ ಮೀಸಲಾತಿ ಇರಬಾರದು’ ಎಂದು ಹೇಳಲಾಯಿತು. ಸಂವಿಧಾನದಲ್ಲಿ ಮೀಸಲಾತಿ ತಂದು ಬಡ್ತಿಯಲ್ಲೂ ಮೀಸಲಾತಿ ನೀಡಬಹುದು ಎನ್ನಲಾಯಿತು. ಒಳಮೀಸಲಾತಿ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಪರಿಶಿಷ್ಟರ ಆಗ್ರಹವನ್ನು ಒಪ್ಪಿತು. ಒಳಮೀಸಲಾತಿ ಜಾರಿಗೊಳಿಸಿತು. ಚಿನ್ನಯ್ಯ ಪ್ರಕರಣದಲ್ಲಿ ಇದನ್ನು ಸುಪ್ರೀಂಕೋರ್ಟ್ ತೆಗೆದುಹಾಕಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ತೀರ್ಪಿನಲ್ಲಿ, “ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರ‌ಗಳಿಗೆ ಇದೆ” ಎಂದು ಹೇಳಲಾಗಿದೆ. ಈ ರೀತಿಯ ವೈರುಧ್ಯಗಳನ್ನು ನೋಡಿದ್ದೇವೆ. ಈಗಲೂ ಕೂಡ ದೇಶದ ಜನ ತೀರ್ಪನ್ನು ಚರ್ಚೆಗೆ ಒಳಪಡಿಸಿ, ಜನಾಭಿಪ್ರಾಯ ರೂಪಿಸಿ ಒಂದು ದಾರಿಯನ್ನು ಕಂಡುಕೊಳ್ಳಬೇಕು ಎಂದು ಆಶಿಸಿದರು.

“ಮೀಸಲಾತಿ ಬೇರೆ, ಹಂಚಿಕೆ ಬೇರೆ. ಇದು ಹಂಚಿಕೆಯಾಗಬಾರದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಈ ಅವಕಾಶ ನೀಡಬೇಕು. ಇದು ಕೊನೆಯಿರದ ಸಮಸ್ಯೆಯಾಗಬಾರದು. ನಾವು ಆದಷ್ಟು ಬೇಗ ಈ ಅಸಮಾನತೆಯನ್ನು ತೊಲಗಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಆನಂತರದಲ್ಲಿ ಮೀಸಲಾತಿ ಎಂಬುದೇ ಇರಬಾರದು ಎನ್ನುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...