Homeಕರ್ನಾಟಕಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ನ್ಯಾಯಾಂಗ ಕಾಲಕಾಲಕ್ಕೆ ತನ್ನ ತಪ್ಪುಗಳನ್ನು ತಿದ್ದುಕೊಂಡ ಉದಾಹರಣೆಗಳಿವೆ ಎಂದು ಆಶಾವಾದ ವ್ಯಕ್ತಪಡಿಸುತ್ತಾರೆ ಜಸ್ಟೀಸ್‌ ಎಚ್‌.ಎನ್.ನಾಗಮೋಹನ ದಾಸ್.

- Advertisement -
- Advertisement -

“ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬ್ಲ್ಯೂಎಸ್‌) ಮೀಸಲಾತಿ ಸಂವಿಧಾನ ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ” ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ತಿಳಿಸಿದ್ದಾರೆ.

ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಕಾಲಕಾಲಕ್ಕೆ ನ್ಯಾಯಾಂಗ ತನ್ನ ತೀರ್ಪುಗಳನ್ನು ಬದಲಿಸಿಕೊಂಡ ಉದಾಹರಣೆಗಳಿವೆ. ಉದಾಹರಣೆಗೆ ತುರ್ತುಪರಿಸ್ಥಿತಿಯನ್ನು ಐದು ಜನರ ನ್ಯಾಯಮೂರ್ತಿಗಳ ಪೀಠ ಒಪ್ಪಿಕೊಂಡಿತ್ತು. ಐದು ಜನರಲ್ಲಿ ನಾಲ್ಕು ನ್ಯಾಯಾಧೀಶರು ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಂಡಿದ್ದರು. ಆನಂತರದ ತೀರ್ಪುಗಳಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹೀಗಾಗಿ ಈಗ ಕೊಟ್ಟಿರುವ ತೀರ್ಪು ಅಂತಿಮವಲ್ಲ” ಎಂದು ಅಭಿಪ್ರಾಯಪಟ್ಟರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಡಬ್ಲ್ಯೂಎಸ್‌ಗೆ ಸಂಬಂಧಿಸಿದಂತೆ ಐದು ನ್ಯಾಯಮೂರ್ತಿಗಳ ಪೀಠವು ತೀರ್ಪು ನೀಡಿದೆ. ಸಂವಿಧಾನ 103ನೇ ತಿದ್ದುಪಡಿ ಸರಿ ಇದೆ ಎಂದು ಮೂವರು ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದರೆ, ಇನ್ನಿಬ್ಬರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವು ನ್ಯಾಯಾಂಗದ ತೀರ್ಪಿಗೆ ಬದ್ಧರಾಗಿರಬೇಕು. ಆದರೆ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯಾಂಗದ ತೀರ್ಪುಗಳನ್ನು ವಿಮರ್ಶೆ ಮಾಡುವ ಹಕ್ಕಿದೆ. ಈ ವಿಮರ್ಶೆಗಳು ರಚನಾತ್ಮಕವಾಗಿರಬೇಕು, ಆರೋಗ್ಯಕರವಾಗಿರಬೇಕು. ಜನಸಾಮಾನ್ಯರು ನ್ಯಾಯಾಂಗದ ಮೇಲೆ ಇಟ್ಟಿರುವ  ನಂಬಿಕೆಯನ್ನು ಹಾಳುಗೆಡುವಂತೆ ವಿಮರ್ಶೆಗಳು ಇರಬಾರದು. ನ್ಯಾಯಮೂರ್ತಿಗಳನ್ನು ವೈಯಕ್ತಿಕವಾಗಿ ಅವಹೇಳನ ಮಾಡಬಾರದು” ಎಂದು ಎಚ್ಚರಿಸಿದರು.

“ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಎಂದು ನಮ್ಮ ಸಂವಿಧಾನ ಹೇಳುತ್ತದೆ. ಆರ್ಥಿಕ ಮಾನದಂಡ ಮುಖ್ಯವಾಗಿರಲಿಲ್ಲ. ಈ ಹಿಂದೆ ನೀಡಿದ ತೀರ್ಪುಗಳು ಕೂಡ ಸಂವಿಧಾನದ ಚೌಕಟ್ಟಿನಲ್ಲಿಯೇ ಬಂದಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಎಂಬುದು ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಅನೇಕ ತೀರ್ಪುಗಳಲ್ಲಿ ಹೇಳಿದಂತೆ ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯವನ್ನು ನೀಡುವುದೇ ಮೀಸಲಾತಿ. ಈ ಆಯಾಮ ಎಲ್ಲೋ ಹಳಿ ತಪ್ಪಿದಂತೆ ಕಾಣುತ್ತಿದೆ.  ಹೀಗಾಗಿ ಈ ತೀರ್ಪಿನ ಕುರಿತು ರಚನಾತ್ಮಕ ಹಾಗೂ ಆರೋಗ್ಯಕರ ವಿಮರ್ಶೆ ಅಗತ್ಯವಿದೆ ಎಂದರು.

ಈ ರೀತಿಯ ಸಮಸ್ಯೆಗಳು ಈ ಹಿಂದೆ ಬಂದಾಗ ನ್ಯಾಯಾಂಗ ತಿದ್ದುಕೊಂಡು ಹೋದ ಉದಾಹರಣೆಗಳಿವೆ. ನ್ಯಾಯಾಂಗ ತಪ್ಪು ಮಾಡಿಲ್ಲವೆಂದು ಹೇಳಲಾಗದು. 1948ರಲ್ಲಿ ಮದ್ರಾಸ್ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತರಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಮೀಸಲಾತಿ ಒದಗಿಸಿತ್ತು. ಚಂಪಕಂ ದೊರೈರಾಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆ ಮೀಸಲಾತಿಯನ್ನು ತೆಗೆದುಹಾಕಿತು. ಆನಂತರ ಸಂವಿಧಾನಕ್ಕೆ ತಿದ್ದುಪಡಿ ತಂದು, ರಾಜ್ಯ ಸರ್ಕಾರಗಳಿಗೆ ಈ ರೀತಿ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಲಾಗಿತ್ತು ಎಂದು ಸ್ಮರಿಸಿದರು.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇಂದಿರಾ ಸಹಾನಿ ಪ್ರಕರಣ ನೋಡುವುದಾದರೆ, ‘ಪ್ರವೇಶಾತಿಯಲ್ಲಿ ಮೀಸಲಾತಿ ಇರಬೇಕು, ಬಡ್ತಿಯಲ್ಲಿ ಮೀಸಲಾತಿ ಇರಬಾರದು’ ಎಂದು ಹೇಳಲಾಯಿತು. ಸಂವಿಧಾನದಲ್ಲಿ ಮೀಸಲಾತಿ ತಂದು ಬಡ್ತಿಯಲ್ಲೂ ಮೀಸಲಾತಿ ನೀಡಬಹುದು ಎನ್ನಲಾಯಿತು. ಒಳಮೀಸಲಾತಿ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಪರಿಶಿಷ್ಟರ ಆಗ್ರಹವನ್ನು ಒಪ್ಪಿತು. ಒಳಮೀಸಲಾತಿ ಜಾರಿಗೊಳಿಸಿತು. ಚಿನ್ನಯ್ಯ ಪ್ರಕರಣದಲ್ಲಿ ಇದನ್ನು ಸುಪ್ರೀಂಕೋರ್ಟ್ ತೆಗೆದುಹಾಕಲಾಯಿತು. 2020ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ತೀರ್ಪಿನಲ್ಲಿ, “ಒಳಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರ‌ಗಳಿಗೆ ಇದೆ” ಎಂದು ಹೇಳಲಾಗಿದೆ. ಈ ರೀತಿಯ ವೈರುಧ್ಯಗಳನ್ನು ನೋಡಿದ್ದೇವೆ. ಈಗಲೂ ಕೂಡ ದೇಶದ ಜನ ತೀರ್ಪನ್ನು ಚರ್ಚೆಗೆ ಒಳಪಡಿಸಿ, ಜನಾಭಿಪ್ರಾಯ ರೂಪಿಸಿ ಒಂದು ದಾರಿಯನ್ನು ಕಂಡುಕೊಳ್ಳಬೇಕು ಎಂದು ಆಶಿಸಿದರು.

“ಮೀಸಲಾತಿ ಬೇರೆ, ಹಂಚಿಕೆ ಬೇರೆ. ಇದು ಹಂಚಿಕೆಯಾಗಬಾರದು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಈ ಅವಕಾಶ ನೀಡಬೇಕು. ಇದು ಕೊನೆಯಿರದ ಸಮಸ್ಯೆಯಾಗಬಾರದು. ನಾವು ಆದಷ್ಟು ಬೇಗ ಈ ಅಸಮಾನತೆಯನ್ನು ತೊಲಗಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಆನಂತರದಲ್ಲಿ ಮೀಸಲಾತಿ ಎಂಬುದೇ ಇರಬಾರದು ಎನ್ನುವಂತಾಗಬೇಕು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...